ETV Bharat / state

ಪವರ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು: ನಿಯಂತ್ರಿಸಲು ಪೊಲೀಸರ ಹರಸಾಹಸ!

ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪುನೀತ್ ರಾಜ್ ಕುಮಾರ್ ಆಗಮಿಸಿದ್ದರು. ಈ ವೇಳೆ ಅಪ್ಪು ನೋಡಲು ಅಭಿಮಾನಿಗಳು ಮುಗಿಬಿದ್ದರು.

author img

By

Published : Jan 15, 2021, 2:04 PM IST

actor-power-star-puneeth-raj-kumar-visit-to-hara-fair
ಪವರ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು: ನಿಯಂತ್ರಿಸಲು ಪೊಲೀಸರ ಹರಸಾಹಸ!

ದಾವಣಗೆರೆ: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಗರದ ಜಿಎಂಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.

ಪವರ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು: ನಿಯಂತ್ರಿಸಲು ಪೊಲೀಸರ ಹರಸಾಹಸ!

ಜಿಲ್ಲೆಯ ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪುನೀತ್, ​ಸಕ ಮುನಿರತ್ನ ಜೊತೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಬಂದಿಳಿದರು. ಅಪ್ಪು ನೋಡಲು ಬೆಳಗ್ಗೆಯೇ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಪವರ್ ಸ್ಟಾರ್ ಹೆಲಿಕಾಪ್ಟರ್​ನಿಂದ ಇಳಿದು ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ಹತ್ತಿರದಿಂದ ನೋಡಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಈ ವೇಳೆ ಅಭಿಮಾನಿಗಳನ್ನು‌ ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಮಾಧ್ಯಮದವರು ಮಾತನಾಡಿಸಲು ಯತ್ನಿಸಿದರೂ ಪುನೀತ್ ರಾಜ್ ಕುಮಾರ್ ಮಾತನಾಡದೇ ಹರಿಹರದ ಪಂಚಮಸಾಲಿ ಪೀಠಕ್ಕೆ ತೆರಳಿದರು.

ದಾವಣಗೆರೆ: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಗರದ ಜಿಎಂಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.

ಪವರ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು: ನಿಯಂತ್ರಿಸಲು ಪೊಲೀಸರ ಹರಸಾಹಸ!

ಜಿಲ್ಲೆಯ ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪುನೀತ್, ​ಸಕ ಮುನಿರತ್ನ ಜೊತೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಬಂದಿಳಿದರು. ಅಪ್ಪು ನೋಡಲು ಬೆಳಗ್ಗೆಯೇ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಪವರ್ ಸ್ಟಾರ್ ಹೆಲಿಕಾಪ್ಟರ್​ನಿಂದ ಇಳಿದು ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ಹತ್ತಿರದಿಂದ ನೋಡಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಈ ವೇಳೆ ಅಭಿಮಾನಿಗಳನ್ನು‌ ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಮಾಧ್ಯಮದವರು ಮಾತನಾಡಿಸಲು ಯತ್ನಿಸಿದರೂ ಪುನೀತ್ ರಾಜ್ ಕುಮಾರ್ ಮಾತನಾಡದೇ ಹರಿಹರದ ಪಂಚಮಸಾಲಿ ಪೀಠಕ್ಕೆ ತೆರಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.