ETV Bharat / state

ಮಧ್ಯಂತರ ಚುನಾವಣೆ ನಡೆದರೆ 150ಕ್ಕೂ ಹೆಚ್ಚು ಸ್ಥಾನ ಬಿಜೆಪಿ ತೆಕ್ಕೆಗೆ: ಕೋಟಾ ಶ್ರೀನಿವಾಸ್​​​ ಪೂಜಾರಿ - undefined

ಮಧ್ಯಂತರ ಚುನಾವಣೆ ಅನಿವಾರ್ಯವಾದರೆ ಬಿಜೆಪಿ 150ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸಿ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ಪ್ರವಾಸ, ಗ್ರಾಮ ವಾಸ್ತವ್ಯ ಬಿಟ್ಟು ಬರ, ನೀರಿನ ಸಮಸ್ಯೆ, ಗುಳೆಯಂತಹ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಎಂದು ಬಿಜೆಪಿ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಪೂಜಾರಿ
author img

By

Published : Jun 28, 2019, 5:27 PM IST

ದಾವಣಗೆರೆ: ಬಿಜೆಪಿಯು ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 171 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮತದಾರರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ. ಅನಿವಾರ್ಯವಾಗಿ ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ ಅಧಿಕಾರ ಹಿಡಿಯುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದರು.

ಈಗಾಗಲೇ ಮತದಾರರು 5 ವರ್ಷಗಳ ಕಾಲ ಇರಬೇಕು ಎಂದು ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. 1 ವರ್ಷಕ್ಕೆ ಚುನಾವಣೆ ನಡೆಯುವುದು ಸರಿಯಲ್ಲ. ಸಿಎಂ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ಘನತೆಗೆ ತಕ್ಕನಾಗಿ ಮಾತನಾಡಬೇಕು ಎಂದು ನೇರವಾಗಿಯೇ ಕುಟುಕಿದರು.

ಜನರ ಕಣ್ಣೊರೆಸುವ ತಂತ್ರವಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ರಾಜ್ಯದ ಜನ ಭೀಕರ ಬರ, ಗುಳೆ, ನೀರಿನ ಕೊರತೆಯಂತಹ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಮುಖ್ಯಮಂತ್ರಿಗಳು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ ಎಂದು ಮೂದಲಿಸಿದರು.

ದಾವಣಗೆರೆ: ಬಿಜೆಪಿಯು ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 171 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮತದಾರರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ. ಅನಿವಾರ್ಯವಾಗಿ ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ ಅಧಿಕಾರ ಹಿಡಿಯುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದರು.

ಈಗಾಗಲೇ ಮತದಾರರು 5 ವರ್ಷಗಳ ಕಾಲ ಇರಬೇಕು ಎಂದು ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. 1 ವರ್ಷಕ್ಕೆ ಚುನಾವಣೆ ನಡೆಯುವುದು ಸರಿಯಲ್ಲ. ಸಿಎಂ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ಘನತೆಗೆ ತಕ್ಕನಾಗಿ ಮಾತನಾಡಬೇಕು ಎಂದು ನೇರವಾಗಿಯೇ ಕುಟುಕಿದರು.

ಜನರ ಕಣ್ಣೊರೆಸುವ ತಂತ್ರವಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ರಾಜ್ಯದ ಜನ ಭೀಕರ ಬರ, ಗುಳೆ, ನೀರಿನ ಕೊರತೆಯಂತಹ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಮುಖ್ಯಮಂತ್ರಿಗಳು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ ಎಂದು ಮೂದಲಿಸಿದರು.

Intro:KN_DVG_01_28_KOTA SRINIVAS POOJARY_SCRIPT_7203307

REPORTER : YOGARAJA G. H.


ಬಿಜೆಪಿ ಮಧ್ಯಂತರ ಚುನಾವಣೆಗೆ ರೆಡಿ ಇಲ್ಲ - ಕೋಟ ಶ್ರೀನಿವಾಸ್ ಪೂಜಾರಿ

ದಾವಣಗೆರೆ : ರಾಜ್ಯ ಬಿಜೆಪಿಯು ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ವಿಧಾನ ಪರಿಷತ್
ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 171 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ. ಹಾಗಾಗಿ, ಎಲೆಕ್ಷನ್ ನಡೆದರೆ
ಬಿಜೆಪಿ ಅಧಿಕಾರಕ್ಕೆ ಬರಲಿದೆ. ಜನ ಐದು ವರ್ಷಗಳ ಕಾಲ ಇರಬೇಕು ಎಂದು ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಒಂದು ವರ್ಷಕ್ಕೆ ಚುನಾವಣೆ ನಡೆಯುವುದು ಸರಿಯಲ್ಲ ಎಂಬ
ಅಭಿಪ್ರಾಯ ವ್ಯಕ್ತಪಡಿಸಿದರು.

ನಾವು ಕೆಲಸ ಮಾಡ್ತೇವೆ, ಆದ್ರೆ, ವೋಟ್ ಮಾತ್ರ ಬಿಜೆಪಿ ಹಾಕ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ
ವಿರುದ್ಧ ಹರಿಹಾಯ್ದ ಅವರು, ಇಂಥ ಹೇಳಿಕೆ ನೀಡುವುದು ಬೇಜವಾಬ್ದಾರಿಯ ಪರಮಾವಾಧಿ ಮತ್ತು ಅವರ ಘನತೆಗೆ ಕ್ಷೋಭೆ ತರುವಂಥದ್ದಲ್ಲ. ಹತಾಶೆಯ ಕಟ್ಟ ಕಡೆಯ ಮಾತು. ಜನರು
ನಿರ್ಲಕ್ಷ್ಯ ಮಾಡಿದ್ದು ಗೊತ್ತಾದಾಗ ಅಧಿಕಾರದಲ್ಲಿರುವುದು ಸರಿಯಲ್ಲ ಎಂಬುದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಅನಿಸಿದೆ ಎಂದು ಕಿಡಿಕಾರಿದರು.

ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಉಪಯೋಗವೂ ಇಲ್ಲ ಎಂದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಅವರೇ ಹೇಳಿದ್ದಾರೆ. ಹಾಗಾಗಿ, ಈ ಬಗ್ಗೆ
ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕಣ್ಣೊರೆಸುವ ತಂತ್ರ. ಪಂಚತಾರಾ ಹೊಟೇಲ್ ನಿಂದ ಈಗ ಅಮೆರಿಕಾಕ್ಕೆ ಪ್ರವಾಸ ಶಿಫ್ಟ್ ಆಗಿದೆ
ಎಂದು ಟೀಕಿಸಿದರು.

Body:KN_DVG_01_28_KOTA SRINIVAS POOJARY_SCRIPT_7203307

REPORTER : YOGARAJA G. H.


ಬಿಜೆಪಿ ಮಧ್ಯಂತರ ಚುನಾವಣೆಗೆ ರೆಡಿ ಇಲ್ಲ - ಕೋಟ ಶ್ರೀನಿವಾಸ್ ಪೂಜಾರಿ

ದಾವಣಗೆರೆ : ರಾಜ್ಯ ಬಿಜೆಪಿಯು ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ವಿಧಾನ ಪರಿಷತ್
ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 171 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ. ಹಾಗಾಗಿ, ಎಲೆಕ್ಷನ್ ನಡೆದರೆ
ಬಿಜೆಪಿ ಅಧಿಕಾರಕ್ಕೆ ಬರಲಿದೆ. ಜನ ಐದು ವರ್ಷಗಳ ಕಾಲ ಇರಬೇಕು ಎಂದು ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಒಂದು ವರ್ಷಕ್ಕೆ ಚುನಾವಣೆ ನಡೆಯುವುದು ಸರಿಯಲ್ಲ ಎಂಬ
ಅಭಿಪ್ರಾಯ ವ್ಯಕ್ತಪಡಿಸಿದರು.

ನಾವು ಕೆಲಸ ಮಾಡ್ತೇವೆ, ಆದ್ರೆ, ವೋಟ್ ಮಾತ್ರ ಬಿಜೆಪಿ ಹಾಕ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ
ವಿರುದ್ಧ ಹರಿಹಾಯ್ದ ಅವರು, ಇಂಥ ಹೇಳಿಕೆ ನೀಡುವುದು ಬೇಜವಾಬ್ದಾರಿಯ ಪರಮಾವಾಧಿ ಮತ್ತು ಅವರ ಘನತೆಗೆ ಕ್ಷೋಭೆ ತರುವಂಥದ್ದಲ್ಲ. ಹತಾಶೆಯ ಕಟ್ಟ ಕಡೆಯ ಮಾತು. ಜನರು
ನಿರ್ಲಕ್ಷ್ಯ ಮಾಡಿದ್ದು ಗೊತ್ತಾದಾಗ ಅಧಿಕಾರದಲ್ಲಿರುವುದು ಸರಿಯಲ್ಲ ಎಂಬುದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಅನಿಸಿದೆ ಎಂದು ಕಿಡಿಕಾರಿದರು.

ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಉಪಯೋಗವೂ ಇಲ್ಲ ಎಂದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಅವರೇ ಹೇಳಿದ್ದಾರೆ. ಹಾಗಾಗಿ, ಈ ಬಗ್ಗೆ
ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕಣ್ಣೊರೆಸುವ ತಂತ್ರ. ಪಂಚತಾರಾ ಹೊಟೇಲ್ ನಿಂದ ಈಗ ಅಮೆರಿಕಾಕ್ಕೆ ಪ್ರವಾಸ ಶಿಫ್ಟ್ ಆಗಿದೆ
ಎಂದು ಟೀಕಿಸಿದರು.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.