ETV Bharat / state

ದಾವಣಗೆರೆಯಿಂದ ಸಾರ್ವಜನಿಕ ಸಾರಿಗೆ ಸೇವೆ ಮತ್ತೆ ಆರಂಭ

author img

By

Published : Jun 21, 2021, 10:34 AM IST

ದಾವಣಗೆರೆ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಒಟ್ಟು 60 ಬಸ್​ಗಳು ಬೇರೆ ಬೇರೆ ಜಿಲ್ಲೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

Bus Traffic Resumes in Davanagere
ದಾವಣಗೆರೆಯಿಂದ ಸಾರ್ವಜನಿಕ ಸಾರಿಗೆ ಸೇವೆ ಮತ್ತೆ ಆರಂಭ

ದಾವಣಗೆರೆ: ಜಿಲ್ಲೆಯಲ್ಲಿ ಸಾರಿಗೆ ಬಸ್​ಗಳ ಪ್ರಯಾಣಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ದಾವಣಗೆರೆಯಿಂದ ಬೆಂಗಳೂರಿನ ಕಡೆ ಕೆಎಸ್ಆರ್​ಟಿಸಿ ಬಸ್ ಹೊರಟು ನಿಂತಿವೆ. ಇಲ್ಲಿನ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಒಟ್ಟು 60 ಬಸ್​ಗಳು ಬೇರೆ ಬೇರೆ ಜಿಲ್ಲೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಆದೇಶದಂತೆ ಒಂದು ಬಸ್​ನಲ್ಲಿ 50 % ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕ, ನಿರ್ವಾಹಕರಿಗೆ ಕೊರೊನಾ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ ಗೊಳಿಸಲಾಗಿದೆ.

ಅಂತರ್ ರಾಜ್ಯ, ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭಿಸಲಾಯಿತು. ಇಂದು ಮೊದಲ ಬಸ್ ದಾವಣಗೆರೆಯಿಂದ ಬೆಂಗಳೂರಿನತ್ತ ಸಂಚಾರ ಆರಂಭಿಸಿತು.

ದಾವಣಗೆರೆ: ಜಿಲ್ಲೆಯಲ್ಲಿ ಸಾರಿಗೆ ಬಸ್​ಗಳ ಪ್ರಯಾಣಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ದಾವಣಗೆರೆಯಿಂದ ಬೆಂಗಳೂರಿನ ಕಡೆ ಕೆಎಸ್ಆರ್​ಟಿಸಿ ಬಸ್ ಹೊರಟು ನಿಂತಿವೆ. ಇಲ್ಲಿನ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಒಟ್ಟು 60 ಬಸ್​ಗಳು ಬೇರೆ ಬೇರೆ ಜಿಲ್ಲೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಆದೇಶದಂತೆ ಒಂದು ಬಸ್​ನಲ್ಲಿ 50 % ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕ, ನಿರ್ವಾಹಕರಿಗೆ ಕೊರೊನಾ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ ಗೊಳಿಸಲಾಗಿದೆ.

ಅಂತರ್ ರಾಜ್ಯ, ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭಿಸಲಾಯಿತು. ಇಂದು ಮೊದಲ ಬಸ್ ದಾವಣಗೆರೆಯಿಂದ ಬೆಂಗಳೂರಿನತ್ತ ಸಂಚಾರ ಆರಂಭಿಸಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.