ದಾವಣಗೆರೆ: ಮಾಜಿ ಸಚಿವರೊಬ್ಬರ ರೈಸ್ ಮಿಲ್ನಲ್ಲಿ ವನ್ಯ ಜೀವಿಗಳ ಪತ್ತೆ ಪ್ರಕರಣ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಶುರುವಾಗಿದೆ. ಎರಡು ಪಕ್ಷಗಳ ಪ್ರಮುಖರಿಂದ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡರಾದ ಎ. ನಾಗರಾಜ್ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಬಿ.ಜಿ. ಅಜಯಕುಮಾರ ಹಾಗೂ ಎಸ್ ಟಿ ವೀರೇಶ ಸೇರಿ 13 ಜನರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವರ ರೈಸ್ಮಿಲ್ನಲ್ಲಿ ವನ್ಯಜೀವಿಗಳು ಪತ್ತೆ ಕೇಸ್: ಅರಣ್ಯ ಇಲಾಖೆ ಕಚೇರಿಗೆ ಬಿಜೆಪಿ ಮುತ್ತಿಗೆ
ತಮ್ಮ ನಾಯಕರಾದ ಮಾಜಿ ಸಚಿವರನ್ನು ಕಾಡುಗಳ್ಳ ವೀರಪ್ಪನ ರೀತಿ ಬಿಂಬಿಸಿದ್ದಾರೆ. ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರತಿಭಟನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಎಫ್ಐಆರ್ ದಾಖಲು ಮಾಡಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷಕ್ಕೆ ಕೌಂಟರ್ ಕೊಟ್ಟಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಕೂಡ ಕೈ ನಾಯಕರ ಮೇಲೆ ಎಫ್ಐಆರ್ ದಾಖಲು ಮಾಡಿದ್ದಾರೆ.
ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರಾದ ಗಡಿಗುಡಾಳ್ ಮಂಜುನಾಥ, ದಿನೇಶ್ ಶೆಟ್ಟಿ ಸೇರಿ ಮೂರು ಜನರ ವಿರುದ್ಧ ಬಿಜೆಪಿ ಮುಖಂಡ ಕೆ. ಮಂಜುನಾಥ ಅವರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಫಾರ್ಮ್ ಹೌಸ್ನಲ್ಲಿ ವನ್ಯಜೀವಿಗಳು ಪತ್ತೆ: ನಿರೀಕ್ಷಣಾ ಜಾಮೀನಿಗಾಗಿ ಆರೋಪಿಗಳಿಂದ ಅರ್ಜಿ