ETV Bharat / state

ದಾವಣಗೆರೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಕಿಲ್ಲರ್ ಕೊರೊನಾ ತಡೆಗೆ ಕ್ರಮ

author img

By

Published : Mar 19, 2020, 10:16 AM IST

ಮಾರ್ಚ್ 14ರಿಂದ 24ರವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ಅಪರಾಧ ದಂಡ ಸಂಹಿತೆಯ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Corona virus infection control: 144 sectional enforcement across the district
ಕೊರೋನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ದಾವಣಗೆರೆ: ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತ ತಡೆಗಟ್ಟಲು ಕೆಲ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 14ರಿಂದ 24ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದೊಬ್ಬರಿಗೆ ಹರಡುವಂತಹ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಭೆ, ಸಮಾರಂಭ, ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ.

ಈ ಕೆಲಸಗಳಿಗೆ ನಿಷೇಧಾಜ್ಞೆ ಅನ್ವಯಿಸಲ್ಲ:

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಆದರೆ ಈ ಆದೇಶ ಅಂತ್ಯಕ್ರಿಯೆ, ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ದಾವಣಗೆರೆ: ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತ ತಡೆಗಟ್ಟಲು ಕೆಲ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 14ರಿಂದ 24ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದೊಬ್ಬರಿಗೆ ಹರಡುವಂತಹ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಭೆ, ಸಮಾರಂಭ, ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ.

ಈ ಕೆಲಸಗಳಿಗೆ ನಿಷೇಧಾಜ್ಞೆ ಅನ್ವಯಿಸಲ್ಲ:

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಆದರೆ ಈ ಆದೇಶ ಅಂತ್ಯಕ್ರಿಯೆ, ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.