ದಾವಣಗೆರೆ: ಸೂಳೆಕೆರೆ ಕಳೆದ 6 ವರ್ಷಗಳಿಂದ ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕೆರೆಗೆ ಜೀವಕಳೆ ಬಂದಿದೆ. ಈ ಹಿನ್ನಲೆ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು.
ಸಕಾಲಕ್ಕೆ ಮಳೆಯಾಗದ ಕಾರಣ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಮಾತ್ರವಿತ್ತು. ಈ ಬಾರಿ ಉತ್ತಮ ಮಳೆಯಾದ ಕಾರಣ ಕೆರೆ ಭರ್ತಿಯಾಗಿದೆ. ಮೈದುಂಬಿ ಹರಿಯುತ್ತಿರುವ ಕೆರೆ ನೋಡುಗರ ಆಕರ್ಷಣೆ ಕೇಂದ್ರವಾಗಿದೆ. ಸುಮಾರು 6 ಎಕೆರೆ ಪ್ರದೇಶದಲ್ಲಿರುವ ಕೆರೆ ಭರ್ತಿಯಾಗಿರುವುದು ಈ ಭಾಗದ ಜನರಿಗೆ ಖುಷಿ ತಂದಿದೆ. ಈ ಹಿನ್ನೆಲೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್ ಗಂಗಾಮಾತೆಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂಳೆಕೆರೆ ತುಂಬಿ ಸಮುದ್ರದಂತೆ ಕಾಣುತ್ತಿದೆ. ಸೂಳೆಕೆರೆಯನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಿ 56 ಕೋಟಿ ರೂಪಾಯಿ ಹಣ ಮಂಜುರಾತಿಗೆ ಕೇಳಿದ್ದೇವೆ. ಸೂಳೆಕೆರೆಯನ್ನು ಪ್ರವಾಸಿ ತಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.