ETV Bharat / state

ಕೋವಿಡ್ ಕೇರ್ ಸೆಂಟರ್​​ನಲ್ಲಿ ಹೋಮ: ಜಿಲ್ಲಾಡಳಿತದಿಂದ ರೇಣುಕಾಚಾರ್ಯಗೆ ನೋಟಿಸ್!

author img

By

Published : Jun 12, 2021, 3:21 PM IST

ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ​​ನಲ್ಲಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

Davanagere
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಲೋಕ ಕಲ್ಯಾಣಕ್ಕಾಗಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿಸಿದ ಹೋಮ ಹವನ ಇದೀಗ ಸಂಕಷ್ಟಕ್ಕೀಡು ಮಾಡಿದೆ. ಹೋಮ ನೆರವೇರಿಸಿದ್ದರಿಂದ ಜಿಲ್ಲಾಡಳಿತ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​​ನಲ್ಲಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಶಾಸಕ ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ನೀಡಲಾಗಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಹೊನ್ನಾಳಿ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದ್ದು, ಹೋಮ ಪ್ರಕರಣದ ಬಗ್ಗೆ‌ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.

ಜೂ.21 ರ ವರೆಗೆ ಲಾಕ್​​ಡೌನ್ ವಿಸ್ತರಣೆ:

ಜಿಲ್ಲೆಯಲ್ಲಿ ಜೂ. 14 ರಿಂದ 21ರ ವರೆಗೆ ಸಂಪೂರ್ಣ ಲಾಕ್​​​ಡೌನ್ ಮುಂದುವರೆಸಿ ಜಿಲ್ಲಾಡಳಿತ ಆದೇಶಿಸಿದೆ. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಗತ್ಯ ವಸ್ತುಗಳ ಖರೀದಿಗಾಗಿ 14, 16, ಮತ್ತು 18 ರಂದು ಬೆಳಗ್ಗೆ 6 ರಿಂದ 12 ಗಂಟೆವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದ ದಿನ ಹಾಲು, ಮೊಟ್ಟೆ ಹಾಗೂ ಮೆಡಿಕಲ್​​ಗೆ ಮಾತ್ರ‌ ಸೀಮಿತವಾಗಿದೆ.

ತರಕಾರಿ, ಹಣ್ಣುಗಳನ್ನು ತಳ್ಳು ಗಾಡಿ ಮುಖಾಂತರ ಮನೆ ಮನೆಗೆ ಹೋಗಿ ಮಾರಾಟ ಮಾಡುವಂತೆ ತಿಳಿಸಲಾಗಿದ್ದು, ಕೃಷಿ ಚಟುವಟಿಕೆ, ನರೇಗಾ ಕಾಮಗಾರಿಗಳಿಗೆ ಅವಕಾಶ ನೀಡಲಾಗಿದೆ. ಅದೇಶವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

25 ಗ್ರಾಮಗಳು ಕಂಟೇನ್ಮೆಂಟ್ ಝೋನ್ :

ಕೋವಿಡ್ ಸೋಂಕು ನಿಯಂತ್ರಣಕ್ಕೆ ದಿಟ್ಟ‌ ನಿರ್ಧಾರ ಕೈಗೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ 25 ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಅಂತಹ ಗ್ರಾಮಗಳನ್ನ ಕಂಟೇನ್ಮೆಂಟ್ ಝೋನ್ ಎಂದು ಜಿಲ್ಲಾಡಳಿತ ಘೋಷಿಸಿದೆ. ಯಾರು ಕೂಡಾ ಅನಗತ್ಯವಾಗಿ ಹೊರಗಡೆ ಬರುವಂತಿಲ್ಲ.

ಗಂಭೀರ ಸಮಸ್ಯೆಗಳಿದ್ದರೇ ಮಾತ್ರ ಅವಕಾಶ. ನಿತ್ಯ ನಾಲ್ಕು ಸಾವಿರಕ್ಕೂ ಹೆಚ್ಚು ಜನರ ಟೆಸ್ಟ್ ಮಾಡಲಾಗುವುದು. ಈಗಾಗಲೇ 3.69 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಉಳಿದವರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಓದಿ: ಕೊರೊನಾ ನಿರ್ಮೂಲನೆಗಾಗಿ ಕೋವಿಡ್​​ ಕೇರ್​ ಸೆಂಟರ್​ನಲ್ಲಿ ರೇಣುಕಾಚಾರ್ಯರಿಂದ ಹೋಮ-ಹವನ!

ದಾವಣಗೆರೆ: ಲೋಕ ಕಲ್ಯಾಣಕ್ಕಾಗಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿಸಿದ ಹೋಮ ಹವನ ಇದೀಗ ಸಂಕಷ್ಟಕ್ಕೀಡು ಮಾಡಿದೆ. ಹೋಮ ನೆರವೇರಿಸಿದ್ದರಿಂದ ಜಿಲ್ಲಾಡಳಿತ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​​ನಲ್ಲಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಶಾಸಕ ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ನೀಡಲಾಗಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಹೊನ್ನಾಳಿ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದ್ದು, ಹೋಮ ಪ್ರಕರಣದ ಬಗ್ಗೆ‌ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.

ಜೂ.21 ರ ವರೆಗೆ ಲಾಕ್​​ಡೌನ್ ವಿಸ್ತರಣೆ:

ಜಿಲ್ಲೆಯಲ್ಲಿ ಜೂ. 14 ರಿಂದ 21ರ ವರೆಗೆ ಸಂಪೂರ್ಣ ಲಾಕ್​​​ಡೌನ್ ಮುಂದುವರೆಸಿ ಜಿಲ್ಲಾಡಳಿತ ಆದೇಶಿಸಿದೆ. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಗತ್ಯ ವಸ್ತುಗಳ ಖರೀದಿಗಾಗಿ 14, 16, ಮತ್ತು 18 ರಂದು ಬೆಳಗ್ಗೆ 6 ರಿಂದ 12 ಗಂಟೆವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದ ದಿನ ಹಾಲು, ಮೊಟ್ಟೆ ಹಾಗೂ ಮೆಡಿಕಲ್​​ಗೆ ಮಾತ್ರ‌ ಸೀಮಿತವಾಗಿದೆ.

ತರಕಾರಿ, ಹಣ್ಣುಗಳನ್ನು ತಳ್ಳು ಗಾಡಿ ಮುಖಾಂತರ ಮನೆ ಮನೆಗೆ ಹೋಗಿ ಮಾರಾಟ ಮಾಡುವಂತೆ ತಿಳಿಸಲಾಗಿದ್ದು, ಕೃಷಿ ಚಟುವಟಿಕೆ, ನರೇಗಾ ಕಾಮಗಾರಿಗಳಿಗೆ ಅವಕಾಶ ನೀಡಲಾಗಿದೆ. ಅದೇಶವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

25 ಗ್ರಾಮಗಳು ಕಂಟೇನ್ಮೆಂಟ್ ಝೋನ್ :

ಕೋವಿಡ್ ಸೋಂಕು ನಿಯಂತ್ರಣಕ್ಕೆ ದಿಟ್ಟ‌ ನಿರ್ಧಾರ ಕೈಗೊಳ್ಳಲಾಗಿದ್ದು, ದಾವಣಗೆರೆ ಜಿಲ್ಲೆಯ 25 ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಅಂತಹ ಗ್ರಾಮಗಳನ್ನ ಕಂಟೇನ್ಮೆಂಟ್ ಝೋನ್ ಎಂದು ಜಿಲ್ಲಾಡಳಿತ ಘೋಷಿಸಿದೆ. ಯಾರು ಕೂಡಾ ಅನಗತ್ಯವಾಗಿ ಹೊರಗಡೆ ಬರುವಂತಿಲ್ಲ.

ಗಂಭೀರ ಸಮಸ್ಯೆಗಳಿದ್ದರೇ ಮಾತ್ರ ಅವಕಾಶ. ನಿತ್ಯ ನಾಲ್ಕು ಸಾವಿರಕ್ಕೂ ಹೆಚ್ಚು ಜನರ ಟೆಸ್ಟ್ ಮಾಡಲಾಗುವುದು. ಈಗಾಗಲೇ 3.69 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಉಳಿದವರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಓದಿ: ಕೊರೊನಾ ನಿರ್ಮೂಲನೆಗಾಗಿ ಕೋವಿಡ್​​ ಕೇರ್​ ಸೆಂಟರ್​ನಲ್ಲಿ ರೇಣುಕಾಚಾರ್ಯರಿಂದ ಹೋಮ-ಹವನ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.