ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟ ಹಾಗೂ ಪರಿಹಾರ ಕಾರ್ಯಕ್ಕಾಗಿ ನಗರದ ಖ್ಯಾತ ವೈದ್ಯ ಡಾ.ವಿ ಜಿ ನಾಡಗೌಡ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೆರವು ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಜತೆಗೆ ತೆರಳಿ ತಹಶೀಲ್ದಾರ್ ಮೂಲಕ 1,11,111 ರೂ. ಗಳ ಚೆಕ್ನ ಹಸ್ತಾಂತರಿಸಿದರು. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಹಶೀಲ್ದಾರ್ಗಳಾದ ಶಶಿಧರ ಮಾಡ್ಯಾಳ ಹಾಗೂ ಪ್ರಕಾಶ ನಾಶಿ ಈ ಸಂದರ್ಭದಲ್ಲಿ ಹಾಜರಿದ್ದರು.