ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಕ್ಕೆ ಎಂಟು ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 197 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 3,040ಕ್ಕೆ ಏರಿಕೆಯಾಗಿದೆ.
ದಾವಣಗೆರೆಯ ಏಳು ಮಂದಿ ಹಾಗೂ ಹರಿಹರದ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಏಳು ಮಂದಿ ವೃದ್ಧರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಏಳು ಮಂದಿ ಸಿ. ಜೆ. ಆಸ್ಪತ್ರೆಯಲ್ಲಿ ಮರಣಿಸಿದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
97 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 1,842 ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 1,122 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ. 35 ಜನರು ಐಸಿಯುವಿನಲ್ಲಿದ್ದು, ತೀವ್ರ ನಿಗಾ ವಹಿಸಲಾಗಿದೆ.
ದಾವಣಗೆರೆ 146, ಹರಿಹರ 10, ಜಗಳೂರು 10, ಚನ್ನಗಿರಿ 15, ಹೊನ್ನಾಳಿ 10, ಹೊರ ಜಿಲ್ಲೆಯಿಂದ ಬಂದ ಐದು ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.