ETV Bharat / state

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

author img

By

Published : Sep 12, 2020, 1:07 PM IST

ಸಾಲಗಾರರ ಕಾಟ ಹಾಗೂ ಬ್ಯಾಂಕಿನಿಂದ ನೋಟಿಸ್ ನೀಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಪನಹಳ್ಳಿ ತಾಲೂಕಿನ ರಾಗಿಮಸಾಲವಾಡ ಗ್ರಾಮದಲ್ಲಿ ನಡೆದಿದೆ.

Farmer suicide
Farmer suicide

ದಾವಣಗೆರೆ: ಸಾಲಬಾಧೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಾಲವಾಡ ಗ್ರಾಮದಲ್ಲಿ ನಡೆದಿದೆ.

ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ರೈತ. ದಾವಣಗೆರೆ ಕಾರ್ಪೋರೇಷನ್ ಬ್ಯಾಂಕ್​​​ನಲ್ಲಿ ನಾಲ್ಕು ಲಕ್ಷದ ಐವತ್ತು ಸಾವಿರ ರೂ. ಹಾಗೂ ಖಾಸಗಿ ಸಂಘಗಳಿಂದ ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು.

ಇತ್ತೀಚೆಗೆ ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಉತ್ತಮವಾಗಿ ಬಾರದ ಕಾರಣ ಮನನೊಂದಿದ್ದರು. ಅಲ್ಲದೆ ಇತ್ತೀಚೆಗೆ ಸಾಲಗಾರರ ಕಾಟ ಹಾಗೂ ಬ್ಯಾಂಕಿನಿಂದ ನೋಟಿಸ್ ಬಂದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಲವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ: ಸಾಲಬಾಧೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಾಲವಾಡ ಗ್ರಾಮದಲ್ಲಿ ನಡೆದಿದೆ.

ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ರೈತ. ದಾವಣಗೆರೆ ಕಾರ್ಪೋರೇಷನ್ ಬ್ಯಾಂಕ್​​​ನಲ್ಲಿ ನಾಲ್ಕು ಲಕ್ಷದ ಐವತ್ತು ಸಾವಿರ ರೂ. ಹಾಗೂ ಖಾಸಗಿ ಸಂಘಗಳಿಂದ ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು.

ಇತ್ತೀಚೆಗೆ ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಉತ್ತಮವಾಗಿ ಬಾರದ ಕಾರಣ ಮನನೊಂದಿದ್ದರು. ಅಲ್ಲದೆ ಇತ್ತೀಚೆಗೆ ಸಾಲಗಾರರ ಕಾಟ ಹಾಗೂ ಬ್ಯಾಂಕಿನಿಂದ ನೋಟಿಸ್ ಬಂದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಲವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.