ETV Bharat / state

ದಾವಣಗೆರೆಯಲ್ಲಿ‌ ಕೊರೊನಾಗೆ ಮೊದಲ ಬಲಿ:ರಾಜ್ಯದಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆ

author img

By

Published : May 1, 2020, 10:18 PM IST

Updated : May 2, 2020, 12:08 AM IST

ದಾವಣಗೆರೆಯಲ್ಲಿ‌ ಕೊರೊನಾಗೆ ಮೊದಲ ಬಲಿ
ದಾವಣಗೆರೆಯಲ್ಲಿ‌ ಕೊರೊನಾಗೆ ಮೊದಲ ಬಲಿ

22:05 May 01

ದಾವಣಗೆರೆಯಲ್ಲಿ ಕೋವಿಡ್​ನಿಂದ ವೃದ್ಧ ಸಾವು

ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು, ಜಾಲಿನಗರದ ನಿವಾಸಿ 69 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ವೃದ್ದನನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗಕ್ಕೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಪುಣೆ ಲ್ಯಾಬ್ ನಿಂದಲೂ ವರದಿ ಪಾಸಿಟಿವ್ ಬಂದಿತ್ತು. ನಿನ್ನೆ ಇವರ ಮಾದರಿ ಪರೀಕ್ಷಾ ವರದಿ ಕೊರೊನಾ ಪಾಸಿಟಿವ್​ ಎಂಬುದು ದೃಢ ಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಇಂದು ಅಸುನೀಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದರು.

ವೃದ್ಧನಿಂದ ಆತನ ಮೂವರು ಸೊಸೆಯರು, ಪುತ್ರ, ಮೊಮ್ಮಗನಿಗೆ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.

22:05 May 01

ದಾವಣಗೆರೆಯಲ್ಲಿ ಕೋವಿಡ್​ನಿಂದ ವೃದ್ಧ ಸಾವು

ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು, ಜಾಲಿನಗರದ ನಿವಾಸಿ 69 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ವೃದ್ದನನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗಕ್ಕೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಪುಣೆ ಲ್ಯಾಬ್ ನಿಂದಲೂ ವರದಿ ಪಾಸಿಟಿವ್ ಬಂದಿತ್ತು. ನಿನ್ನೆ ಇವರ ಮಾದರಿ ಪರೀಕ್ಷಾ ವರದಿ ಕೊರೊನಾ ಪಾಸಿಟಿವ್​ ಎಂಬುದು ದೃಢ ಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಇಂದು ಅಸುನೀಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದರು.

ವೃದ್ಧನಿಂದ ಆತನ ಮೂವರು ಸೊಸೆಯರು, ಪುತ್ರ, ಮೊಮ್ಮಗನಿಗೆ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.

Last Updated : May 2, 2020, 12:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.