ದಾವಣಗೆರೆ: ಪಾರ್ಲಿಮೆಂಟ್ನಲ್ಲಿ ಕೂತು ಮಾಡಿರುವ ಕಾನೂನು ದೊಡ್ಡದೆಂದು ಹೇಳ್ತಾರೆ. ಆದರೆ ರೈತ ವಿರೋಧಿ, ಜನ ವಿರೋಧಿಯಾಗಿರುವ ಕಾನೂನುಗಳನ್ನು ಜಾರಿಗೆ ತಂದಿದ್ದಾರೆಂದು ಮಾಜಿ ಕೇಂದ್ರ ಸಚಿವ ಮುನಿಯಪ್ಪ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠವನ್ನು ಕಲಿಸುತ್ತಾರೆ. ಎರಡು ಕೋಟಿ ಜನರಿಗೆ ಕೆಲಸ ಕೊಡ್ತೀವಿ ಎಂದು ಎಂದಿದ್ದ ಮೋದಿಯವರು ಇಲ್ಲಿಯ ತನಕ ಯಾವುದೇ ಕೆಲಸ ನೀಡಿಲ್ಲ. ಕೆಲಸ ಕೊಡಿಸುವ ಬದಲು ಇರುವಂತಹ ಕಾರ್ಮಿಕರನ್ನು ಬೀದಿಗೆ ತಂದಿದ್ದು, ಇದರ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತದೆ ಎಂದರು.
ಓದಿ:ಬಿಜೆಪಿ ಸರ್ಕಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿತ: ಕೆ.ಎಚ್. ಮುನಿಯಪ್ಪ
ಇನ್ನು ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಅಧಿಕಾರಕ್ಕೆ ಬರುತ್ತೆ ಎಂದಾಗ ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ ದಾಳಿ ನಡೆಸಿ ಜನರನ್ನು ದಾರಿ ತಪ್ಪಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರು ಎಂದು ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.