ETV Bharat / state

ಕೊರೊನಾ ಭೀತಿ... ಸರ್ಕಾರದ ಆದೇಶದಂತೆ ಹರಿಹರೇಶ್ವರಸ್ವಾಮಿ ದೇವಾಲಯಕ್ಕೂ ಬೀಗ - ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಹರಿಹರೇಶ್ವರ ಸ್ವಾಮಿ ದೇವಾಸ್ಥಾನ

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹರಿಹರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ದರ್ಶನವನ್ನು ಇದೀಗ ಸ್ಥಗಿತಗೊಳಿಸಲಾಗಿದೆ.

Harihareshwaraswamy temple
ಹರಿಹರೇಶ್ವರಸ್ವಾಮಿ ದೇವಾಲಯಕ್ಕೆ ಬೀಗ
author img

By

Published : Mar 22, 2020, 3:54 AM IST

ಹರಿಹರ:(ದಾವಣಗೆರೆ): ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಐತಿಹಾಸಿಕ ಶ್ರೀ ಹರಿಹರೇಶ್ವರಸ್ವಾಮಿ ದೇವಾಲಯದ ಬಾಗಿಲಿಗೆ ಬೀಗ ಹಾಕಿ ಭಕ್ತರ ದರ್ಶನವನ್ನು ನಿಷೇಧಿಸಲಾಗಿದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹರಿಹರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ದರ್ಶನಕ್ಕೆ ಪ್ರತಿ ನಿತ್ಯವೂ ವಿವಿಧ ಊರು, ರಾಜ್ಯಗಳಿಂದ ನೂರಾರು ಭಕ್ತರು ಆಗಮಿಸುತ್ತಿದ್ದರು. ಆದರೆ ಕೊರೊನಾ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಮುಜರಾಯಿ ಇಲಾಖೆ ಸರ್ಕಾರದ ಆದೇಶದಂತೆ ದೇವಾಲಯದ ದ್ವಾರ ಬಾಗಿಲು ಮುಚ್ಚಲು ಕ್ರಮ ಕೈಗೊಂಡಿದೆ.

ಹರಿಹರೇಶ್ವರಸ್ವಾಮಿ ದೇವಾಲಯಕ್ಕೆ ಬೀಗ

ಶನಿವಾರ ಬೆಳಿಗ್ಗೆ ಅರ್ಚಕರು ಪೂಜೆಯ ನಂತರ ದೇವಸ್ಥಾನದ ಬಾಗಿಲು ಹಾಕಿದ್ದು, ಆದರೆ ಪ್ರತಿನಿತ್ಯ ಶ್ರೀ ಹರಿಹರೇಶ್ವರ ಸ್ವಾಮಿಗೆ ನಡೆಯುವ ಪೂಜಾ ಕಾರ್ಯಗಳು ಮಾತ್ರ ನಿರಂತರವಾಗಿ ನಡೆಯಲಿವೆ ಎಂದು ತಿಳಿದುಬಂದಿದೆ.

ಹರಿಹರ:(ದಾವಣಗೆರೆ): ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಐತಿಹಾಸಿಕ ಶ್ರೀ ಹರಿಹರೇಶ್ವರಸ್ವಾಮಿ ದೇವಾಲಯದ ಬಾಗಿಲಿಗೆ ಬೀಗ ಹಾಕಿ ಭಕ್ತರ ದರ್ಶನವನ್ನು ನಿಷೇಧಿಸಲಾಗಿದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹರಿಹರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ದರ್ಶನಕ್ಕೆ ಪ್ರತಿ ನಿತ್ಯವೂ ವಿವಿಧ ಊರು, ರಾಜ್ಯಗಳಿಂದ ನೂರಾರು ಭಕ್ತರು ಆಗಮಿಸುತ್ತಿದ್ದರು. ಆದರೆ ಕೊರೊನಾ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಮುಜರಾಯಿ ಇಲಾಖೆ ಸರ್ಕಾರದ ಆದೇಶದಂತೆ ದೇವಾಲಯದ ದ್ವಾರ ಬಾಗಿಲು ಮುಚ್ಚಲು ಕ್ರಮ ಕೈಗೊಂಡಿದೆ.

ಹರಿಹರೇಶ್ವರಸ್ವಾಮಿ ದೇವಾಲಯಕ್ಕೆ ಬೀಗ

ಶನಿವಾರ ಬೆಳಿಗ್ಗೆ ಅರ್ಚಕರು ಪೂಜೆಯ ನಂತರ ದೇವಸ್ಥಾನದ ಬಾಗಿಲು ಹಾಕಿದ್ದು, ಆದರೆ ಪ್ರತಿನಿತ್ಯ ಶ್ರೀ ಹರಿಹರೇಶ್ವರ ಸ್ವಾಮಿಗೆ ನಡೆಯುವ ಪೂಜಾ ಕಾರ್ಯಗಳು ಮಾತ್ರ ನಿರಂತರವಾಗಿ ನಡೆಯಲಿವೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.