ETV Bharat / state

ಕರ್ನಾಟಕದಲ್ಲಿರುವುದು ಕಲಬೆರಕೆ ಘಟಬಂಧನ್​ ಸರ್ಕಾರ: ಶಾ ವಾಗ್ದಾಳಿ - undefined

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಇಂದು ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದರು. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿ, ಕಾಂಗ್ರೆಸ್ 'ರಿಮೋಟ್ ಕಂಟ್ರೋಲ್ ಕರಪ್ಶನ್​​' ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.

ಅಮಿತ್ ಶಾ
author img

By

Published : Apr 16, 2019, 8:01 PM IST

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದ ಜೆಡಿಎಸ್​​​​ನೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ಮೂಲಕ ಕುಮಾರಸ್ವಾಮಿ ಸಿಎಂ ಮಾಡಿ, ಕಾಂಗ್ರೆಸ್ 'ರಿಮೋಟ್ ಕಂಟ್ರೋಲ್ ಕರಪ್ಶನ್​​' ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.

ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್ ಪರ ಮತಯಾಚನೆಗಾಗಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಅಲ್ಲದೇ ಇದು ಕಲಬೆರಕೆ ಘಟ್ ಬಂಧನ್ ಎಂದು ಟೀಕಿಸಿದರು.

ಸಿಎಂ ಕುಮಾರಸ್ವಾಮಿ ತಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕೃಪೆಯಿಂದ ಮುಖ್ಯಮಂತ್ರಿಯಾಗಿರುವುದಾಗಿ ಹೇಳುತ್ತಾರೆ. ಜನರಿಂದ ಆರಿಸಿ ಬಂದ ಸಿಎಂ ಅಲ್ಲ ಅನ್ನುತ್ತಾರೆ. ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಚುನಾವಣೆಯಲ್ಲಿ ಗೆಲ್ಲಿಸಿದ ಜನರಿಗೆ ಇದರಿಂದ ಅಪಮಾನವಾಗಿದೆ. ಸಿಎಂ ಹುದ್ದೆಯಲ್ಲಿದ್ದುಕೊಂಡು ಜನರ ಗೌರವ ಕಾಪಾಡಬೇಕು. ಆದರೆ ಅದನ್ನು ಬಿಟ್ಟು ಗೌರವ ತೆಗೆಯುವ ಕೆಲಸ ಮಾಡುತ್ತಿರುವ ಇಂಥ ಸಿಎಂ ನಿಮಗೆ ಬೇಕಾ ಅಮಿತ್​ ಶಾ ಪ್ರಶ್ನಿಸಿದರು.

ಅಮಿತ್ ಶಾ

ಬಿಜೆಪಿಗೆ ಹೆಚ್ಚು ಸ್ಥಾನ ಪಡೆದಿದ್ದರೂ ಜೆಡಿಎಸ್- ಕಾಂಗ್ರೆಸ್ ಅಪವಿತ್ರ ಮೈತ್ರಿಯ ಸರ್ಕಾರ ಕರ್ನಾಟಕದಲ್ಲಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. 48 ಸಾವಿರ ಕೋಟಿ ರೂಪಾಯಿಯಲ್ಲಿ ಮನ್ನಾ ಮಾಡಿರುವುದು ಕೇವಲ 15 ಸಾವಿರ ಕೋಟಿ ರೂಪಾಯಿ ಮಾತ್ರ. ಅಧಿಕಾರಕ್ಕೆ ಬಂದು ವರ್ಷವಾಗುತ್ತಾ ಬಂದಿದ್ದರೂ, ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಮಿತ್ ಶಾ ದೂರಿದರು.

2014ಕ್ಕೂ ಮೊದಲು ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. 13ನೇ ಹಣಕಾಸು ಆಯೋಗದ ಶಿಫಾರಸಿನಂತೆ 88,583 ಕೋಟಿ ರೂಪಾಯಿ ನೀಡಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಐದೇ ವರ್ಷದಲ್ಲಿ ಕರ್ನಾಟಕಕ್ಕೆ ಹದಿನಾಲ್ಕನೇ ಹಣಕಾಸು ಆಯೋಗದ ಶಿಪಾರಸಿನಂತೆ ಹೆಚ್ಚು ಹಣ ನೀಡಿದ್ದಾರೆ ಎಂದರು.

ಇನ್ನು ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ದೇಶದಲ್ಲಿ ಇಬ್ಬರು ಪ್ರಧಾನಿಯಾಗಳಾಗಬೇಕು ಅಂತಾರೆ. ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಡಲು ಸಾಧ್ಯವಿಲ್ಲ. ಅದು ನಮ್ಮ ಅವಿಭಾಜ್ಯ ಅಂಗ. ಪಾಕಿಸ್ತಾನ ಸದೆಬಡಿಯಲು, ಉಗ್ರವಾದ ಕೊನೆಗಾಣಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮತ್ತೆ ಬರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಶಾ ಮತದಾರರಿಗೆ ಕರೆ ನೀಡಿದರು.

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದ ಜೆಡಿಎಸ್​​​​ನೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ಮೂಲಕ ಕುಮಾರಸ್ವಾಮಿ ಸಿಎಂ ಮಾಡಿ, ಕಾಂಗ್ರೆಸ್ 'ರಿಮೋಟ್ ಕಂಟ್ರೋಲ್ ಕರಪ್ಶನ್​​' ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.

ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್ ಪರ ಮತಯಾಚನೆಗಾಗಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಅಲ್ಲದೇ ಇದು ಕಲಬೆರಕೆ ಘಟ್ ಬಂಧನ್ ಎಂದು ಟೀಕಿಸಿದರು.

ಸಿಎಂ ಕುಮಾರಸ್ವಾಮಿ ತಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕೃಪೆಯಿಂದ ಮುಖ್ಯಮಂತ್ರಿಯಾಗಿರುವುದಾಗಿ ಹೇಳುತ್ತಾರೆ. ಜನರಿಂದ ಆರಿಸಿ ಬಂದ ಸಿಎಂ ಅಲ್ಲ ಅನ್ನುತ್ತಾರೆ. ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಚುನಾವಣೆಯಲ್ಲಿ ಗೆಲ್ಲಿಸಿದ ಜನರಿಗೆ ಇದರಿಂದ ಅಪಮಾನವಾಗಿದೆ. ಸಿಎಂ ಹುದ್ದೆಯಲ್ಲಿದ್ದುಕೊಂಡು ಜನರ ಗೌರವ ಕಾಪಾಡಬೇಕು. ಆದರೆ ಅದನ್ನು ಬಿಟ್ಟು ಗೌರವ ತೆಗೆಯುವ ಕೆಲಸ ಮಾಡುತ್ತಿರುವ ಇಂಥ ಸಿಎಂ ನಿಮಗೆ ಬೇಕಾ ಅಮಿತ್​ ಶಾ ಪ್ರಶ್ನಿಸಿದರು.

ಅಮಿತ್ ಶಾ

ಬಿಜೆಪಿಗೆ ಹೆಚ್ಚು ಸ್ಥಾನ ಪಡೆದಿದ್ದರೂ ಜೆಡಿಎಸ್- ಕಾಂಗ್ರೆಸ್ ಅಪವಿತ್ರ ಮೈತ್ರಿಯ ಸರ್ಕಾರ ಕರ್ನಾಟಕದಲ್ಲಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. 48 ಸಾವಿರ ಕೋಟಿ ರೂಪಾಯಿಯಲ್ಲಿ ಮನ್ನಾ ಮಾಡಿರುವುದು ಕೇವಲ 15 ಸಾವಿರ ಕೋಟಿ ರೂಪಾಯಿ ಮಾತ್ರ. ಅಧಿಕಾರಕ್ಕೆ ಬಂದು ವರ್ಷವಾಗುತ್ತಾ ಬಂದಿದ್ದರೂ, ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಮಿತ್ ಶಾ ದೂರಿದರು.

2014ಕ್ಕೂ ಮೊದಲು ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. 13ನೇ ಹಣಕಾಸು ಆಯೋಗದ ಶಿಫಾರಸಿನಂತೆ 88,583 ಕೋಟಿ ರೂಪಾಯಿ ನೀಡಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಐದೇ ವರ್ಷದಲ್ಲಿ ಕರ್ನಾಟಕಕ್ಕೆ ಹದಿನಾಲ್ಕನೇ ಹಣಕಾಸು ಆಯೋಗದ ಶಿಪಾರಸಿನಂತೆ ಹೆಚ್ಚು ಹಣ ನೀಡಿದ್ದಾರೆ ಎಂದರು.

ಇನ್ನು ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ದೇಶದಲ್ಲಿ ಇಬ್ಬರು ಪ್ರಧಾನಿಯಾಗಳಾಗಬೇಕು ಅಂತಾರೆ. ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಡಲು ಸಾಧ್ಯವಿಲ್ಲ. ಅದು ನಮ್ಮ ಅವಿಭಾಜ್ಯ ಅಂಗ. ಪಾಕಿಸ್ತಾನ ಸದೆಬಡಿಯಲು, ಉಗ್ರವಾದ ಕೊನೆಗಾಣಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮತ್ತೆ ಬರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಶಾ ಮತದಾರರಿಗೆ ಕರೆ ನೀಡಿದರು.

Intro:ರಿಪೋರ್ಟರ್: ಯೋಗರಾಜ್

ಕರ್ನಾಟಕದಲ್ಲಿರುವುದು ರಿಮೋಟ್ ಕಂಟ್ರೋಲ್ ಕರೆಪಕ್ಷನ್ ಸರ್ಕಾರ : ಅಮಿತ್ ಶಾ ಆರೋಪ

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ಮೂಲಕ ಕುಮಾರಸ್ವಾಮಿ ಸಿಎಂ ಮಾಡಿ, ಕಾಂಗ್ರೆಸ್ "ರಿಮೋಟ್ ಕಂಟ್ರೋಲ್ ಕರೆಪಕ್ಷನ್' ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್ ಪರ ಮತಯಾಚನೆ ಸಲುವಾಗಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕದ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೇ, ಇದು ಕಲಬೆರಕೆ ಘಟ್ ಬಂಧನ್ ಎಂದು ಟೀಕಿಸಿದರು.

ಸಿಎಂ ಕುಮಾರಸ್ವಾಮಿ ನಾನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕೃಪೆಯಿಂದ ಮುಖ್ಯಮಂತ್ರಿಯಾಗಿದ್ದೇನೆ. ಜನರಿಂದ ಆರಿಸಿ ಬಂದ ಸಿಎಂ ಅಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಚುನಾವಣೆಯಲ್ಲಿ ಗೆಲ್ಲಿಸಿದ ಜನರಿಗೆ ಮಾಡಿದ ಅಪಮಾನವಾಗಿದೆ. ಸಿಎಂ ಹುದ್ದೆಯಲ್ಲಿದ್ದುಕೊಂಡು ಜನರ ಗೌರವ ಕಾಪಾಡಬೇಕು. ಆದರೆ ಅದನ್ನು ಬಿಟ್ಟು ಗೌರವ ತೆಗೆಯುವ ಕೆಲಸ ಮಾಡುತ್ತಿರುವ ಇಂಥ ಸಿಎಂ ನಿಮಗೆ ಬೇಕಾ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಹೆಚ್ಚು ಸ್ಥಾನ ಬಂದರೂ ಜೆಡಿಎಸ್ ಕಾಂಗ್ರೆಸ್ ಅಪವಿತ್ರ ಮೈತ್ರಿಯ ಸರ್ಕಾರ ಕರ್ನಾಟಕದಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ೪೮ ಸಾವಿರ ಕೋಟಿ ರೂಪಾಯಿಯಲ್ಲಿ ಮನ್ನಾ ಮಾಡಿರುವುದು ಕೇವಲ ೧೫ ಸಾವಿರ ಕೋಟಿ. ಅಧಿಕಾರಕ್ಕೆ ಬಂದು ಹನ್ನೊಂದು ತಿಂಗಳಾಗುತ್ತಾ ಬಂದಿದ್ದರೂ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

೨೦೧೪ ಕ್ಕೂ ಮೊದಲು ಹತ್ತು ವರ್ಷ ಆಡಳಿತ ನಡೆಸಿದ ಯುಪಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ೧೩ ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ೮೮,೫೮೩ ಕೋಟಿ ರೂಪಾಯಿ ನೀಡಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಐದೇ ವರ್ಷದಲ್ಲಿ ಕರ್ನಾಟಕಕ್ಕೆ ಹದಿನಾಲ್ಕನೇ ಹಣಕಾಸು ಆಯೋಗದ ಪ್ರಕಾರ ಮೂರು ಲಕ್ಷ ಎಂಬತ್ತೆಂಟು ಸಾವಿರದ ಒಂಬತ್ತು ನೂರ ಎಪ್ಪತ್ತೊಂದು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಇದರಲ್ಲೇ ಅರ್ಥ ಮಾಡಿಕೊಳ್ಳಿ. ನಿಮಗೆ ಯಾರು ಬೇಕೆಂದು ಎಂದು ಮನವಿ ಮಾಡಿದರು.

ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ದೇಶದಲ್ಲಿ ಇಬ್ಬರು ಪ್ರಧಾನಿಯಾಗಬೇಕು ಅಂತಾರೆ. ಇದು ಸಾಧ್ಯವೇ. ಯಾವುದೇ ಕಾರಣಕ್ಕೂ ಜಮ್ಮು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಡಲು ಸಾಧ್ಯವಿಲ್ಲ. ಇದು ನಮ್ಮ ಅವಿಭಾಜ್ಯ ಅಂಗ. ಪಾಕಿಸ್ತಾನ ಸೆದೆಬಡಿಯಲು, ಉಗ್ರವಾದ ಕೊನೆಗಾಣಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮತ್ತೆ ಬರಬೇಕು ಎಂದು ಅಭಿಪ್ರಾಯಪಟ್ಟರು.



Body:

ಕರ್ನಾಟಕದಲ್ಲಿರುವುದು ರಿಮೋಟ್ ಕಂಟ್ರೋಲ್ ಕರೆಪಕ್ಷನ್ ಸರ್ಕಾರ : ಅಮಿತ್ ಶಾ ಆರೋಪ

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ಮೂಲಕ ಕುಮಾರಸ್ವಾಮಿ ಸಿಎಂ ಮಾಡಿ, ಕಾಂಗ್ರೆಸ್ "ರಿಮೋಟ್ ಕಂಟ್ರೋಲ್ ಕರೆಪಕ್ಷನ್' ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್ ಪರ ಮತಯಾಚನೆ ಸಲುವಾಗಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕದ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೇ, ಇದು ಕಲಬೆರಕೆ ಘಟ್ ಬಂಧನ್ ಎಂದು ಟೀಕಿಸಿದರು.

ಸಿಎಂ ಕುಮಾರಸ್ವಾಮಿ ನಾನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕೃಪೆಯಿಂದ ಮುಖ್ಯಮಂತ್ರಿಯಾಗಿದ್ದೇನೆ. ಜನರಿಂದ ಆರಿಸಿ ಬಂದ ಸಿಎಂ ಅಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಚುನಾವಣೆಯಲ್ಲಿ ಗೆಲ್ಲಿಸಿದ ಜನರಿಗೆ ಮಾಡಿದ ಅಪಮಾನವಾಗಿದೆ. ಸಿಎಂ ಹುದ್ದೆಯಲ್ಲಿದ್ದುಕೊಂಡು ಜನರ ಗೌರವ ಕಾಪಾಡಬೇಕು. ಆದರೆ ಅದನ್ನು ಬಿಟ್ಟು ಗೌರವ ತೆಗೆಯುವ ಕೆಲಸ ಮಾಡುತ್ತಿರುವ ಇಂಥ ಸಿಎಂ ನಿಮಗೆ ಬೇಕಾ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಹೆಚ್ಚು ಸ್ಥಾನ ಬಂದರೂ ಜೆಡಿಎಸ್ ಕಾಂಗ್ರೆಸ್ ಅಪವಿತ್ರ ಮೈತ್ರಿಯ ಸರ್ಕಾರ ಕರ್ನಾಟಕದಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ೪೮ ಸಾವಿರ ಕೋಟಿ ರೂಪಾಯಿಯಲ್ಲಿ ಮನ್ನಾ ಮಾಡಿರುವುದು ಕೇವಲ ೧೫ ಸಾವಿರ ಕೋಟಿ. ಅಧಿಕಾರಕ್ಕೆ ಬಂದು ಹನ್ನೊಂದು ತಿಂಗಳಾಗುತ್ತಾ ಬಂದಿದ್ದರೂ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

೨೦೧೪ ಕ್ಕೂ ಮೊದಲು ಹತ್ತು ವರ್ಷ ಆಡಳಿತ ನಡೆಸಿದ ಯುಪಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ೧೩ ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ೮೮,೫೮೩ ಕೋಟಿ ರೂಪಾಯಿ ನೀಡಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಐದೇ ವರ್ಷದಲ್ಲಿ ಕರ್ನಾಟಕಕ್ಕೆ ಹದಿನಾಲ್ಕನೇ ಹಣಕಾಸು ಆಯೋಗದ ಪ್ರಕಾರ ಮೂರು ಲಕ್ಷ ಎಂಬತ್ತೆಂಟು ಸಾವಿರದ ಒಂಬತ್ತು ನೂರ ಎಪ್ಪತ್ತೊಂದು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಇದರಲ್ಲೇ ಅರ್ಥ ಮಾಡಿಕೊಳ್ಳಿ. ನಿಮಗೆ ಯಾರು ಬೇಕೆಂದು ಎಂದು ಮನವಿ ಮಾಡಿದರು.

ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ದೇಶದಲ್ಲಿ ಇಬ್ಬರು ಪ್ರಧಾನಿಯಾಗಬೇಕು ಅಂತಾರೆ. ಇದು ಸಾಧ್ಯವೇ. ಯಾವುದೇ ಕಾರಣಕ್ಕೂ ಜಮ್ಮು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಡಲು ಸಾಧ್ಯವಿಲ್ಲ. ಇದು ನಮ್ಮ ಅವಿಭಾಜ್ಯ ಅಂಗ. ಪಾಕಿಸ್ತಾನ ಸೆದೆಬಡಿಯಲು, ಉಗ್ರವಾದ ಕೊನೆಗಾಣಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮತ್ತೆ ಬರಬೇಕು ಎಂದು ಅಭಿಪ್ರಾಯಪಟ್ಟರು.



Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.