ETV Bharat / state

ಡಿ.5ಕ್ಕೆ ದಾವಣಗೆರೆ ಬಂದ್: ಗುಲಾಬಿ ನೀಡಿ ಬಂದ್​ ಬೆಂಬಲಿಸಲು ಕರವೇ ಮನವಿ

author img

By

Published : Dec 3, 2020, 6:40 PM IST

ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ್ರು ನಗರದಲ್ಲಿ ಅಂಗಡಿ ಹಾಗೂ ಹೋಟೆಲ್ ಮಾಲೀಕರಿಗೆ ಗುಲಾಬಿ ಹೂವು ನೀಡುವ ಮೂಲಕ ಡಿ.5ಕ್ಕೆ ಕರೆ ನೀಡಿರುವ ಬಂದ್​ಗೆ ಬೆಂಬಲಿಸುವಂತೆ ಮನವಿ ಮಾಡಿದರು.

Karave
ಕರವೇ ಮನವಿ

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆ ಗರಂ ಆಗಿವೆ. ತಕ್ಷಣ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸಬೇಕು ಎಂದು ಡಿಸೆಂಬರ್ 5ಕ್ಕೆ ಕರೆದಿರುವ ಕರ್ನಾಟಕ ಬಂದ್​ಗೆ ದಾವಣಗೆರೆಯಲ್ಲಿ ಬೆಂಬಲ ವ್ಯಕ್ತವಾಗಿದೆ.

ಬಂದ್ ಬೆಂಬಲಿಸುವಂತೆ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಗುಲಾಬಿ ಹೂವು ನೀಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ)ದ ಕಾರ್ಯಕರ್ತರು ವಿನೂತನವಾಗಿ ಮನವಿ ಮಾಡಿಕೊಂಡರು.

ಗುಲಾಬಿ ಹೂವು ನೀಡಿ ಬಂದ್​ಗೆ ಬೆಂಬಲಿಸಲು ಕರವೇ ಮನವಿ

ದಾವಣಗೆರೆ ನಗರದ ಎವಿಕೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಗುಲಾಬಿ ಹೂವು ನೀಡುವ ಕಾರ್ಯಕ್ರಮಕ್ಕೆ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡರು ಚಾಲನೆ ನೀಡಿ, ಅಂಗಡಿ ಹಾಗೂ ಹೋಟೆಲ್ ಮಾಲೀಕರಿಗೆ ಗುಲಾಬಿ ಹೂವು ನೀಡುವ ಮೂಲಕ ಡಿ.5ಕ್ಕೆ ಕರೆ ನೀಡಿರುವ ಬಂದ್​ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಇನ್ನು ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರಿಗೂ ಕೂಡ ಹೂವು ನೀಡಿ ಬಂದ್​​ಗೆ​ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಂಡರು.

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆ ಗರಂ ಆಗಿವೆ. ತಕ್ಷಣ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸಬೇಕು ಎಂದು ಡಿಸೆಂಬರ್ 5ಕ್ಕೆ ಕರೆದಿರುವ ಕರ್ನಾಟಕ ಬಂದ್​ಗೆ ದಾವಣಗೆರೆಯಲ್ಲಿ ಬೆಂಬಲ ವ್ಯಕ್ತವಾಗಿದೆ.

ಬಂದ್ ಬೆಂಬಲಿಸುವಂತೆ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಗುಲಾಬಿ ಹೂವು ನೀಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ)ದ ಕಾರ್ಯಕರ್ತರು ವಿನೂತನವಾಗಿ ಮನವಿ ಮಾಡಿಕೊಂಡರು.

ಗುಲಾಬಿ ಹೂವು ನೀಡಿ ಬಂದ್​ಗೆ ಬೆಂಬಲಿಸಲು ಕರವೇ ಮನವಿ

ದಾವಣಗೆರೆ ನಗರದ ಎವಿಕೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಗುಲಾಬಿ ಹೂವು ನೀಡುವ ಕಾರ್ಯಕ್ರಮಕ್ಕೆ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡರು ಚಾಲನೆ ನೀಡಿ, ಅಂಗಡಿ ಹಾಗೂ ಹೋಟೆಲ್ ಮಾಲೀಕರಿಗೆ ಗುಲಾಬಿ ಹೂವು ನೀಡುವ ಮೂಲಕ ಡಿ.5ಕ್ಕೆ ಕರೆ ನೀಡಿರುವ ಬಂದ್​ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಇನ್ನು ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರಿಗೂ ಕೂಡ ಹೂವು ನೀಡಿ ಬಂದ್​​ಗೆ​ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.