ETV Bharat / state

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕೆಎಸ್​​ಆರ್​​ಟಿಸಿ ನೌಕರರ ಪ್ರತಿಭಟನೆ

author img

By

Published : Feb 3, 2020, 6:52 PM IST

ಕೆಎಸ್​​ಆರ್​​ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ನಗರದ ಕೆಎಸ್​​ಆರ್​​ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾವನ್ನು ಕೆಎಸ್​​ಆರ್​ಟಿಸಿ ನೌಕರರು ನಡೆಸಿದರು.

KSRTC employees protest
ಕೆಎಸ್​​ಆರ್​​ಟಿಸಿ ನೌಕರರ ಪ್ರತಿಭಟನೆ

ದಾವಣಗೆರೆ: ಕರ್ನಾಟಕ ರಾಜ್ಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಕೆಎಸ್​​ಆರ್​​ಟಿಸಿ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಕೆಎಸ್​​ಆರ್​​ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದ ನೌಕರರು, ರಾಜ್ಯ ರಸ್ತೆ ಸಾರಿಗೆಯಲ್ಲಿ ಕೆಲಸ ಮಾಡುವ ನೌಕರರು, ಹಗಲು ರಾತ್ರಿ ಎನ್ನದೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಎಸ್​​ಆರ್​​ಟಿಸಿ ಸಂಸ್ಥೆ ವಿಚಾರಗಳಾದ ನೌಕರರ ವರ್ಗಾವಣೆ, ಹೊಸ ಬಸ್​​​ಗಳ ಖರೀದಿ, ಪ್ರಯಾಣಿಕರ ಟಿಕೆಟ್ ದರ ಏರಿಕೆ, ಹೀಗೆ ಹತ್ತು ಹಲವಾರು ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತೆ.

ಕೆಎಸ್​​ಆರ್​​ಟಿಸಿ ನೌಕರರ ಪ್ರತಿಭಟನೆ

ಆದರೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತ್ರ ಸರ್ಕಾರಿ ನೌಕರರೆಂದು ಪರಿಗಣಿಸದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಸರ್ಕಾರದ ಈ ಇಬ್ಬಗೆಯ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದ ಪ್ರತಿಭಟನಾನಿರತ ನೌಕರರು ಡಿಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ದಾವಣಗೆರೆ: ಕರ್ನಾಟಕ ರಾಜ್ಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಕೆಎಸ್​​ಆರ್​​ಟಿಸಿ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಕೆಎಸ್​​ಆರ್​​ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದ ನೌಕರರು, ರಾಜ್ಯ ರಸ್ತೆ ಸಾರಿಗೆಯಲ್ಲಿ ಕೆಲಸ ಮಾಡುವ ನೌಕರರು, ಹಗಲು ರಾತ್ರಿ ಎನ್ನದೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಎಸ್​​ಆರ್​​ಟಿಸಿ ಸಂಸ್ಥೆ ವಿಚಾರಗಳಾದ ನೌಕರರ ವರ್ಗಾವಣೆ, ಹೊಸ ಬಸ್​​​ಗಳ ಖರೀದಿ, ಪ್ರಯಾಣಿಕರ ಟಿಕೆಟ್ ದರ ಏರಿಕೆ, ಹೀಗೆ ಹತ್ತು ಹಲವಾರು ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತೆ.

ಕೆಎಸ್​​ಆರ್​​ಟಿಸಿ ನೌಕರರ ಪ್ರತಿಭಟನೆ

ಆದರೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತ್ರ ಸರ್ಕಾರಿ ನೌಕರರೆಂದು ಪರಿಗಣಿಸದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಸರ್ಕಾರದ ಈ ಇಬ್ಬಗೆಯ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದ ಪ್ರತಿಭಟನಾನಿರತ ನೌಕರರು ಡಿಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.