ETV Bharat / state

ಖಾಸಗಿ ಶಾಲೆ ಪರವಾನಗಿ ನವೀಕರಣಕ್ಕೆ ಲಂಚ: ಹರಿಹರ ಬಿಇಒ ಲೋಕಾಯುಕ್ತ ಬಲೆಗೆ

author img

By

Published : Dec 29, 2022, 5:28 PM IST

Updated : Dec 29, 2022, 5:45 PM IST

ಖಾಸಗಿ ಶಾಲೆಯ ಪರವಾನಗಿ ನವೀಕರಣಕ್ಕಾಗಿ ಲಂಚ ಪಡೆಯುತ್ತಿದ್ದ ಬಿಇಒ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.

lokyukta-raid-in-davangere
ಹರಿಹರ ಬಿಇಒ ಮೇಲೆ ಲೋಕಾಯುಕ್ತ ದಾಳಿ

ದಾವಣಗೆರೆ: ಶಾಲೆಯ ಪರವಾನಗಿ ನವೀಕರಣಕ್ಕೆ ಲಂಚ ಪಡೆಯುವ ಸಂದರ್ಭದಲ್ಲಿ ಹರಿಹರ ಶಿಕ್ಷಣಾಧಿಕಾರಿ ಸಿದ್ದಪ್ಪ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ನಗರದ ವಿದ್ಯಾದಾಹಿನಿ ಶಾಲೆಯ ಮುಖ್ಯಸ್ಥ ರಘುನಾಥ್ ಅವರಿಗೆ ಸೇರಿದ ಸಿಬಿಎಸ್​ಸಿ ಶಾಲೆಯ ಪರವಾನಗಿ ನವೀಕರಣಕ್ಕಾಗಿ 15 ಸಾವಿರ ರೂಪಾಯಿ ಲಂಚ ಕೇಳಿದ್ದರು. ತಮ್ಮ ಕಚೇರಿಯಲ್ಲಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಕೆಲವು ದಿನಗಳ ಹಿಂದೆ 10 ಸಾವಿರ ರೂ ಲಂಚವನ್ನು ಆರೋಪಿ ಅಧಿಕಾರಿ ಪಡೆದಿದ್ದರು ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್​ ಆಂಜನೇಯ ಹಾಗೂ ಸಿಬ್ಬಂದಿ ಬಿಇಒ ಸಿದ್ದಪ್ಪರನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ಶಾಲೆಯ ಪರವಾನಗಿ ನವೀಕರಣಕ್ಕೆ ಲಂಚ ಪಡೆಯುವ ಸಂದರ್ಭದಲ್ಲಿ ಹರಿಹರ ಶಿಕ್ಷಣಾಧಿಕಾರಿ ಸಿದ್ದಪ್ಪ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ನಗರದ ವಿದ್ಯಾದಾಹಿನಿ ಶಾಲೆಯ ಮುಖ್ಯಸ್ಥ ರಘುನಾಥ್ ಅವರಿಗೆ ಸೇರಿದ ಸಿಬಿಎಸ್​ಸಿ ಶಾಲೆಯ ಪರವಾನಗಿ ನವೀಕರಣಕ್ಕಾಗಿ 15 ಸಾವಿರ ರೂಪಾಯಿ ಲಂಚ ಕೇಳಿದ್ದರು. ತಮ್ಮ ಕಚೇರಿಯಲ್ಲಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಕೆಲವು ದಿನಗಳ ಹಿಂದೆ 10 ಸಾವಿರ ರೂ ಲಂಚವನ್ನು ಆರೋಪಿ ಅಧಿಕಾರಿ ಪಡೆದಿದ್ದರು ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್​ ಆಂಜನೇಯ ಹಾಗೂ ಸಿಬ್ಬಂದಿ ಬಿಇಒ ಸಿದ್ದಪ್ಪರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಭೂ ಅಧೀಕ್ಷಕ: ರೈತನಿಂದ ಲಂಚ ಪಡೆಯುತ್ತಿದ್ದ ಚಿತ್ತಣ್ಣ ಪಾಟೀಲ

Last Updated : Dec 29, 2022, 5:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.