ETV Bharat / state

ಮಳೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಂಸದ ಸಿದ್ದೇಶ್ವರ್ ಸೂಚನೆ - Davangere MP Siddheshwar News

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕೆಲವೆಡೆ ಯೂರಿಯಾ ಗೊಬ್ಬರ ಅಭಾವದ ಬಗ್ಗೆ ದೂರುಗಳು ಬರುತ್ತಿವೆ. ಆದರೆ ಯೂರಿಯಾಗೆ ಯಾವುದೇ ತೊಂದರೆ ಇಲ್ಲ. ಬೇಡಿಕೆ ಸಲ್ಲಿಸಿದರೆ ಪೂರೈಸಲು ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ಅಧಿಕಾರಿಗಳಿಗೆ ಸಂಸದ ಸಿದ್ದೇಶ್ವರ್ ಸೂಚನೆ
ಅಧಿಕಾರಿಗಳಿಗೆ ಸಂಸದ ಸಿದ್ದೇಶ್ವರ್ ಸೂಚನೆ
author img

By

Published : Aug 9, 2020, 2:46 PM IST

ದಾವಣಗೆರೆ : ಉತ್ತಮ ಮಳೆಯಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯಲ್ಲಿಯೂ ಅಧಿಕಾರಿಗಳು ಸನ್ನದ್ಧರಾಗುವಂತೆ ಸಂಸದ ಜಿ.ಎಂ.ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ.

ಗೂಗಲ್ ಮೀಟ್‍ ಆ್ಯಪ್‌ ಮೂಲಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಅದರೊಂದಿಗೆ ಹೆಚ್ಚು ಮಳೆಯಾಗುತ್ತಿರುವುದರಿಂದ ಎರಡೂ ಪರಿಸ್ಥಿತಿಗಳನ್ನು ಒಟ್ಟಾಗಿ ನಿಭಾಯಿಸಬೇಕಾಗಿದೆ. ಈಗಾಗಲೇ ತುಂಗಾನದಿಗೆ ಸಾಕಷ್ಟು ನೀರು ಬಂದಿದ್ದು ಕೆಲವೇ ದಿನಗಳಲ್ಲಿ ಭದ್ರಾ ನೀರು ಕೂಡಾ ಸೇರಲಿದೆ. ಹಾಗಾಗಿ, ನದಿದಂಡೆ ಮತ್ತು ನದಿಪಾತ್ರದಲ್ಲಿರುವ ಜನ-ಜಾನುವಾರುಗಳು ಪ್ರವಾಹಕ್ಕೆ ಒಳಗಾಗುವ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪ್ರವಾಹಕ್ಕೆ ಸಿಲುಕುವ ಕುಟುಂಬಗಳನ್ನು ತಕ್ಷಣ ಸ್ಥಳಾಂತರಿಸಿ ಅವರನ್ನು ಕಾಳಜಿ ಕೇಂದ್ರಗಳಿಗೆ ಕಳುಹಿಸಬೇಕು. ಈ ಹಿಂದಿನ ದಿನಗಳಲ್ಲಿ ಪ್ರವಾಹ ಊಂಟಾದರೆ ಕಾಳಜಿ ಕೇಂದ್ರಗಳನ್ನು ಮಾಡಿದಂತೆ ಈಗ ಮಾಡಲು ಬರುವುದಿಲ್ಲ. ಏಕೆಂದರೆ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಮುಖ್ಯವಾಗಿರುವುದರಿಂದ ಸುಸಜ್ಜಿತ ಸ್ಥಳಗಳನ್ನು ಗುರುತಿಸಬೇಕು. ಸಮುದಾಯ ಭವನ, ಹಜ್‍ ಭವನ, ಗುರು ಭವನಗಳನ್ನು ಗುರುತಿಸಿ ಒಂದೇ ಕಡೆ ಅಡುಗೆ ವ್ಯವಸ್ಥೆ ಮಾಡಿ ಅಲ್ಲಿಂದ ಚಿಕ್ಕ ಚಿಕ್ಕ ವಾಹನಗಳ ಮೂಲಕ ಆಹಾರ ಮತ್ತು ನೀರು ಸರಬರಾಜು ಮಾಡಬೇಕೆಂದರು.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕೆಲವೆಡೆ ಯೂರಿಯಾ ಅಭಾವದ ದೂರುಗಳಿವೆ. ಆದರೆ ಯೂರಿಯಾಗೆ ಯಾವುದೇ ತೊಂದರೆ ಇಲ್ಲ. ಬೇಡಿಕೆ ಸಲ್ಲಿಸಿದರೆ ಪೂರೈಸಲು ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜೂನ್, ಆಗಸ್ಟ್, ತಿಂಗಳಿನಲ್ಲಿ 273 ಮನೆಗಳು ಭಾಗಶಃ ಹಾನಿಯಾಗಿವೆ. ಅವರಿಗೆ 11 ಲಕ್ಷ ರೂ ಪರಿಹಾರ ನೀಡಲಾಗಿದೆ. 785 ಎಕರೆ ಬೆಳೆಹಾನಿ ಆಗಿದ್ದು 1681 ರೈತರಿಗೆ 1.14 ಕೋಟಿ ರೂ ಪರಿಹಾರ ನೀಡಲಾಗಿದೆ. ಈ ವಾರದಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು ಸೋಮವಾರ ಆ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಹೊನ್ನಾಳಿ ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ತಾಲೂಕಿನಲ್ಲಿ 500 ಎಕರೆ ಮಕ್ಕೆಜೋಳ ಬೆಳೆಹಾನಿ ಆಗಿದ್ದು, ಹೊಲಗಳಲ್ಲಿ ಬಹಳಷ್ಟು ನೀರು ನಿಂತಿದೆ. ಬೆಳೆ ಹಾನಿ ಪ್ರಮಾಣ ಅಂದಾಜಿಸಲು ಒಂದೆರಡು ದಿನ ಹಿಡಿಯುತ್ತದೆ ಎಂದರು.

ದಾವಣಗೆರೆ : ಉತ್ತಮ ಮಳೆಯಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯಲ್ಲಿಯೂ ಅಧಿಕಾರಿಗಳು ಸನ್ನದ್ಧರಾಗುವಂತೆ ಸಂಸದ ಜಿ.ಎಂ.ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ.

ಗೂಗಲ್ ಮೀಟ್‍ ಆ್ಯಪ್‌ ಮೂಲಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಅದರೊಂದಿಗೆ ಹೆಚ್ಚು ಮಳೆಯಾಗುತ್ತಿರುವುದರಿಂದ ಎರಡೂ ಪರಿಸ್ಥಿತಿಗಳನ್ನು ಒಟ್ಟಾಗಿ ನಿಭಾಯಿಸಬೇಕಾಗಿದೆ. ಈಗಾಗಲೇ ತುಂಗಾನದಿಗೆ ಸಾಕಷ್ಟು ನೀರು ಬಂದಿದ್ದು ಕೆಲವೇ ದಿನಗಳಲ್ಲಿ ಭದ್ರಾ ನೀರು ಕೂಡಾ ಸೇರಲಿದೆ. ಹಾಗಾಗಿ, ನದಿದಂಡೆ ಮತ್ತು ನದಿಪಾತ್ರದಲ್ಲಿರುವ ಜನ-ಜಾನುವಾರುಗಳು ಪ್ರವಾಹಕ್ಕೆ ಒಳಗಾಗುವ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪ್ರವಾಹಕ್ಕೆ ಸಿಲುಕುವ ಕುಟುಂಬಗಳನ್ನು ತಕ್ಷಣ ಸ್ಥಳಾಂತರಿಸಿ ಅವರನ್ನು ಕಾಳಜಿ ಕೇಂದ್ರಗಳಿಗೆ ಕಳುಹಿಸಬೇಕು. ಈ ಹಿಂದಿನ ದಿನಗಳಲ್ಲಿ ಪ್ರವಾಹ ಊಂಟಾದರೆ ಕಾಳಜಿ ಕೇಂದ್ರಗಳನ್ನು ಮಾಡಿದಂತೆ ಈಗ ಮಾಡಲು ಬರುವುದಿಲ್ಲ. ಏಕೆಂದರೆ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಮುಖ್ಯವಾಗಿರುವುದರಿಂದ ಸುಸಜ್ಜಿತ ಸ್ಥಳಗಳನ್ನು ಗುರುತಿಸಬೇಕು. ಸಮುದಾಯ ಭವನ, ಹಜ್‍ ಭವನ, ಗುರು ಭವನಗಳನ್ನು ಗುರುತಿಸಿ ಒಂದೇ ಕಡೆ ಅಡುಗೆ ವ್ಯವಸ್ಥೆ ಮಾಡಿ ಅಲ್ಲಿಂದ ಚಿಕ್ಕ ಚಿಕ್ಕ ವಾಹನಗಳ ಮೂಲಕ ಆಹಾರ ಮತ್ತು ನೀರು ಸರಬರಾಜು ಮಾಡಬೇಕೆಂದರು.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕೆಲವೆಡೆ ಯೂರಿಯಾ ಅಭಾವದ ದೂರುಗಳಿವೆ. ಆದರೆ ಯೂರಿಯಾಗೆ ಯಾವುದೇ ತೊಂದರೆ ಇಲ್ಲ. ಬೇಡಿಕೆ ಸಲ್ಲಿಸಿದರೆ ಪೂರೈಸಲು ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜೂನ್, ಆಗಸ್ಟ್, ತಿಂಗಳಿನಲ್ಲಿ 273 ಮನೆಗಳು ಭಾಗಶಃ ಹಾನಿಯಾಗಿವೆ. ಅವರಿಗೆ 11 ಲಕ್ಷ ರೂ ಪರಿಹಾರ ನೀಡಲಾಗಿದೆ. 785 ಎಕರೆ ಬೆಳೆಹಾನಿ ಆಗಿದ್ದು 1681 ರೈತರಿಗೆ 1.14 ಕೋಟಿ ರೂ ಪರಿಹಾರ ನೀಡಲಾಗಿದೆ. ಈ ವಾರದಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು ಸೋಮವಾರ ಆ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಹೊನ್ನಾಳಿ ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ತಾಲೂಕಿನಲ್ಲಿ 500 ಎಕರೆ ಮಕ್ಕೆಜೋಳ ಬೆಳೆಹಾನಿ ಆಗಿದ್ದು, ಹೊಲಗಳಲ್ಲಿ ಬಹಳಷ್ಟು ನೀರು ನಿಂತಿದೆ. ಬೆಳೆ ಹಾನಿ ಪ್ರಮಾಣ ಅಂದಾಜಿಸಲು ಒಂದೆರಡು ದಿನ ಹಿಡಿಯುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.