ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಆಸ್ಪತ್ರೆಗೆ ದಾಖಲಿಸಿದರು.
ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ರಸ್ತೆಬದಿ ನರಳಾಡುತ್ತಿದ್ದ. ಇದನ್ನು ಗಮನಿಸಿದ ಶಾಸಕರು, ಆ್ಯಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಅಪಘಾತಕ್ಕೊಳಗಾದ ವ್ಯಕ್ತಿ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಮೂಲದವರು ಎನ್ನಲಾಗಿದೆ.
![MLA Madal Virupakshappa Helps Accident Victim](https://etvbharatimages.akamaized.net/etvbharat/prod-images/11201128_t.jpg)