ETV Bharat / state

ಕಟೀಲ್ ನೇತೃತ್ವದಲ್ಲಿ ಬಿಜೆಪಿ ಹೀ‌ನಾಯ ಸೋಲು ಕಂಡಿದೆ; ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ: ರೇಣುಕಾಚಾರ್ಯ ಆಗ್ರಹ

author img

By

Published : Jun 28, 2023, 6:21 PM IST

ಹೊನ್ನಾಳಿಯಲ್ಲಿ ಬಿಜೆಪಿ ಅಧ್ಯಕ್ಷರ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲವಾದರು.

ಮಾಜಿ ಶಾಸಕ ಎಂಪಿ ರೇಣುಕಚಾರ್ಯ
ಮಾಜಿ ಶಾಸಕ ಎಂಪಿ ರೇಣುಕಚಾರ್ಯ
ನಳೀನ್​ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ

ದಾವಣಗೆರೆ : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಳೀನ್​ ಕುಮಾರ್​ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಹೀ‌ನಾಯ ಸೋಲು ಕಂಡಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಚಾರ್ಯ ವಾಗ್ದಾಳಿ ನಡೆಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿಂದು ಸ್ವಪಕ್ಷದ ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಸ್ವಪಕ್ಷ ಹಾಗೂ ನಾಯಕರ ವಿರುದ್ಧ ಮಾತಾಡಿದವರ ವಿರುದ್ದ ಶಿಸ್ತು ಕ್ರಮ ಹಾಗೂ ನೋಟಿಸ್ ಎನ್ನುತ್ತಿದ್ದೀರಿ. ಕಳೆದ 15 ದಿನಗಳಿಂದ ಒಳ ಒಪ್ಪಂದ ಎಂದು ಪಕ್ಷದ ಅತಿರಥ ಮಹಾರಥ ಮುಖಂಡರು ಮಾತನಾಡಿದಾಗ ಏಕೆ ರಾಜ್ಯಾಧ್ಯಕ್ಷರು ಮಾತನಾಡಿಲ್ಲ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೆಲವರು, ನಮ್ಮ ಪಕ್ಷದವರೇ ವಾಗ್ದಾಳಿ ನಡೆಸಿದರು. ಅವರ ವಿರುದ್ಧ ಶಿಸ್ತು‌ಕ್ರಮ ಕೈಗೊಂಡಿದ್ದೀರಾ, ಯಡಿಯೂರಪ್ಪ ಪರ ಮಾತನಾಡಿದರೆ ಪಕ್ಷ ವಿರೋಧಿನಾ? ಎಂದು ಕಿಡಿಕಾರಿದರು.

ಇಂದಿನ ಯಾವ ನಾಯಕರೂ ಬಿಜೆಪಿ ಕಟ್ಟಿ ಬೆಳೆಸಿಲ್ಲ. ಯಡಿಯೂರಪ್ಪನವರು ಹೋರಾಟ, ಪಾದಯಾತ್ರೆಗಳು ಮೂಲಕ ಪಕ್ಷವನ್ನು ರಾಜ್ಯದಲ್ಲಿ ಬೆಳೆಸಿದ್ದಾರೆ. ಹಾಗಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯಾಧ್ಯಕ್ಷರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.

ಅಂದು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ರಿ. ಆದರೆ ಬೊಮ್ಮಾಯಿ ಕೈ ಕಟ್ಟಿ ಹಾಕುವ ಮೂಲಕ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಲಿಲ್ಲ‌ ಎಂದು ಹೇಳಿದರು. ಈಗಾಲೂ ಕಾಲ ಮಿಂಚಿಲ್ಲ. ಮುಂದೆ ಜಿಲ್ಲಾ, ತಾಲೂಕು ಪಂಚಾಯತಿ ಹಾಗು ಲೋಕಸಭಾ ಚುಣಾವಣೆ ಬರುತ್ತಿದೆ. ಈ ಚುನಾವಣೆಯಲ್ಲಿ ಮತ್ತೊಮ್ಮೆ ಕಾರ್ಯಕರ್ತರನ್ನು ಮುಂದೆ ತೆಗೆದುಕೊಂಡು ಬರಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಪಕ್ಷ ಉಳಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದವರು ಯಡಿಯೂರಪ್ಪ, ದಿ. ಅನಂತ ಕುಮಾರ್, ಮಾಜಿ ಡಿಸಿಎಂ ಈಶ್ವರಪ್ಪ, ಜಗದೀಶ ಶೆಟ್ಟರ್‌. ಈ ಮೂವರನ್ನು ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಮುಗಿಸಿ ಹಾಕಿದಿರಿ. ಚುನಾವಣೆ ಪೂರ್ವದಲ್ಲಿ ಹತ್ತಾರು ಸಲ ಹೇಳಿದರೂ ಕ್ರಮ‌ ಕೈಗೊಳ್ಳಲಿಲ್ಲ. ಈ ಎಲ್ಲ ಕಾರಣಕ್ಕೆ ಬಿಜೆಪಿ ಹೀನಾಯ ಸೋಲು ಕಂಡಿದೆ ಎಂದರು.

ಇದನ್ನೂ ಓದಿ : ನಾನು ಬಾಂಬೆ ಬಾಯ್ಸ್ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ನಳೀನ್​ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ

ದಾವಣಗೆರೆ : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಳೀನ್​ ಕುಮಾರ್​ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಹೀ‌ನಾಯ ಸೋಲು ಕಂಡಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಚಾರ್ಯ ವಾಗ್ದಾಳಿ ನಡೆಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿಂದು ಸ್ವಪಕ್ಷದ ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಸ್ವಪಕ್ಷ ಹಾಗೂ ನಾಯಕರ ವಿರುದ್ಧ ಮಾತಾಡಿದವರ ವಿರುದ್ದ ಶಿಸ್ತು ಕ್ರಮ ಹಾಗೂ ನೋಟಿಸ್ ಎನ್ನುತ್ತಿದ್ದೀರಿ. ಕಳೆದ 15 ದಿನಗಳಿಂದ ಒಳ ಒಪ್ಪಂದ ಎಂದು ಪಕ್ಷದ ಅತಿರಥ ಮಹಾರಥ ಮುಖಂಡರು ಮಾತನಾಡಿದಾಗ ಏಕೆ ರಾಜ್ಯಾಧ್ಯಕ್ಷರು ಮಾತನಾಡಿಲ್ಲ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೆಲವರು, ನಮ್ಮ ಪಕ್ಷದವರೇ ವಾಗ್ದಾಳಿ ನಡೆಸಿದರು. ಅವರ ವಿರುದ್ಧ ಶಿಸ್ತು‌ಕ್ರಮ ಕೈಗೊಂಡಿದ್ದೀರಾ, ಯಡಿಯೂರಪ್ಪ ಪರ ಮಾತನಾಡಿದರೆ ಪಕ್ಷ ವಿರೋಧಿನಾ? ಎಂದು ಕಿಡಿಕಾರಿದರು.

ಇಂದಿನ ಯಾವ ನಾಯಕರೂ ಬಿಜೆಪಿ ಕಟ್ಟಿ ಬೆಳೆಸಿಲ್ಲ. ಯಡಿಯೂರಪ್ಪನವರು ಹೋರಾಟ, ಪಾದಯಾತ್ರೆಗಳು ಮೂಲಕ ಪಕ್ಷವನ್ನು ರಾಜ್ಯದಲ್ಲಿ ಬೆಳೆಸಿದ್ದಾರೆ. ಹಾಗಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯಾಧ್ಯಕ್ಷರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.

ಅಂದು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ರಿ. ಆದರೆ ಬೊಮ್ಮಾಯಿ ಕೈ ಕಟ್ಟಿ ಹಾಕುವ ಮೂಲಕ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಲಿಲ್ಲ‌ ಎಂದು ಹೇಳಿದರು. ಈಗಾಲೂ ಕಾಲ ಮಿಂಚಿಲ್ಲ. ಮುಂದೆ ಜಿಲ್ಲಾ, ತಾಲೂಕು ಪಂಚಾಯತಿ ಹಾಗು ಲೋಕಸಭಾ ಚುಣಾವಣೆ ಬರುತ್ತಿದೆ. ಈ ಚುನಾವಣೆಯಲ್ಲಿ ಮತ್ತೊಮ್ಮೆ ಕಾರ್ಯಕರ್ತರನ್ನು ಮುಂದೆ ತೆಗೆದುಕೊಂಡು ಬರಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಪಕ್ಷ ಉಳಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದವರು ಯಡಿಯೂರಪ್ಪ, ದಿ. ಅನಂತ ಕುಮಾರ್, ಮಾಜಿ ಡಿಸಿಎಂ ಈಶ್ವರಪ್ಪ, ಜಗದೀಶ ಶೆಟ್ಟರ್‌. ಈ ಮೂವರನ್ನು ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಮುಗಿಸಿ ಹಾಕಿದಿರಿ. ಚುನಾವಣೆ ಪೂರ್ವದಲ್ಲಿ ಹತ್ತಾರು ಸಲ ಹೇಳಿದರೂ ಕ್ರಮ‌ ಕೈಗೊಳ್ಳಲಿಲ್ಲ. ಈ ಎಲ್ಲ ಕಾರಣಕ್ಕೆ ಬಿಜೆಪಿ ಹೀನಾಯ ಸೋಲು ಕಂಡಿದೆ ಎಂದರು.

ಇದನ್ನೂ ಓದಿ : ನಾನು ಬಾಂಬೆ ಬಾಯ್ಸ್ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.