ETV Bharat / state

ನಾನು ಯಡಿಯೂರಪ್ಪ ಪಟ್ಟ ಶಿಷ್ಯ, ಸಿಎಂ ಬದಲಾವಣೆ ಆಗೋದಿಲ್ಲ: ಸಂಸದ ಜಿಎಂ ಸಿದ್ದೇಶ್ವರ್

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸಂಸದ ಜಿಎಂ ಸಿದ್ದೇಶ್ವರ್ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

author img

By

Published : Jun 1, 2021, 4:43 PM IST

MP Siddeshwar
ಸಂಸದ ಜಿಎಂ ಸಿದ್ದೇಶ್ವರ್

ದಾವಣಗೆರೆ: ನಾನು ಯಡಿಯೂರಪ್ಪ ಪಟ್ಟ ಶಿಷ್ಯ, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗೋದಿಲ್ಲ ಎಂದು ಸಂಸದ ಜಿಎಂ ಸಿದ್ದೇಶ್ವರ್ ಬಿಎಸ್ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಸಂಸದ ಜಿಎಂ ಸಿದ್ದೇಶ್ವರ್

ಹರಿಹರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಶಂಕುಸ್ಥಾಪನೆ ನಂತರ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ದಕ್ಷ ಆಡಳಿತ ನಡೆಸುತ್ತಿದ್ದಾರೆ. ಕೇವಲ ಊಹಾಪೋಹಗಳಿಗೆ ಯಾರು ತಲೆಕೆಡಿಸಿಕೊಳ್ಳುವಂತಿಲ್ಲ. ಶಿಸ್ತು ಮೀರಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ವರಿಷ್ಠರಿದ್ದಾರೆ. ಯಡಿಯೂರಪ್ಪ ಬಿಟ್ಟು ರಾಜ್ಯದಲ್ಲಿ ಸಮರ್ಥ ನಾಯಕ ಬೇರೆ ಯಾರೂ ಇಲ್ಲ ಎಂದರು‌.

ಇನ್ನೂ ಸಚಿವ ಭೈರತಿ ಬಸವರಾಜ್ ಮಾತನಾಡಿ, ಬಿವೈ ವಿಜಯೇಂದ್ರ ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೋ ಗೊತ್ತಿಲ್ಲ, ಅವರ ವೈಯಕ್ತಿಕ ಕೆಲಸಕ್ಕಾಗಿ ಹೋಗಿರಬಹುದು. ನನಗೂ ಮಾಧ್ಯಮಗಳಿಂದ ಗೊತ್ತಾಯಿತು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಬಿಎಸ್​ವೈ ಸಿಎಂ ಆಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.

ಕೊರೊನಾ ಗೆದ್ದ 35 ದಿನಗಳ ಮುದ್ದು ಕಂದ

ದಾವಣಗೆರೆ: ನಾನು ಯಡಿಯೂರಪ್ಪ ಪಟ್ಟ ಶಿಷ್ಯ, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗೋದಿಲ್ಲ ಎಂದು ಸಂಸದ ಜಿಎಂ ಸಿದ್ದೇಶ್ವರ್ ಬಿಎಸ್ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಸಂಸದ ಜಿಎಂ ಸಿದ್ದೇಶ್ವರ್

ಹರಿಹರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಶಂಕುಸ್ಥಾಪನೆ ನಂತರ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ದಕ್ಷ ಆಡಳಿತ ನಡೆಸುತ್ತಿದ್ದಾರೆ. ಕೇವಲ ಊಹಾಪೋಹಗಳಿಗೆ ಯಾರು ತಲೆಕೆಡಿಸಿಕೊಳ್ಳುವಂತಿಲ್ಲ. ಶಿಸ್ತು ಮೀರಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ವರಿಷ್ಠರಿದ್ದಾರೆ. ಯಡಿಯೂರಪ್ಪ ಬಿಟ್ಟು ರಾಜ್ಯದಲ್ಲಿ ಸಮರ್ಥ ನಾಯಕ ಬೇರೆ ಯಾರೂ ಇಲ್ಲ ಎಂದರು‌.

ಇನ್ನೂ ಸಚಿವ ಭೈರತಿ ಬಸವರಾಜ್ ಮಾತನಾಡಿ, ಬಿವೈ ವಿಜಯೇಂದ್ರ ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೋ ಗೊತ್ತಿಲ್ಲ, ಅವರ ವೈಯಕ್ತಿಕ ಕೆಲಸಕ್ಕಾಗಿ ಹೋಗಿರಬಹುದು. ನನಗೂ ಮಾಧ್ಯಮಗಳಿಂದ ಗೊತ್ತಾಯಿತು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಬಿಎಸ್​ವೈ ಸಿಎಂ ಆಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.

ಕೊರೊನಾ ಗೆದ್ದ 35 ದಿನಗಳ ಮುದ್ದು ಕಂದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.