ದಾವಣಗೆರೆ: ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಲು ಜನರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ನಗರದ 20ನೇ ವಾರ್ಡ್ನ ಭಾರತ್ ಕಾಲೋನಿಯಲ್ಲಿ ನಿರ್ಮಾಣವಾಗಿದ್ದು, ಜನರು ಪರದಾಡುವಂತಾಗಿದೆ.
ದಿನನಿತ್ಯದ ಕೆಲಸ ಕಾರ್ಯಗಳನ್ನು ಬಿಟ್ಟು ಬೆಳಿಗ್ಗೆಯಿಂದ ರಾತ್ರಿಯವರೆಗೆ ಕಾದು ಕುಳಿತರೂ ಆಧಾರ್ ಕಾರ್ಡ್ ತಿದ್ದುಪಡಿ ಆಗುತ್ತಿಲ್ಲ. ಕಂಪ್ಯೂಟರ್ ಆಪರೇಟರ್ಗಳನ್ನು ಕೇಳಿದ್ರೆ, ಸರ್ವರ್ ಬ್ಯುಸಿ ಇದೆ ಎಂದು ಸಬೂಬು ಹೇಳುತ್ತಾರೆ ಎಂದು ಆರೋಪಿಸಿದರು.
ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಸರಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.