ETV Bharat / state

ಒಳ್ಳೆ ಕಥೆ ಸಿಕ್ಕರೆ ಶಿವಣ್ಣ, ರಾಘಣ್ಣ, ನಾನು ಒಟ್ಟಿಗೆ ನಟಿಸುತ್ತೇವೆ: ಪುನೀತ್​​ - ನಟಸಾರ್ವಭೌಮ

ಒಳ್ಳೆಯ ಕಥೆ ಸಿಕ್ಕರೆ ಶಿವಣ್ಣ, ರಾಘಣ್ಣ ಹಾಗೂ ನಾನು ಒಟ್ಟಿಗೆ ನಟಿಸುತ್ತೇವೆ ಎಂದು ಪುನೀತ್ ರಾಜ್​ಕುಮಾರ್ ಹೇಳಿದ್ದಾರೆ. ನಟಸಾರ್ವಭೌಮ ಸಿನಿಮಾದ ವಿಜಯಯಾತ್ರೆಯಲ್ಲಿರುವ ಪುನೀತ್ ನಿನ್ನೆ ದಾವಣಗೆರೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗೊಷ್ಟಿಯಲ್ಲಿ ಮಾತನಾಡಿದರು.

ಪುನೀತ್​ ರಾಜ್​​ಕುಮಾರ್​
author img

By

Published : Mar 4, 2019, 9:48 AM IST

ದಾವಣಗೆರೆ: ನಟಸಾರ್ವಭೌಮ ಸಿನಿಮಾ ವಿಜಯಯಾತ್ರೆ ನಡೆಸುತ್ತಿರುವ ಚಿತ್ರತಂಡ ನಿನ್ನೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಇನ್ನಿತರ ಜಿಲ್ಲೆಗಳಿಗೆ ಭೇಟಿ ನೀಡಿದೆ. ಪ್ರಮುಖ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿರುವ ಚಿತ್ರತಂಡ ಅಭಿಮಾನಿಗಳನ್ನು ಭೇಟಿ ಮಾಡಿ ಬರುತ್ತಿದೆ.

ಪುನೀತ್​ ರಾಜ್​​ಕುಮಾರ್​

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್ ರಾಜ್​ಕುಮಾರ್​,​ ಶಿವಣ್ಣ , ರಾಘಣ್ಣ ಹಾಗೂ ನಾನು ಒಟ್ಟಾಗಿ ಸಿನಿಮಾ ಮಾಡಬೇಕು ಎಂಬ ಆಸೆ ನಮಗೂ ಇದೆ. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಒಳ್ಳೆ ಕಥೆಗಾಗಿ ಕಾಯುತ್ತಿದ್ದೇವೆ. ನಮಗೆ ಹೊಂದುವ ಕಥೆ ಸಿಕ್ಕರೆ ಖಂಡಿತ ಒಟ್ಟಿಗೆ ನಟಿಸುತ್ತೇವೆ ಎಂದರು. ನಟಸಾರ್ವಭೌಮ ಸಿನಿಮಾ 25 ದಿನಗಳನ್ನು ಪೂರೈಸಿದೆ. ಅದಕ್ಕಾಗಿ ದಾವಣಗೆರೆಗೆ ಭೇಟಿ ನೀಡಿದ್ದೇನೆ. ಇದು ನನ್ನ ಫೇವರೆಟ್ ಜಾಗ. ಸದ್ಯಕ್ಕೆ ಹುಬ್ಬಳ್ಳಿಯಲ್ಲಿ 'ಯುವರತ್ನ' ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಿದರು.

ಇನ್ನು ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿರುವ ನಟಿ ಸುಮಲತಾ ಅವರಿಗೆ ಬೆಂಬಲ ನೀಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುನೀತ್, ನಟ-ನಟಿಯರ ರಾಜಕೀಯ ಪ್ರವೇಶದ ಬಗ್ಗೆ ನಾನು ಏನೂ ಹೇಳುವುದಿಲ್ಲ. ನಾನೊಬ್ಬ ನಟ ಅಷ್ಟೆ. ನಮ್ಮ ಕುಟುಂಬ ಯಾವೂದೇ ಕಾರಣಕ್ಕೂ ರಾಜಕೀಯಕ್ಕೆ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ದಾವಣಗೆರೆ: ನಟಸಾರ್ವಭೌಮ ಸಿನಿಮಾ ವಿಜಯಯಾತ್ರೆ ನಡೆಸುತ್ತಿರುವ ಚಿತ್ರತಂಡ ನಿನ್ನೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಇನ್ನಿತರ ಜಿಲ್ಲೆಗಳಿಗೆ ಭೇಟಿ ನೀಡಿದೆ. ಪ್ರಮುಖ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿರುವ ಚಿತ್ರತಂಡ ಅಭಿಮಾನಿಗಳನ್ನು ಭೇಟಿ ಮಾಡಿ ಬರುತ್ತಿದೆ.

ಪುನೀತ್​ ರಾಜ್​​ಕುಮಾರ್​

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್ ರಾಜ್​ಕುಮಾರ್​,​ ಶಿವಣ್ಣ , ರಾಘಣ್ಣ ಹಾಗೂ ನಾನು ಒಟ್ಟಾಗಿ ಸಿನಿಮಾ ಮಾಡಬೇಕು ಎಂಬ ಆಸೆ ನಮಗೂ ಇದೆ. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಒಳ್ಳೆ ಕಥೆಗಾಗಿ ಕಾಯುತ್ತಿದ್ದೇವೆ. ನಮಗೆ ಹೊಂದುವ ಕಥೆ ಸಿಕ್ಕರೆ ಖಂಡಿತ ಒಟ್ಟಿಗೆ ನಟಿಸುತ್ತೇವೆ ಎಂದರು. ನಟಸಾರ್ವಭೌಮ ಸಿನಿಮಾ 25 ದಿನಗಳನ್ನು ಪೂರೈಸಿದೆ. ಅದಕ್ಕಾಗಿ ದಾವಣಗೆರೆಗೆ ಭೇಟಿ ನೀಡಿದ್ದೇನೆ. ಇದು ನನ್ನ ಫೇವರೆಟ್ ಜಾಗ. ಸದ್ಯಕ್ಕೆ ಹುಬ್ಬಳ್ಳಿಯಲ್ಲಿ 'ಯುವರತ್ನ' ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಿದರು.

ಇನ್ನು ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿರುವ ನಟಿ ಸುಮಲತಾ ಅವರಿಗೆ ಬೆಂಬಲ ನೀಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುನೀತ್, ನಟ-ನಟಿಯರ ರಾಜಕೀಯ ಪ್ರವೇಶದ ಬಗ್ಗೆ ನಾನು ಏನೂ ಹೇಳುವುದಿಲ್ಲ. ನಾನೊಬ್ಬ ನಟ ಅಷ್ಟೆ. ನಮ್ಮ ಕುಟುಂಬ ಯಾವೂದೇ ಕಾರಣಕ್ಕೂ ರಾಜಕೀಯಕ್ಕೆ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Intro:Body:





ಸಿನಿಮಾ

ಒಳ್ಳೆ ಕಥೆ ಸಿಕ್ಕರೆ ಶಿವಣ್ಣ, ರಾಘಣ್ಣ, ನಾನು ಒಟ್ಟಿಗೆ ನಟಿಸುತ್ತೇವೆ: ಪುನೀತ್​​

Puneet rajkumar said that if we get good script Shivanna, Raghanna and me act together





ದಾವಣಗೆರೆ: ನಟಸಾರ್ವಭೌಮ ಸಿನಿಮಾ ವಿಜಯಯಾತ್ರೆ ನಡೆಸುತ್ತಿರುವ ಚಿತ್ರತಂಡ ನಿನ್ನೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಇನ್ನಿತರ ಜಿಲ್ಲೆಗಳಿಗೆ ಭೇಟಿ ನೀಡಿದೆ. ಪ್ರಮುಖ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿರುವ ಚಿತ್ರತಂಡ ಅಭಿಮಾನಿಗಳನ್ನು ಭೇಟಿ ಮಾಡಿ ಬರುತ್ತಿದೆ.



ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್ ರಾಜ್​ಕುಮಾರ್​,​ ಶಿವಣ್ಣ , ರಾಘಣ್ಣ ಹಾಗೂ ನಾನು ಒಟ್ಟಾಗಿ ಸಿನಿಮಾ ಮಾಡಬೇಕು ಎಂಬ ಆಸೆ ನಮಗೂ ಇದೆ. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಒಳ್ಳೆ ಕಥೆಗಾಗಿ ಕಾಯುತ್ತಿದ್ದೇವೆ. ನಮಗೆ ಹೊಂದುವ ಕಥೆ ಸಿಕ್ಕರೆ ಖಂಡಿತ ಒಟ್ಟಿಗೆ ನಟಿಸುತ್ತೇವೆ ಎಂದರು. ನಟಸಾರ್ವಭೌಮ ಸಿನಿಮಾ 25 ದಿನಗಳನ್ನು ಪೂರೈಸಿದೆ. ಅದಕ್ಕಾಗಿ ದಾವಣಗೆರೆಗೆ ಭೇಟಿ ನೀಡಿದ್ದೇನೆ. ಇದು ನನ್ನ ಫೇವರೆಟ್ ಜಾಗ. ಸದ್ಯಕ್ಕೆ ಹುಬ್ಬಳ್ಳಿಯಲ್ಲಿ 'ಯುವರತ್ನ' ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಿದರು.



ಇನ್ನು ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿರುವ ನಟಿ ಸುಮಲತಾ ಅವರಿಗೆ ಬೆಂಬಲ ನೀಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುನೀತ್, ನಟ-ನಟಿಯರ ರಾಜಕೀಯ ಪ್ರವೇಶದ ಬಗ್ಗೆ ನಾನು ಏನೂ ಹೇಳುವುದಿಲ್ಲ. ನಾನೊಬ್ಬ ನಟ ಅಷ್ಟೆ. ನಮ್ಮ ಕುಟುಂಬ ಯಾವೂದೇ ಕಾರಣಕ್ಕೂ ರಾಜಕೀಯಕ್ಕೆ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದರು.




Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.