ETV Bharat / state

'ಸ್ಮಾರ್ಟ್ ಸಿಟಿ'ಯಲ್ಲಿ ಸ್ಮಾರ್ಟ್​​ ಆಗದೇ ಉಳಿದ ರೈಲ್ವೆ ಓವರ್ ಬ್ರಿಡ್ಜ್

author img

By

Published : Dec 27, 2019, 11:44 AM IST

ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ದಾವಣಗೆರೆಯ ಹಳೆ ದಾವಣಗೆರೆ, ಹೊಸ ದಾವಣಗೆರೆ ಸಂಪರ್ಕಿಸುವ ರೈಲ್ವೆ ಓವರ್ ಬ್ರಿಡ್ಜ್ ಕನಸಾಗಿಯೇ ಉಳಿದಿದೆ. ಪ್ರತಿನಿತ್ಯ ಸಾವಿರಾರು ವಾಹನ ಸಂಚರಿಸುವ ಈ ಮಾರ್ಗದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ಮಾಡುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿಕೊಂಡು ಬಂದರೂ ಇಂದಿಗೂ ಓವರ್ ಬ್ರಿಡ್ಜ್ ನಿರ್ಮಾಣವಾಗಿಲ್ಲ. ಇದರಿಂದ ಜನರು ನಿತ್ಯ ನರಕ ಅನುಭವಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ದೂರು. ಮೂರು ಭಾರಿ ಸಂಸದರಾಗಿರುವ ಜಿಎಂ ಸಿದ್ದೇಶ್ವರ್ ನಾಲ್ಕನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಅಂತಾರೆ ಇಲ್ಲಿನ ಜನರು.

Railway Over Bridge Incomplete In Davanagere
'ಸ್ಮಾರ್ಟ್ ಸಿಟಿ'ಯಲ್ಲಿ ಸ್ಮಾರ್ಟ್​​ ಆಗದೇ ಉಳಿದ ರೈಲ್ವೆ ಓವರ್ ಬ್ರಿಡ್ಜ್

ದಾವಣಗೆರೆ: ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿರುವ ಹಳೇ ದಾವಣಗೆರೆ, ಹೊಸ ದಾವಣಗೆರೆ ಸಂಪರ್ಕಿಸುವ ರೈಲ್ವೆ ಓವರ್ ಬ್ರಿಡ್ಜ್ ಕನಸಾಗಿಯೇ ಉಳಿದಿದೆ. ಪ್ರತಿನಿತ್ಯ ಸಾವಿರಾರು ವಾಹನ ಸಂಚರಿಸುವ ಈ ಮಾರ್ಗದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ಮಾಡುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿಕೊಂಡು ಬಂದರೂ ಇಂದಿಗೂ ಓವರ್ ಬ್ರಿಡ್ಜ್ ನಿರ್ಮಾಣವಾಗಿಲ್ಲ. ಇದರಿಂದ ಜನರು ನಿತ್ಯ ನರಕ ಅನುಭವಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ದೂರು.

ಮೂರು ಬಾರಿ ಸಂಸದರಾಗಿರುವ ಜಿ ಎಂ ಸಿದ್ದೇಶ್ವರ್ ನಾಲ್ಕನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಅಂತಾರೆ ಇಲ್ಲಿನ ಜನರು.

'ಸ್ಮಾರ್ಟ್ ಸಿಟಿ'ಯಲ್ಲಿ ಸ್ಮಾರ್ಟ್​​ ಆಗದೇ ಉಳಿದ ರೈಲ್ವೆ ಓವರ್ ಬ್ರಿಡ್ಜ್
ಅಶೋಕ ರೈಲ್ವೆ ಬ್ರಿಡ್ಜ್‌ ನಿರ್ಮಾಣಕ್ಕೆ ಆಗ್ರಹಿಸಿ ಈ ಹಿಂದೆ ಜಿಲ್ಲಾ ಜೆಡಿಎಸ್ ಪಕ್ಷ ಬೃಹತ್ ಧರಣಿ ಸತ್ಯಾಗ್ರಹ ನಡೆಸಿತ್ತು. ಅಂದು ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್. ರಮೇಶ್ ಬಳಿಕ ಬಂದ ಡಿಸಿ ಗೌತಮ್ ಬಗಾದಿ ಮತ್ತು ಹಾಲಿ ಇರುವ ಡಿ ಸಿ ಮಹಾಂತೇಶ್ ಬೀಳಗಿಯವರು ಬ್ರಿಡ್ಜ್ ನಿರ್ಮಿಸುವ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಇದುವರೆಗೂ ಕಾಮಗಾರಿ ಮಾತ್ರ ಶುರುವಾಗಿಲ್ಲ ಎಂದು ಅಮಾನುಲ್ಲಾ ಖಾನ್ ದೂರಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗೆ 35 ಕೋಟಿ ರೂಪಾಯಿ ಅನುದಾನ ಬಂದಿದ್ದರೂ ಕಾಮಗಾರಿ ಏಕೆ ಆರಂಭವಾಗಿಲ್ಲ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ರು. ಇದೇ ವೇಳೆ ಜನರಿಗೆ ಯಾವುದೇ ತೊಂದರೆಯಾಗದಂತೆ ತನ್ನ ಅವಧಿಯಲ್ಲೇ ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಮುಗಿಸುವುದಾಗಿ ಭರವಸೆ ಕೊಟ್ಟಿದ್ದಾರೆ.

ದಾವಣಗೆರೆ: ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿರುವ ಹಳೇ ದಾವಣಗೆರೆ, ಹೊಸ ದಾವಣಗೆರೆ ಸಂಪರ್ಕಿಸುವ ರೈಲ್ವೆ ಓವರ್ ಬ್ರಿಡ್ಜ್ ಕನಸಾಗಿಯೇ ಉಳಿದಿದೆ. ಪ್ರತಿನಿತ್ಯ ಸಾವಿರಾರು ವಾಹನ ಸಂಚರಿಸುವ ಈ ಮಾರ್ಗದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ಮಾಡುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿಕೊಂಡು ಬಂದರೂ ಇಂದಿಗೂ ಓವರ್ ಬ್ರಿಡ್ಜ್ ನಿರ್ಮಾಣವಾಗಿಲ್ಲ. ಇದರಿಂದ ಜನರು ನಿತ್ಯ ನರಕ ಅನುಭವಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ದೂರು.

ಮೂರು ಬಾರಿ ಸಂಸದರಾಗಿರುವ ಜಿ ಎಂ ಸಿದ್ದೇಶ್ವರ್ ನಾಲ್ಕನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಅಂತಾರೆ ಇಲ್ಲಿನ ಜನರು.

'ಸ್ಮಾರ್ಟ್ ಸಿಟಿ'ಯಲ್ಲಿ ಸ್ಮಾರ್ಟ್​​ ಆಗದೇ ಉಳಿದ ರೈಲ್ವೆ ಓವರ್ ಬ್ರಿಡ್ಜ್
ಅಶೋಕ ರೈಲ್ವೆ ಬ್ರಿಡ್ಜ್‌ ನಿರ್ಮಾಣಕ್ಕೆ ಆಗ್ರಹಿಸಿ ಈ ಹಿಂದೆ ಜಿಲ್ಲಾ ಜೆಡಿಎಸ್ ಪಕ್ಷ ಬೃಹತ್ ಧರಣಿ ಸತ್ಯಾಗ್ರಹ ನಡೆಸಿತ್ತು. ಅಂದು ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್. ರಮೇಶ್ ಬಳಿಕ ಬಂದ ಡಿಸಿ ಗೌತಮ್ ಬಗಾದಿ ಮತ್ತು ಹಾಲಿ ಇರುವ ಡಿ ಸಿ ಮಹಾಂತೇಶ್ ಬೀಳಗಿಯವರು ಬ್ರಿಡ್ಜ್ ನಿರ್ಮಿಸುವ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಇದುವರೆಗೂ ಕಾಮಗಾರಿ ಮಾತ್ರ ಶುರುವಾಗಿಲ್ಲ ಎಂದು ಅಮಾನುಲ್ಲಾ ಖಾನ್ ದೂರಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗೆ 35 ಕೋಟಿ ರೂಪಾಯಿ ಅನುದಾನ ಬಂದಿದ್ದರೂ ಕಾಮಗಾರಿ ಏಕೆ ಆರಂಭವಾಗಿಲ್ಲ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ರು. ಇದೇ ವೇಳೆ ಜನರಿಗೆ ಯಾವುದೇ ತೊಂದರೆಯಾಗದಂತೆ ತನ್ನ ಅವಧಿಯಲ್ಲೇ ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಮುಗಿಸುವುದಾಗಿ ಭರವಸೆ ಕೊಟ್ಟಿದ್ದಾರೆ.
Intro:ದಾವಣಗೆರೆ: ನಗರದ ಅಶೋಕ ರೈಲ್ವೆ ಗೇಟ್ ಸಮಸ್ಯೆಗೆ ದಶಕಗಳೇ ಕಳೆದಿವೆ, ಕಳೆದ ಮೂರು ದಶಕಗಳಿಂದ ಈ ಯೋಜನೆಗಾಗೀ ಸಾಕಷ್ಟು ಹೋರಾಟ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ, ಜೆಡಿಎಸ್ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ನೂರಾರು ಹೋರಾಟಗಳು ನಡೆದರು ಯೋಜನೆ ಮಾತ್ರ ನಡೆದಿಲ್ಲ. ಪ್ರತಿನಿತ್ಯ ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದ ಪರದಾಡ ಬೇಕಾದ ಸ್ಥಿತಿ ಇಲ್ಲಿ ನಿರ್ಮಾಣವಾಗಿದ್ದು. ಈ ಹಿನ್ನಲೆ ಜೆಡಿಎಸ್ ಮತ್ತೇ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದೆ..

Body:ವಾಯ್ಸ್ ೧: ಹೌದು.. ದಾವಣಗೆರೆ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದ್ದೆ ತಡ ದಾವಣಗೆರೆ ಸ್ಮಾರ್ಟ್ ಆಗಿ ಹೊಳೆಯುತ್ತೆ ಎಂದು ಭಾವಿಸಲಾಗಿತ್ತು, ಆದರೆ ಸ್ಮಾರ್ಟ್ ಕಾರ್ಯಗಳು ಸರಿಯಾಗಿ ಟೇಕಾಫ್ ಆಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದ್ದು, ಇಲ್ಲಿ ಸ್ಮಾರ್ಟ್ ಎಂಬುದು ಮಾತ್ರ ಮರೀಚಿಕೆಯಾಗಿದೆ. ನಗರದಲ್ಲಿ ಸುಮಾರು ೬ ಲಕ್ಷಕ್ಕೂ ಅಧಿಕ ಮಂದಿ ವಾಸ ಮಾಡುತ್ತಿದ್ದು, ಹಳೇ ದಾವಣಗೆರೆ, ಹೊಸ ದಾವಣಗೆರೆ ಸಂಪರ್ಕಿಸುವ ರೈಲ್ವೆ ಓವರ್ ಬ್ರಿಡ್ಜ್ ಎಂಬುದು ಕನಸಾಗೇ ಉಳಿದಿದೆ. ಪ್ರತಿನಿತ್ಯ ಸಾವಿರಾರು ವಾಹನ ಸಂಚರಿಸುವ ಈ ಮಾರ್ಗದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ಮಾಡುವಂತೆ ಸಾಕಷ್ಟು ಬಾರೀ ಹೋರಾಟ ಮಾಡಿಕೊಂಡು ಬಂದರೂ ಇಂದಿಗೂ ಓವರ್ ಬ್ರಿಡ್ಜ್ ಮಾತ್ರ ಆಗಿಲ್ಲಾ. ಇದರಿಂದ ಜನರು ನಿತ್ಯ ನರಕ ಅನುಭವಿಸುತ್ತಿದ್ದಾರೆ. ನಾಲ್ಕು ಭಾರಿ ಸಂಸದರಾಗಿರುವ ಜಿಎಂ ಸಿದ್ದೇಶ್ವರ್ ನಾಲ್ಕನೇ ಭಾರೀ ಸಂಸದರಾಗಿ ಆಯ್ಕೆಯಾಗಿದ್ದರು ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ, ಇನ್ನೂ ಈ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಂತೇಶ್ ಬಿಳಿಗಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಯೇ ೩೫ ಕೋಟಿ ಅನುಧಾನ ಬಂದಿದ್ದರೂ ಕಾಮಗಾರಿ ಏಕೆ ಆರಂಭವಾಗಿಲ್ಲಾ ಎಂದು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಅವರು, ಜನರಿಗೆ ಯಾವುದೇ ತೊಂದರೆಯಾಗದಂತೆ ತನ್ನ ಅವಧಿಯಲ್ಲಿ ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಮಾಡೇ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದರು ಸಹ ಇದುವರೆಗೂ ಕಾಮಗಾರಿ ಶುರುವಾಗಿಲ್ಲ..

ಬೈಟ್ ೧: ಅಮಾನುಲ್ಲಾ ಖಾನ್.. ಜೆಡಿಎಸ್ ಮುಖಂಡ

ಜೆಡಿಎಸ್ ಮತ್ತೆ ಹೋರಾಟ..

ವಾಯ್ಸ್೨: ಅಶೋಕ ರೈಲ್ವೆ ಬ್ರಿಡ್ಜ್ ಗೆ ಆಗ್ರಹಿಸಿ ಈ ಹಿಂದೆ ಜಿಲ್ಲಾ ಜೆಡಿಎಸ್ ಪಕ್ಷ ಬೃಹತ್ ಧರಣಿ ಸತ್ಯಾಗ್ರಹ ನಡೆಸಿತ್ತು, ಅಂದು ಜಿಲ್ಲಾಧಿಕಾರಿಯಾಗಿದ್ದ ಡಿಎಸ್ ರಮೇಶ್, ಬಳಿಕ ಬಂದ ಡಿಸಿ ಗೌತಮ್ ಬಗಾದಿ ಮತ್ತು ಹಾಲಿ ಇರುವ ಡಿಸಿ ಮಹಾಂತೇಶ್ ಬೀಳಗಿಯವರು ಬ್ರಿಡ್ಜ್ ನಿರ್ಮಿಸುವ ಭರವಸೆ ನೀಡುತ್ತಲೇ ಬಂದಿದ್ದಾರೆ, ಆದರೆ ಇದುವರೆಗೂ ಕಾಮಗಾರಿ ಮಾತ್ರ ಶುರುವಾಗಿಲ್ಲ, ಈ ಹಿನ್ನಲೆ ಜೆಡಿಎಸ್ ನಿಂದ ಮತ್ತೆ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಮುಖಂಡ ಅಮಾನುಲ್ಲಾ ಖಾನ್ ತಿಳಿಸಿದ್ದಾರೆ..

ಬೈಟ್ ೨: ಅಮಾನುಲ್ಲಾ ಖಾನ್.. ಜೆಡಿಎಸ್ ಮುಖಂಡ

Conclusion:ವಾಯ್ಸ್ ೩: ಒಟ್ಟಾರೆ ಅಶೋಕ ರೈಲ್ವೆ ಗೇಟ್ ಸಮಸ್ಯೆ ಮೂರು ದಶಕಗಳ ಸಮಸ್ಯೆಯಾಗಿದ್ದು, ಇದಕ್ಕೆ ತಮ್ಮ ಅವಧಿಯಲ್ಲಿ ಕಾಯಕಲ್ಪ ನೀಡುವ ವಿಶ್ವಾಸವನ್ನು ಜಿಲ್ಲಾಧಿಕಾರಿಗಳು ವ್ಯಕ್ತ ಪಡಿಸಿದ್ದರು, ಕಾಮಗಾರಿ ಮಾತ್ರ ಶುರುವಾಗಿಲ್ಲ, ಈ ಹಿನ್ನಲೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದು, ಇನ್ನಾದರು ಬ್ರಿಡ್ಜ್ ನಿರ್ಮಿಸಲು ಮುಂದಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ..

ಮಧುನಾಗರಾಜ್ ಈಟಿವಿ ಭಾರತ್ ದಾವಣಗೆರೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.