ETV Bharat / state

ದಾವಣಗೆರೆ ಜಿ.ಪಂ. ಉಪಾಧ್ಯಕ್ಷರಾಗಿ ಸಾಕಮ್ಮ ಗಂಗಾಧರ ನಾಯ್ಕ್ ಅವಿರೋಧ ಆಯ್ಕೆ - ದಾವಣಗೆರೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ

ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆ ಬೆಳಿಗ್ಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಮ್ಮ ಗಂಗಾಧರ ನಾಯ್ಕ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Sakamma gangadar naik
Sakamma gangadar naik
author img

By

Published : Jun 6, 2020, 11:57 PM IST

ದಾವಣಗೆರೆ: ಜಿಲ್ಲಾ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲೂಕಿನ ಕೋಗಲೂರು ಕ್ಷೇತ್ರದ ಸಾಕಮ್ಮ ಗಂಗಾಧರ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ, ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಬೆಳಿಗ್ಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಜಿ.ಪಂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Sakamma gangadar naik
ದಾವಣಗೆರೆ ಜಿ.ಪಂ ಉಪಾಧ್ಯಕ್ಷರು
ಬೆಂಗಳೂರು ಚುನಾವಣಾ ಪ್ರಾದೇಶಿಕ ಆಯುಕ್ತರಾದ ವಿ.ಪಿ.ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 20 ಮಂದಿ ಭಾಗವಹಿಸಿದ್ದರು. ಬಳಿಕ ಆಯುಕ್ತರು, ಸಾಕಮ್ಮ ಗಂಗಾಧರ ನಾಯ್ಕ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.ಬಳಿಕ ಮಾತನಾಡಿದ ನೂತನ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸುವೆ. ಶಾಸಕರು, ಸಚಿವರೊಂದಿಗೆ ಒಗ್ಗೂಡಿ ಕೆಲಸ ಮಾಡುವೆ. ಮುಖ್ಯವಾಗಿ ಕುಡಿಯುವ ನೀರು ಹಾಗೂ ಎನ್‍ಆರ್​​ಇಜಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು. ಜೊತೆಗೆ ಜನರಲ್ಲಿ ಆರೋಗ್ಯ ಹಾಗೂ ವೈರಾಣು ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುವೆ ಎಂದು ತಿಳಿಸಿದರು.

ಇನ್ನೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು. ಈ ವೇಳೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿ.ಪಂ ಪ್ರಭಾರ ಅಧ್ಯಕ್ಷ ಲೋಕೇಶ್ವರ್, ಮಾಜಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇದ್ದರು.

ದಾವಣಗೆರೆ: ಜಿಲ್ಲಾ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲೂಕಿನ ಕೋಗಲೂರು ಕ್ಷೇತ್ರದ ಸಾಕಮ್ಮ ಗಂಗಾಧರ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ, ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಬೆಳಿಗ್ಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಜಿ.ಪಂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Sakamma gangadar naik
ದಾವಣಗೆರೆ ಜಿ.ಪಂ ಉಪಾಧ್ಯಕ್ಷರು
ಬೆಂಗಳೂರು ಚುನಾವಣಾ ಪ್ರಾದೇಶಿಕ ಆಯುಕ್ತರಾದ ವಿ.ಪಿ.ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 20 ಮಂದಿ ಭಾಗವಹಿಸಿದ್ದರು. ಬಳಿಕ ಆಯುಕ್ತರು, ಸಾಕಮ್ಮ ಗಂಗಾಧರ ನಾಯ್ಕ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.ಬಳಿಕ ಮಾತನಾಡಿದ ನೂತನ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸುವೆ. ಶಾಸಕರು, ಸಚಿವರೊಂದಿಗೆ ಒಗ್ಗೂಡಿ ಕೆಲಸ ಮಾಡುವೆ. ಮುಖ್ಯವಾಗಿ ಕುಡಿಯುವ ನೀರು ಹಾಗೂ ಎನ್‍ಆರ್​​ಇಜಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು. ಜೊತೆಗೆ ಜನರಲ್ಲಿ ಆರೋಗ್ಯ ಹಾಗೂ ವೈರಾಣು ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುವೆ ಎಂದು ತಿಳಿಸಿದರು.

ಇನ್ನೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು. ಈ ವೇಳೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿ.ಪಂ ಪ್ರಭಾರ ಅಧ್ಯಕ್ಷ ಲೋಕೇಶ್ವರ್, ಮಾಜಿ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.