ETV Bharat / state

ಮಹಾನಾಯಕನ ಬಗ್ಗೆ ನೀವು ಸೀದಾ ಗೋಕಾಕ್‌ಗೆ ಹೋಗಿ ಕೇಳ್ಬೇಕು.. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ..

author img

By

Published : Apr 18, 2022, 4:32 PM IST

ಹುಬ್ಬಳ್ಳಿಯಲ್ಲಿ‌ ನಡೆದ ಘಟನೆ ಬೇಸರದ ವಿಚಾರವಾಗಿದೆ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕೆಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ..

ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ದಾವಣಗೆರೆ : ಬಾಂಬ್ ಅವರು ಸ್ಪೋಟ ಮಾಡಬೇಕು. ನಮ್ಮ ಕಡೆ ಬಾಂಬ್ ಇಲ್ಲ. ಸ್ಪೋಟಕ್ಕಾಗಿ ಬಹುತೇಕರು ಗೋಕಾಕ್‌ದಲ್ಲಿ ಕಾಯುತ್ತಿದ್ದಾರೆ ಎಂದು ಸಹೋದರ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಅವರು ಟಾಂಗ್ ನೀಡಿದರು. ದಾವಣಗೆರೆಯಲ್ಲಿ 'ಮಹಾನಾಯಕ'ನ ವಿಚಾರವಾಗಿ ಸಹೋದರ ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಮಾಧ್ಯಮದವರೊಂದಿಗೆ ಮಾತನಾಡಿರುವುದು..

ಮಹಾನಾಯಕನ ವಿಚಾರದ ಬಗ್ಗೆ ರಮೇಶ್ ಜಾರಕಿಹೊಳಿ ಬಳಿ ಏನೋ ಮಾಹಿತಿ ಇದೆಯಂತೆ. ಇನ್ನಷ್ಟು ಸಚಿವರು ಇಂತಹ ಕಮೀಷನ್ ವಿಚಾರಕ್ಕೆ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇನ್ನೆಷ್ಟು‌ ಜನ ಬಿಜೆಪಿ ಮುಖಂಡರು ಹಲಾಲ್​ಗೊಳಗಾಗುತ್ತಾರೆ. ಈಶ್ವರಪ್ಪ ಕೇವಲ ರಾಜೀನಾಮೆ ಕೊಟ್ಟರೆ ಸಾಲದು. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸತ್ಯಾಂಶ ಹೊರ ಬರಬೇಕು ಎಂದರು.

ಸ್ವಾಮೀಜಿಗಳನ್ನೂ ಬಿಟ್ಟಿಲ್ಲ ಈ ಕಮೀಷನ್ ಪಿಡುಗು

ಮಠಗಳಿಗೆ ಅನುದಾನ ಬಿಡುಗಡೆ ಮಾಡಿದ್ರೆ ಶೇ. 30ರಷ್ಟು ಕಮೀಷನ್ ಕೊಡಬೇಕಂತೆ ಎಂದು ಶಿರಹಟ್ಟಿಯ ಶ್ರೀ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳೇ ಹೇಳಿದ್ದಾರೆ‌. ಹೀಗಾಗಿ, ಇಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಹೇಳಿದರು.

ಗಲಭೆ ಬಗ್ಗೆ ಕಠಿಣ ಕ್ರಮ, ಮರುಕಳಿಸದಂತೆ ಎಚ್ಚರಿಕೆ

ಹುಬ್ಬಳ್ಳಿಯಲ್ಲಿ‌ ನಡೆದ ಘಟನೆ ಬೇಸರದ ವಿಚಾರವಾಗಿದೆ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕೆಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

ಓದಿ: ಈಶ್ವರಪ್ಪ ವಿರುದ್ಧ ಪ್ರತಿಭಟನೆ : ಸಿದ್ದು, ಡಿಕೆಶಿ, ಸುರ್ಜೇವಾಲಾ ಸೇರಿದಂತೆ 36 ಕಾಂಗ್ರೆಸ್ ನಾಯಕರ ಮೇಲೆ FIR

ದಾವಣಗೆರೆ : ಬಾಂಬ್ ಅವರು ಸ್ಪೋಟ ಮಾಡಬೇಕು. ನಮ್ಮ ಕಡೆ ಬಾಂಬ್ ಇಲ್ಲ. ಸ್ಪೋಟಕ್ಕಾಗಿ ಬಹುತೇಕರು ಗೋಕಾಕ್‌ದಲ್ಲಿ ಕಾಯುತ್ತಿದ್ದಾರೆ ಎಂದು ಸಹೋದರ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಅವರು ಟಾಂಗ್ ನೀಡಿದರು. ದಾವಣಗೆರೆಯಲ್ಲಿ 'ಮಹಾನಾಯಕ'ನ ವಿಚಾರವಾಗಿ ಸಹೋದರ ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಮಾಧ್ಯಮದವರೊಂದಿಗೆ ಮಾತನಾಡಿರುವುದು..

ಮಹಾನಾಯಕನ ವಿಚಾರದ ಬಗ್ಗೆ ರಮೇಶ್ ಜಾರಕಿಹೊಳಿ ಬಳಿ ಏನೋ ಮಾಹಿತಿ ಇದೆಯಂತೆ. ಇನ್ನಷ್ಟು ಸಚಿವರು ಇಂತಹ ಕಮೀಷನ್ ವಿಚಾರಕ್ಕೆ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇನ್ನೆಷ್ಟು‌ ಜನ ಬಿಜೆಪಿ ಮುಖಂಡರು ಹಲಾಲ್​ಗೊಳಗಾಗುತ್ತಾರೆ. ಈಶ್ವರಪ್ಪ ಕೇವಲ ರಾಜೀನಾಮೆ ಕೊಟ್ಟರೆ ಸಾಲದು. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸತ್ಯಾಂಶ ಹೊರ ಬರಬೇಕು ಎಂದರು.

ಸ್ವಾಮೀಜಿಗಳನ್ನೂ ಬಿಟ್ಟಿಲ್ಲ ಈ ಕಮೀಷನ್ ಪಿಡುಗು

ಮಠಗಳಿಗೆ ಅನುದಾನ ಬಿಡುಗಡೆ ಮಾಡಿದ್ರೆ ಶೇ. 30ರಷ್ಟು ಕಮೀಷನ್ ಕೊಡಬೇಕಂತೆ ಎಂದು ಶಿರಹಟ್ಟಿಯ ಶ್ರೀ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳೇ ಹೇಳಿದ್ದಾರೆ‌. ಹೀಗಾಗಿ, ಇಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಹೇಳಿದರು.

ಗಲಭೆ ಬಗ್ಗೆ ಕಠಿಣ ಕ್ರಮ, ಮರುಕಳಿಸದಂತೆ ಎಚ್ಚರಿಕೆ

ಹುಬ್ಬಳ್ಳಿಯಲ್ಲಿ‌ ನಡೆದ ಘಟನೆ ಬೇಸರದ ವಿಚಾರವಾಗಿದೆ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕೈಗೊಳ್ಳಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕೆಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

ಓದಿ: ಈಶ್ವರಪ್ಪ ವಿರುದ್ಧ ಪ್ರತಿಭಟನೆ : ಸಿದ್ದು, ಡಿಕೆಶಿ, ಸುರ್ಜೇವಾಲಾ ಸೇರಿದಂತೆ 36 ಕಾಂಗ್ರೆಸ್ ನಾಯಕರ ಮೇಲೆ FIR

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.