ETV Bharat / state

ದಾವಣಗೆರೆಯಲ್ಲಿ ಮಾಸ್ಕ್ ಅಭಿಯಾನ : ಮುಖಗವಸು ಹಾಕದ ವ್ಯಾಪಾರಿಗೆ ಎಸ್ಪಿ ಕಪಾಳಮೋಕ್ಷ - ದಾವಣಗೆರೆ ಜಿಲ್ಲಾಡಳಿತದಿಂದ ಮಾಸ್ಕ್ ಅಭಿಯಾನ

ತಹಶೀಲ್ದಾರ್ ಕಚೇರಿ ಬಳಿ ಮಾಸ್ಕ್ ಹಾಕದೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗೆ ಮಾಸ್ಕ್ ಹಾಕುವಂತೆ ಮನವಿ ಮಾಡಿ ದಂಡ ಕಟ್ಟುವಂತೆ ತಹಶೀಲ್ದಾರ್​ ತಿಳಿಸಿದರು. ಆದ್ರೆ ವ್ಯಾಪಾರಿ ಮಾತ್ರ ವಾಗ್ವಾದಕ್ಕೆ ಇಳಿದಾಗ ಆ ವ್ಯಕ್ತಿಗೆ ಎಸ್ಪಿ ಹನುಮಂತರಾಯ ಕಪಾಳಮೋಕ್ಷ ಮಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಮಾಸ್ಕ್ ಹಾಕದ ವ್ಯಾಪಾರಿಗೆ ಎಸ್ಪಿ ಕಪಾಳ ಮೋಕ್ಷ
ಮಾಸ್ಕ್ ಹಾಕದ ವ್ಯಾಪಾರಿಗೆ ಎಸ್ಪಿ ಕಪಾಳ ಮೋಕ್ಷ
author img

By

Published : Apr 18, 2021, 12:08 PM IST

Updated : Apr 18, 2021, 12:23 PM IST

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಉಲ್ಬಣವಾಗುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಕೂಡ ಜನರು ಮಾಸ್ಕ್ ಹಾಗು ಸಾಮಾಜಿಕ ಅಂತರವನ್ನು ಮರೆತು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ ಪಿ ಹನುಮಂತರಾಯ ಅವರು ಇಂದು ಬೆಳಗ್ಗೆ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಅಭಿಯಾನ ನಡೆಸಿದರು. ತಹಶೀಲ್ದಾರ್ ಗಿರೀಶ್ ಲಾಠಿ ಹಿಡಿದು ಮಾರುಕಟ್ಟೆಯಲ್ಲಿ ಸುತ್ತಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ಮಾಸ್ಕ್ ಹಾಕದ ವ್ಯಾಪಾರಿಗೆ ಎಸ್ಪಿ ಕಪಾಳಮೋಕ್ಷ

ತಹಶೀಲ್ದಾರ್ ಕಚೇರಿ ಬಳಿ ಮಾಸ್ಕ್ ಹಾಕದೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗೆ ಮಾಸ್ಕ್ ಹಾಕುವಂತೆ ಮನವಿ ಮಾಡಿ ದಂಡ ಕಟ್ಟುವಂತೆ ತಿಳಿಸಿದರು. ವ್ಯಾಪಾರಿ ಮಾತ್ರ ವಾಗ್ವಾದಕ್ಕೆ ಇಳಿದಿದ್ದು, ಆ ವ್ಯಕ್ತಿಗೆ ಎಸ್ಪಿ ಹನುಮಂತರಾಯ ಕಪಾಳಮೋಕ್ಷ ಮಾಡಿ ಬಳಿಕ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಮಾಸ್ಕ್ ಹಾಕಿಕೊಳ್ಳದೆ ವ್ಯಾಪಾರ ಮಾಡುತ್ತಿದ್ದ ಕೆಲವರಿಗೆ ಖಡಕ್ ಎಚ್ಚರಿಕೆ ನೀಡಿ ಬಿಸಿ ಮುಟ್ಟಿಸಿದರು. ಪಾಲಿಕೆ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ, ಸಾಕಷ್ಟು ಬಾರಿ ಮನವಿ ಮಾಡಿದರು ಜನರು ಮಾತ್ರ ಜಾಗೃತರಾಗುತ್ತಿಲ್ಲ. ಹಲವು ಬಾರಿ ಮಾಸ್ಕ್ ಅಭಿಯಾನ ಮಾಡಿದರು ಜನ ಮಾಸ್ಕ್ ಹಾಕಿಕೊಳ್ಳದೆ ಹೊರ ಬರುತ್ತಿರುವುದು ಜಿಲ್ಲಾಡಳಿತಕ್ಕೆ ತಲೆಬಿಸಿಯಾಗಿ ಪರಿಣಮಿಸಿದೆ.

ಇದನ್ನೂ ಓದಿ : ಮಾಗಡಿ ಶಾಸಕ ಮಂಜುನಾಥ್​ಗೆ ಕೋವಿಡ್ ದೃಢ

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಉಲ್ಬಣವಾಗುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಕೂಡ ಜನರು ಮಾಸ್ಕ್ ಹಾಗು ಸಾಮಾಜಿಕ ಅಂತರವನ್ನು ಮರೆತು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ ಪಿ ಹನುಮಂತರಾಯ ಅವರು ಇಂದು ಬೆಳಗ್ಗೆ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಅಭಿಯಾನ ನಡೆಸಿದರು. ತಹಶೀಲ್ದಾರ್ ಗಿರೀಶ್ ಲಾಠಿ ಹಿಡಿದು ಮಾರುಕಟ್ಟೆಯಲ್ಲಿ ಸುತ್ತಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ಮಾಸ್ಕ್ ಹಾಕದ ವ್ಯಾಪಾರಿಗೆ ಎಸ್ಪಿ ಕಪಾಳಮೋಕ್ಷ

ತಹಶೀಲ್ದಾರ್ ಕಚೇರಿ ಬಳಿ ಮಾಸ್ಕ್ ಹಾಕದೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗೆ ಮಾಸ್ಕ್ ಹಾಕುವಂತೆ ಮನವಿ ಮಾಡಿ ದಂಡ ಕಟ್ಟುವಂತೆ ತಿಳಿಸಿದರು. ವ್ಯಾಪಾರಿ ಮಾತ್ರ ವಾಗ್ವಾದಕ್ಕೆ ಇಳಿದಿದ್ದು, ಆ ವ್ಯಕ್ತಿಗೆ ಎಸ್ಪಿ ಹನುಮಂತರಾಯ ಕಪಾಳಮೋಕ್ಷ ಮಾಡಿ ಬಳಿಕ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಮಾಸ್ಕ್ ಹಾಕಿಕೊಳ್ಳದೆ ವ್ಯಾಪಾರ ಮಾಡುತ್ತಿದ್ದ ಕೆಲವರಿಗೆ ಖಡಕ್ ಎಚ್ಚರಿಕೆ ನೀಡಿ ಬಿಸಿ ಮುಟ್ಟಿಸಿದರು. ಪಾಲಿಕೆ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ, ಸಾಕಷ್ಟು ಬಾರಿ ಮನವಿ ಮಾಡಿದರು ಜನರು ಮಾತ್ರ ಜಾಗೃತರಾಗುತ್ತಿಲ್ಲ. ಹಲವು ಬಾರಿ ಮಾಸ್ಕ್ ಅಭಿಯಾನ ಮಾಡಿದರು ಜನ ಮಾಸ್ಕ್ ಹಾಕಿಕೊಳ್ಳದೆ ಹೊರ ಬರುತ್ತಿರುವುದು ಜಿಲ್ಲಾಡಳಿತಕ್ಕೆ ತಲೆಬಿಸಿಯಾಗಿ ಪರಿಣಮಿಸಿದೆ.

ಇದನ್ನೂ ಓದಿ : ಮಾಗಡಿ ಶಾಸಕ ಮಂಜುನಾಥ್​ಗೆ ಕೋವಿಡ್ ದೃಢ

Last Updated : Apr 18, 2021, 12:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.