ETV Bharat / state

ಅವನ ಠೇವಣಿ ತೆಗೀತಿನಿ ಅಂದಿದ್ರು, ಆದ್ರೆ ಜನ ನನಗೆ 4 ಬಾರಿ ಆಶೀರ್ವಾದ ಮಾಡಿದ್ದಾರೆ: ಜಿ.ಎಂ.ಸಿದ್ದೇಶ್ವರ್ - ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಸಿದ್ದೇಶ್ವರ್ ವಾಗ್ದಾಳಿ

ಅವರು ನನ್ನ ಬಗ್ಗೆ ಟೀಕೆ ಮಾಡುತ್ತಲೇ ಬಂದಿದ್ದಾರೆ. ಒಂದು ಬಿಲ್ಲೆಯೂ ದಾನ ಮಾಡಿಲ್ಲ ಅಂದ್ರು. ಅವನ ಠೇವಣಿ ತೆಗೆಯುತ್ತೇನೆ ಎಂದೆಲ್ಲಾ ಹೇಳಿದರು. ಆದ್ರೆ ಜನರು ನನಗೆ ನಾಲ್ಕು ಬಾರಿ ಆಶೀರ್ವಾದ ಮಾಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

statement-by-mp-gm-siddeshwara-in-davangere
ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಸಿದ್ದೇಶ್ವರ್ ವಾಗ್ದಾಳಿ
author img

By

Published : Jun 29, 2021, 2:24 PM IST

ದಾವಣಗೆರೆ: ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರದ ವ್ಯಾಕ್ಸಿನ್ ಹಾಕಿಸುವುದು ಬೇಡ ಎಂದು ತಡೆದಿದ್ದು ಸತ್ಯ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ತಿಳಿಸಿದ್ದಾರೆ.‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನರು ಖಾಸಗಿಯಾಗಿ ನೀಡುತ್ತಿರುವ ವ್ಯಾಕ್ಸಿನ್ ಹಾಗು ಸರ್ಕಾರದ ವ್ಯಾಕ್ಸಿನ್ ಸೇರಿಸಿ ಒಂದೇ ಕಡೆ ನೀಡಿದ್ರೆ ಜನರಿಗೆ ಒಳಿತಾಗುತ್ತದೆ. ಅದನ್ನು ಬಿಟ್ಟು ಸಂಸದ ಅದರಲ್ಲೂ ರಾಜಕೀಯ ಮಾಡುತ್ತಿದ್ದಾನೆ ಎಂದಿದ್ದ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಅವರು ಹರಿಹಾಯ್ದರು.

ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಸಿದ್ದೇಶ್ವರ್ ವಾಗ್ದಾಳಿ

ಅವರದ್ದೇ ಆದ ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರದ ವ್ಯಾಕ್ಸಿನ್ ನೀಡಬೇಡಿ ಎಂದು ತಡೆದಿದ್ದು ಸತ್ಯ. ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರಿ ವ್ಯಾಕ್ಸಿನ್ ಏಕೆ ಹಾಕಬೇಕು?, ಅದು ಸರ್ಕಾರಿ ವ್ಯಾಕ್ಸಿನ್ ಸರ್ಕಾರಿ ಬ್ಯಾನರ್ ಅಡಿಯಲ್ಲಿ ಹಾಕುತ್ತೇವೆ ಎಂದರು.

ಅವರು ನನ್ನ ಬಗ್ಗೆ ಟೀಕೆ ಮಾಡುತ್ತಲೇ ಬಂದಿದ್ದಾರೆ. ಒಂದು ಬಿಲ್ಲೆಯೂ ದಾನ ಮಾಡಿಲ್ಲ ಅಂದ್ರು. ಅವನ ಠೇವಣಿ ತೆಗೆಯುತ್ತೇನೆ ಎಂದೆಲ್ಲಾ ಹೇಳಿದರು. ಆದ್ರೆ ಜನರು ನನಗೆ ನಾಲ್ಕು ಬಾರಿ ಆಶೀರ್ವಾದ ಮಾಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಸಂಸದ ಸಿದ್ದೇಶ್ವರ್‌ಗೆ ಸೇರಿದ ಜಿಎಂಐಟಿ ಸಿಬ್ಬಂದಿಗೆ ಸಂಸದರು ವ್ಯಾಕ್ಸಿನೇಷನ್‌ ಮಾಡಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುನ್ನೂರು ಜನರಿದ್ದರೆ ಲಸಿಕೆ ಹಾಕಿಸಬೇಕೆಂದು ಸರ್ಕಾರ ನಿಯಮವೇ ಇದೆ ಎಂದು ತಿಳಿಸಿದರು.

ಇದನ್ನೂ ಓದಿ :ಲಸಿಕೆ ತರಿಸಿ ನಾವೂ ಕೈಜೋಡಿಸ್ತೀವಿ ಅಂದ್ವಿ , ಸರ್ಕಾರ ಕಿವಿಕೊಡಲಿಲ್ಲ : ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರದ ವ್ಯಾಕ್ಸಿನ್ ಹಾಕಿಸುವುದು ಬೇಡ ಎಂದು ತಡೆದಿದ್ದು ಸತ್ಯ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ತಿಳಿಸಿದ್ದಾರೆ.‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನರು ಖಾಸಗಿಯಾಗಿ ನೀಡುತ್ತಿರುವ ವ್ಯಾಕ್ಸಿನ್ ಹಾಗು ಸರ್ಕಾರದ ವ್ಯಾಕ್ಸಿನ್ ಸೇರಿಸಿ ಒಂದೇ ಕಡೆ ನೀಡಿದ್ರೆ ಜನರಿಗೆ ಒಳಿತಾಗುತ್ತದೆ. ಅದನ್ನು ಬಿಟ್ಟು ಸಂಸದ ಅದರಲ್ಲೂ ರಾಜಕೀಯ ಮಾಡುತ್ತಿದ್ದಾನೆ ಎಂದಿದ್ದ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಅವರು ಹರಿಹಾಯ್ದರು.

ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಸಿದ್ದೇಶ್ವರ್ ವಾಗ್ದಾಳಿ

ಅವರದ್ದೇ ಆದ ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರದ ವ್ಯಾಕ್ಸಿನ್ ನೀಡಬೇಡಿ ಎಂದು ತಡೆದಿದ್ದು ಸತ್ಯ. ಖಾಸಗಿ ಬ್ಯಾನರ್ ಅಡಿಯಲ್ಲಿ ಸರ್ಕಾರಿ ವ್ಯಾಕ್ಸಿನ್ ಏಕೆ ಹಾಕಬೇಕು?, ಅದು ಸರ್ಕಾರಿ ವ್ಯಾಕ್ಸಿನ್ ಸರ್ಕಾರಿ ಬ್ಯಾನರ್ ಅಡಿಯಲ್ಲಿ ಹಾಕುತ್ತೇವೆ ಎಂದರು.

ಅವರು ನನ್ನ ಬಗ್ಗೆ ಟೀಕೆ ಮಾಡುತ್ತಲೇ ಬಂದಿದ್ದಾರೆ. ಒಂದು ಬಿಲ್ಲೆಯೂ ದಾನ ಮಾಡಿಲ್ಲ ಅಂದ್ರು. ಅವನ ಠೇವಣಿ ತೆಗೆಯುತ್ತೇನೆ ಎಂದೆಲ್ಲಾ ಹೇಳಿದರು. ಆದ್ರೆ ಜನರು ನನಗೆ ನಾಲ್ಕು ಬಾರಿ ಆಶೀರ್ವಾದ ಮಾಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಸಂಸದ ಸಿದ್ದೇಶ್ವರ್‌ಗೆ ಸೇರಿದ ಜಿಎಂಐಟಿ ಸಿಬ್ಬಂದಿಗೆ ಸಂಸದರು ವ್ಯಾಕ್ಸಿನೇಷನ್‌ ಮಾಡಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುನ್ನೂರು ಜನರಿದ್ದರೆ ಲಸಿಕೆ ಹಾಕಿಸಬೇಕೆಂದು ಸರ್ಕಾರ ನಿಯಮವೇ ಇದೆ ಎಂದು ತಿಳಿಸಿದರು.

ಇದನ್ನೂ ಓದಿ :ಲಸಿಕೆ ತರಿಸಿ ನಾವೂ ಕೈಜೋಡಿಸ್ತೀವಿ ಅಂದ್ವಿ , ಸರ್ಕಾರ ಕಿವಿಕೊಡಲಿಲ್ಲ : ಶಾಮನೂರು ಶಿವಶಂಕರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.