ETV Bharat / state

ವರ್ತುಲ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ: ಶಾಸಕ ಎಸ್.ರಾಮಪ್ಪ

author img

By

Published : Aug 15, 2020, 11:49 AM IST

ಬೀರೂರು-ಸಮ್ಮಸಗಿ ರಸ್ತೆಗೆ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾಗಿದ್ದ ಸುಮಾರು 1 ಕೋಟಿ ರೂ. ವೆಚ್ಚದ ಅಲಂಕಾರಿಕ ಬೀದಿ ದೀಪಗಳನ್ನು ಸಂಸದ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಎಸ್. ರಾಮಪ್ಪ ಉದ್ಘಾಟಿಸಿದರು.

Ramappa
Ramappa

ಹರಿಹರ: ನಗರದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಗುತ್ತೂರು ಸಮೀಪದ ಭೂತೆ ಕಲ್ಯಾಣ ಮಂಟಪದ ಮುಂಭಾಗದ ರಸ್ತೆಯಿಂದ ಬೈಪಾಸ್ ವರೆಗೆ ವರ್ತುಲ ರಸ್ತೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಸ್. ರಾಮಪ್ಪ ತಿಳಿಸಿದರು.

ಬೀರೂರು-ಸಮ್ಮಸಗಿ ರಸ್ತೆಯಲ್ಲಿ ಅಳವಡಿಸಲಾದ ಸುಮಾರು 1 ಕೋಟಿ ರೂ. ವೆಚ್ಚದ ಅಲಂಕಾರಿಕ ಬೀದಿ ದೀಪಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದ ರಾಮಪ್ಪ, ಪ್ರಸ್ತಾವನೆ ಸಲ್ಲಿಸಿರುವ ವರ್ತುಲ ರಸ್ತೆಯು 40 ರಿಂದ 60 ಅಡಿಯಲ್ಲಿ ನಿರ್ಮಾಣಗೊಳ್ಳಲಿದ್ದು, ಇದಕ್ಕೆ ಈಗಾಗಲೇ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದರು.

ಈ ಸಮಯದಲ್ಲಿ ಧೂಡಾ ಕಾರ್ಯನಿರ್ವಾಹಕ ಅಭಿಯಂತರ ಕೆ.ಎಂ. ಶ್ರೀಕರ್ ಮಾಹಿತಿ ನೀಡಿ, ಬೀರೂರು- ಸಮ್ಮಸಗಿ ರಸ್ತೆಯ ಸುಮಾರು ಒಂದು ಕಿಲೋಮೀಟರ್ ಉದ್ದದ ವ್ಯಾಪ್ತಿಯಲ್ಲಿ 33 +18 ಒಟ್ಟು 51 ಕಂಬಗಳಿಗೆ ವಿಭಜಕಗಳ ಮಧ್ಯೆ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ ಎಂಬ ಮಾಹಿತಿ ನೀಡಿದರು.

ಈ ವೇಳೆ ನಗರಸಭೆ ಸದಸ್ಯರುಗಳಾದ ಎಸ್.ಎಂ. ವಸಂತ್, ಪಿ.ಎನ್. ವಿರುಪಾಕ್ಷ, ಶಂಕರ್ ಖಟಾವ್ಕರ್, ಕೆ.ಜಿ. ಸಿದ್ದೇಶ್, ರಜನಿಕಾಂತ್, ವಿಜಯ್ ಕುಮಾರ್, ನೀತಾ ಮೆಹರವಾಡೆ, ಅಶ್ವಿನಿ ಕೃಷ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಸ್. ವೀರೇಶ್ ಹನಗವಾಡಿ, ನಗರಸಭೆಯ ಪೌರಾಯುಕ್ತ ಎಸ್. ಲಕ್ಷ್ಮೀ ಉಪಸ್ಥಿತರಿದ್ದರು.

ಹರಿಹರ: ನಗರದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಗುತ್ತೂರು ಸಮೀಪದ ಭೂತೆ ಕಲ್ಯಾಣ ಮಂಟಪದ ಮುಂಭಾಗದ ರಸ್ತೆಯಿಂದ ಬೈಪಾಸ್ ವರೆಗೆ ವರ್ತುಲ ರಸ್ತೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಸ್. ರಾಮಪ್ಪ ತಿಳಿಸಿದರು.

ಬೀರೂರು-ಸಮ್ಮಸಗಿ ರಸ್ತೆಯಲ್ಲಿ ಅಳವಡಿಸಲಾದ ಸುಮಾರು 1 ಕೋಟಿ ರೂ. ವೆಚ್ಚದ ಅಲಂಕಾರಿಕ ಬೀದಿ ದೀಪಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದ ರಾಮಪ್ಪ, ಪ್ರಸ್ತಾವನೆ ಸಲ್ಲಿಸಿರುವ ವರ್ತುಲ ರಸ್ತೆಯು 40 ರಿಂದ 60 ಅಡಿಯಲ್ಲಿ ನಿರ್ಮಾಣಗೊಳ್ಳಲಿದ್ದು, ಇದಕ್ಕೆ ಈಗಾಗಲೇ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದರು.

ಈ ಸಮಯದಲ್ಲಿ ಧೂಡಾ ಕಾರ್ಯನಿರ್ವಾಹಕ ಅಭಿಯಂತರ ಕೆ.ಎಂ. ಶ್ರೀಕರ್ ಮಾಹಿತಿ ನೀಡಿ, ಬೀರೂರು- ಸಮ್ಮಸಗಿ ರಸ್ತೆಯ ಸುಮಾರು ಒಂದು ಕಿಲೋಮೀಟರ್ ಉದ್ದದ ವ್ಯಾಪ್ತಿಯಲ್ಲಿ 33 +18 ಒಟ್ಟು 51 ಕಂಬಗಳಿಗೆ ವಿಭಜಕಗಳ ಮಧ್ಯೆ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ ಎಂಬ ಮಾಹಿತಿ ನೀಡಿದರು.

ಈ ವೇಳೆ ನಗರಸಭೆ ಸದಸ್ಯರುಗಳಾದ ಎಸ್.ಎಂ. ವಸಂತ್, ಪಿ.ಎನ್. ವಿರುಪಾಕ್ಷ, ಶಂಕರ್ ಖಟಾವ್ಕರ್, ಕೆ.ಜಿ. ಸಿದ್ದೇಶ್, ರಜನಿಕಾಂತ್, ವಿಜಯ್ ಕುಮಾರ್, ನೀತಾ ಮೆಹರವಾಡೆ, ಅಶ್ವಿನಿ ಕೃಷ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಸ್. ವೀರೇಶ್ ಹನಗವಾಡಿ, ನಗರಸಭೆಯ ಪೌರಾಯುಕ್ತ ಎಸ್. ಲಕ್ಷ್ಮೀ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.