ETV Bharat / state

ದಾವಣಗೆರೆ: ನೂತನ ಎಸ್​ಪಿಯಾಗಿ ಅಧಿಕಾರ ಸ್ವೀಕರಿಸಿದ ಉಮಾ ಪ್ರಶಾಂತ್​

author img

By ETV Bharat Karnataka Team

Published : Aug 25, 2023, 10:59 PM IST

Updated : Aug 26, 2023, 1:37 PM IST

ಉಮಾ ಪ್ರಶಾಂತ್​ ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

uma-prashant-took-charge-as-the-superintendent-of-police-in-davanagere
ದಾವಣಗೆರೆ: ನೂತನ ಎಸ್​ಪಿಯಾಗಿ ಅಧಿಕಾರ ಸ್ವೀಕರಿಸಿದ ಉಮಾ ಪ್ರಶಾಂತ್​
ದಾವಣಗೆರೆ ನೂತನ ಎಸ್​ಪಿಯಾಗಿ ಅಧಿಕಾರ ಸ್ವೀಕಾರ

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್​ಪಿಗೆ ವರ್ಗಾವಣೆಗೊಂಡ ಡಾ. ಅರುಣ್​ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್​ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ‌ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿಗೆ ಉಮಾ ಪ್ರಶಾಂತ್ ​ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್​ಪಿ ಡಾ.ಅರುಣ್ ಅವರನ್ನು ಕಲಬುರಗಿ ಪೊಲೀಸ್​ ತರಬೇತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಉಮಾ ಪ್ರಶಾಂತ್​, ದಾವಣಗೆರೆ ಜಿಲ್ಲೆಯಲ್ಲಿ ಕ್ರಿಮಿನಲ್​, ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಕ್ರಮ ವಹಿಸಲಾಗುತ್ತದೆ. ಸಂಚಾರಿ ವ್ಯವಸ್ಥೆ ಹಾಗೂ ಮಹಿಳೆಯರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತದೆ. ಪೊಲೀಸರನ್ನು ಜನಸ್ನೇಹಿಯಾಗಿ ಮಾಡಿ ಹಾಗೂ ಜನರ ಸಹಕಾರದೊಂದಿಗೆ ಒಳ್ಳೆಯ ರೀತಿ ಕೆಲಸ ಮಾಡುವುದಾಗಿ ಹೇಳಿದರು.

ಇದನ್ನೂ ಓದಿ: ತುಮಕೂರಿನಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ ನೂತನ ಎಸ್​ಪಿಯಾಗಿ ಅಧಿಕಾರ ಸ್ವೀಕಾರ

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್​ಪಿಗೆ ವರ್ಗಾವಣೆಗೊಂಡ ಡಾ. ಅರುಣ್​ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್​ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ‌ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿಗೆ ಉಮಾ ಪ್ರಶಾಂತ್ ​ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್​ಪಿ ಡಾ.ಅರುಣ್ ಅವರನ್ನು ಕಲಬುರಗಿ ಪೊಲೀಸ್​ ತರಬೇತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಉಮಾ ಪ್ರಶಾಂತ್​, ದಾವಣಗೆರೆ ಜಿಲ್ಲೆಯಲ್ಲಿ ಕ್ರಿಮಿನಲ್​, ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಕ್ರಮ ವಹಿಸಲಾಗುತ್ತದೆ. ಸಂಚಾರಿ ವ್ಯವಸ್ಥೆ ಹಾಗೂ ಮಹಿಳೆಯರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತದೆ. ಪೊಲೀಸರನ್ನು ಜನಸ್ನೇಹಿಯಾಗಿ ಮಾಡಿ ಹಾಗೂ ಜನರ ಸಹಕಾರದೊಂದಿಗೆ ಒಳ್ಳೆಯ ರೀತಿ ಕೆಲಸ ಮಾಡುವುದಾಗಿ ಹೇಳಿದರು.

ಇದನ್ನೂ ಓದಿ: ತುಮಕೂರಿನಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ

Last Updated : Aug 26, 2023, 1:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.