ETV Bharat / state

ನಮ್ಮ ಮಾತಿಗೆ ಬೆಲೆ ಕೊಟ್ಟು ನಿರಾಣಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ: ವಚನಾನಂದ ಶ್ರೀ

author img

By

Published : Jan 13, 2021, 5:07 PM IST

ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಕೇಂದ್ರ ವರಿಷ್ಠರು ಹಾಗೂ ರಾಜ್ಯ ನಾಯಕರು ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದು ವಚನಾನಂದ ಶ್ರೀಗಳು ಹೇಳಿದ್ದಾರೆ.

ನಮ್ಮ ಮಾತಿಗೆ ಬೆಲೆ ಕೊಟ್ಟು ನಿರಾಣಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ: ವಚನಾನಂದ ಶ್ರೀ

ದಾವಣಗೆರೆ: ನಮ್ಮ ಮಾತಿಗೆ ಬೆಲೆ ಕೊಟ್ಟು ಶಾಸಕ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ ಎಂದು ಹರಿಹರದ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಹರಿಹರದ ಪಂಚಮಸಾಲಿ ಪೀಠದಲ್ಲಿ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಕೇಂದ್ರ ವರಿಷ್ಠರು, ರಾಜ್ಯ ನಾಯಕರು ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದರು.

ಹರಜಾತ್ರೆ ಒತ್ತಡದ ಮಧ್ಯೆಯೂ ಮುರುಗೇಶ್ ನಿರಾಣಿ ಅವರಿಗೆ ಕರೆ ಮಾಡಿದ ವಚನಾನಂದ ಸ್ವಾಮೀಜಿ, ನಿರಾಣಿಯವರಿಗೆ ಶುಭ ಕೋರಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಉತ್ತಮ ಕೆಲಸ ಮಾಡಿಕೊಂಡು ಹೋಗುವಂತೆ ತಿಳಿಸಿರುವುದಾಗಿ ಹೇಳಿದರು.

ದಾವಣಗೆರೆ: ನಮ್ಮ ಮಾತಿಗೆ ಬೆಲೆ ಕೊಟ್ಟು ಶಾಸಕ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಖುಷಿ ತಂದಿದೆ ಎಂದು ಹರಿಹರದ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಹರಿಹರದ ಪಂಚಮಸಾಲಿ ಪೀಠದಲ್ಲಿ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಕೇಂದ್ರ ವರಿಷ್ಠರು, ರಾಜ್ಯ ನಾಯಕರು ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದರು.

ಹರಜಾತ್ರೆ ಒತ್ತಡದ ಮಧ್ಯೆಯೂ ಮುರುಗೇಶ್ ನಿರಾಣಿ ಅವರಿಗೆ ಕರೆ ಮಾಡಿದ ವಚನಾನಂದ ಸ್ವಾಮೀಜಿ, ನಿರಾಣಿಯವರಿಗೆ ಶುಭ ಕೋರಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಉತ್ತಮ ಕೆಲಸ ಮಾಡಿಕೊಂಡು ಹೋಗುವಂತೆ ತಿಳಿಸಿರುವುದಾಗಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.