ETV Bharat / state

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಸಕ ರಾಮಪ್ಪ ವಿರುದ್ಧ ಪ್ರಕರಣ ದಾಖಲು

author img

By

Published : Oct 30, 2020, 10:02 AM IST

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಸಂದರ್ಭದಲ್ಲಿ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಹರಿಹರ ಶಾಸಕ ಎಸ್.ರಾಮಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರ ಶಾಸಕ ಎಸ್. ರಾಮಪ್ಪ
ಹರಿಹರ ಶಾಸಕ ಎಸ್. ರಾಮಪ್ಪ

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ವೇಳೆ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಹರಿಹರ ಶಾಸಕ ಎಸ್.ರಾಮಪ್ಪ ವಿರುದ್ಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರಿಹರ ತಾಲೂಕಿನ ಮಲೇಬೆನ್ನೂರಿನ ಜಿಗಳಿ ರಸ್ತೆಯ ಕಾಲೇಜಿನ ಮತಗಟ್ಟೆ ಸಂಖ್ಯೆ 4 ಹಾಗೂ 5ಕ್ಕೆ ಅಕ್ರಮ ಪ್ರವೇಶ ಮಾಡಿದ ಸಂಬಂಧ ಮತಗಟ್ಟೆ ಸೆಕ್ಟರ್ ಅಧಿಕಾರಿ ಹೆಚ್.ಟಿ.ನೌಷದ್ ಮಲೇಬೆನ್ನೂರು ಪೊಲೀಸರಿಗೆ ದೂರು ನೀಡಿದ್ದರು. ಮತದಾನ ನಡೆಯುತ್ತಿದೆ. ಇಲ್ಲಿ ಯಾರಿಗೂ ಪ್ರವೇಶ ಇಲ್ಲ ಎಂದರೂ ಶಾಸಕರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಈ ಮೂಲಕ ಚುನಾವಣೆಯ ನೀತಿ‌ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ಮತಗಟ್ಟೆಗಳ ಅಧಿಕಾರಿಗಳು‌ ನೀಡಿರುವ ವರದಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು, ಶಾಸಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ‌ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ವೇಳೆ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಹರಿಹರ ಶಾಸಕ ಎಸ್.ರಾಮಪ್ಪ ವಿರುದ್ಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರಿಹರ ತಾಲೂಕಿನ ಮಲೇಬೆನ್ನೂರಿನ ಜಿಗಳಿ ರಸ್ತೆಯ ಕಾಲೇಜಿನ ಮತಗಟ್ಟೆ ಸಂಖ್ಯೆ 4 ಹಾಗೂ 5ಕ್ಕೆ ಅಕ್ರಮ ಪ್ರವೇಶ ಮಾಡಿದ ಸಂಬಂಧ ಮತಗಟ್ಟೆ ಸೆಕ್ಟರ್ ಅಧಿಕಾರಿ ಹೆಚ್.ಟಿ.ನೌಷದ್ ಮಲೇಬೆನ್ನೂರು ಪೊಲೀಸರಿಗೆ ದೂರು ನೀಡಿದ್ದರು. ಮತದಾನ ನಡೆಯುತ್ತಿದೆ. ಇಲ್ಲಿ ಯಾರಿಗೂ ಪ್ರವೇಶ ಇಲ್ಲ ಎಂದರೂ ಶಾಸಕರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಈ ಮೂಲಕ ಚುನಾವಣೆಯ ನೀತಿ‌ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ಮತಗಟ್ಟೆಗಳ ಅಧಿಕಾರಿಗಳು‌ ನೀಡಿರುವ ವರದಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು, ಶಾಸಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ‌ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.