ETV Bharat / state

ಕೊರೊನಾ ನಿರ್ಮೂಲನೆಗಾಗಿ ಕೋವಿಡ್​​ ಕೇರ್​ ಸೆಂಟರ್​ನಲ್ಲಿ ರೇಣುಕಾಚಾರ್ಯರಿಂದ ಹೋಮ-ಹವನ!

author img

By

Published : Jun 11, 2021, 7:19 PM IST

Updated : Jun 11, 2021, 7:41 PM IST

ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರಣ ಇನ್ನೊಂದು ವಾರ ಲಾಕ್​​ಡೌನ್ ಮುಂದುವರೆಸಲಾಗಿದೆ. ಆದ್ರೆ ಶಾಸಕ ಎಂ.ಪಿ.ರೇಣುಕಚಾರ್ಯ, ದೇವರ ಮೊರೆ ಹೋಗಿದ್ದು, ಧನ್ವಂತರಿ ಹಾಗೂ ಮೃತ್ಯುಂಜಯ ಹೋಮಗಳನ್ನು ಮಾಡಿಸಿದ್ದಾರೆ. ಈ ಪೂಜಾ ಕೈಂಕರ್ಯದಲ್ಲಿ ಕೋವಿಡ್​ನಿಂದ ಗುಣಮುಖರಾಗಿರುವ 50ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

http://10.10.ಶಾಸಕ ಎಂ.ಪಿ.ರೇಣುಕಾಚಾರ್ಯ50.85:6060///finalout4/karnataka-nle/finalout/11-June-2021/12098121_dvg.mp4
ಶಾಸಕ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ಕೊರೊನಾ ನಿರ್ಮೂಲನೆಗಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದೇವರ ಮೊರೆ ಹೋಗಿದ್ದಾರೆ. ಹೊನ್ನಾಳಿ-ನ್ಯಾಮತಿ ತಾಲೂಕುಗಳಲ್ಲಿ ಸೋಂಕು ಹೋಗಲಾಡಿಸಲು ಶಾಸಕರು ಹೋಮ ಮಾಡಿಸಿದ್ದು, ಗುಣಮುಖರಾದವರಿಗೆ ಹೋಳಿಗೆ ಊಟ ಉಣಬಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರಣ ಇನ್ನೊಂದು ವಾರ ಲಾಕ್​​ಡೌನ್ ಮುಂದುವರೆಸಲಾಗಿದೆ. ಆದ್ರೆ, ಶಾಸಕ ಎಂ.ಪಿ.ರೇಣುಕಚಾರ್ಯ, ದೇವರ ಮೊರೆ ಹೋಗಿದ್ದು, ಧನ್ವಂತರಿ ಹಾಗೂ ಮೃತ್ಯುಂಜಯ ಹೋಮಗಳನ್ನು ಮಾಡಿಸಿದ್ದಾರೆ. ಈ ಪೂಜಾ ಕೈಂಕರ್ಯದಲ್ಲಿ ಕೋವಿಡ್​ನಿಂದ ಗುಣಮುಖರಾಗಿರುವ 50ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್​​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರೇಕಲ್ಮಠದ ಶ್ರೀ ಒಡೆಯರ್ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಭಾಗಿಯಾಗಿದ್ದರು. ಕೊರೊನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ರೇಣುಕಾಚಾರ್ಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ರೇಣುಕಾಚಾರ್ಯರಂಥ ಗಂಡ ಸಿಕ್ಕಿರುವುದು ಏಳೇಳು ಜನ್ಮದ ಪುಣ್ಯ: ಸುಮಿತ್ರಾ ರೇಣುಕಾಚಾರ್ಯ

ಕೋವಿಡ್ ಕೇರ್ ಸೆಂಟರ್​​​ನಲ್ಲಿ ಹೋಮ ಮಾಡಿಸಿದ್ದಕ್ಕಾಗಿ ಶಾಸಕ ರೇಣುಕಾಚಾರ್ಯರ ವಿರುದ್ಧ ತಹಶೀಲ್ದಾರ್ ಗರಂ ಆದ್ರು.

ದಾವಣಗೆರೆ: ಕೊರೊನಾ ನಿರ್ಮೂಲನೆಗಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದೇವರ ಮೊರೆ ಹೋಗಿದ್ದಾರೆ. ಹೊನ್ನಾಳಿ-ನ್ಯಾಮತಿ ತಾಲೂಕುಗಳಲ್ಲಿ ಸೋಂಕು ಹೋಗಲಾಡಿಸಲು ಶಾಸಕರು ಹೋಮ ಮಾಡಿಸಿದ್ದು, ಗುಣಮುಖರಾದವರಿಗೆ ಹೋಳಿಗೆ ಊಟ ಉಣಬಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರಣ ಇನ್ನೊಂದು ವಾರ ಲಾಕ್​​ಡೌನ್ ಮುಂದುವರೆಸಲಾಗಿದೆ. ಆದ್ರೆ, ಶಾಸಕ ಎಂ.ಪಿ.ರೇಣುಕಚಾರ್ಯ, ದೇವರ ಮೊರೆ ಹೋಗಿದ್ದು, ಧನ್ವಂತರಿ ಹಾಗೂ ಮೃತ್ಯುಂಜಯ ಹೋಮಗಳನ್ನು ಮಾಡಿಸಿದ್ದಾರೆ. ಈ ಪೂಜಾ ಕೈಂಕರ್ಯದಲ್ಲಿ ಕೋವಿಡ್​ನಿಂದ ಗುಣಮುಖರಾಗಿರುವ 50ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್​​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರೇಕಲ್ಮಠದ ಶ್ರೀ ಒಡೆಯರ್ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಭಾಗಿಯಾಗಿದ್ದರು. ಕೊರೊನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ರೇಣುಕಾಚಾರ್ಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ರೇಣುಕಾಚಾರ್ಯರಂಥ ಗಂಡ ಸಿಕ್ಕಿರುವುದು ಏಳೇಳು ಜನ್ಮದ ಪುಣ್ಯ: ಸುಮಿತ್ರಾ ರೇಣುಕಾಚಾರ್ಯ

ಕೋವಿಡ್ ಕೇರ್ ಸೆಂಟರ್​​​ನಲ್ಲಿ ಹೋಮ ಮಾಡಿಸಿದ್ದಕ್ಕಾಗಿ ಶಾಸಕ ರೇಣುಕಾಚಾರ್ಯರ ವಿರುದ್ಧ ತಹಶೀಲ್ದಾರ್ ಗರಂ ಆದ್ರು.

Last Updated : Jun 11, 2021, 7:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.