ETV Bharat / state

ಸಂಕ್ರಮಣದ ಕೆಟ್ಟ ಕರಿ ದಿನವೇ ಭೀಕರ ರಸ್ತೆ ಅಪಘಾತ.. ಬಾರದ ಲೋಕಕ್ಕೆ ತೆರಳಿದ ಬಾಲ್ಯದ ಗೆಳತಿಯರು!

author img

By

Published : Jan 15, 2021, 2:33 PM IST

Updated : Jan 15, 2021, 3:14 PM IST

ಕೆಲಸದ ಒತ್ತಡದ ನಡುವೆ ಬಿಡುವು ಮಾಡಿಕೊಂಡು ಕೊಂಚ ಎಂಜಾಯ್​, ಕೊಂಚ ರಿಲ್ಯಾಕ್ಸ್​ಗಾಗಿ ಸಂಕ್ರಾಂತಿ ಹಬ್ಬಕ್ಕೆ ಗೋವಾಕ್ಕೆ ತೆರಳಲು ಉದ್ದೇಶಿಸಿದ ಮಹಿಳೆಯರಿಗೆ ವಿಧಿ ಜವರಾಯನ ರೂಪದಲ್ಲಿ ಕಾಡಿದ್ದು, 16 ಗೆಳತಿಯರಲ್ಲಿ 11 ಜನ ಇಹಲೋಕ ತ್ಯಜಿಸಿದ್ದಾರೆ.

13 Killed in Road Accident, 13 Killed in Road Accident at Near Dharwad, Dharwad road accident, Dharwad road accident news, Dharwad road accident updated, Dharwad road accident 2021 news, ರಸ್ತೆ ಅಪಘಾತದಲ್ಲಿ 13 ಜನ ಸಾವು, ಧಾರವಾಡ ಬಳಿಯ ರಸ್ತೆ ಅಪಘಾತದಲ್ಲಿ 13 ಜನ ಸಾವು, ಧಾರವಾಡ ರಸ್ತೆ ಅಪಘಾತ, ಧಾರವಾಡ ರಸ್ತೆ ಅಪಘಾತ ಸುದ್ದಿ, ಧಾರವಾಡ ರಸ್ತೆ ಅಪಘಾತ ಅಪ್​ಡೇಟ್​, ಧಾರವಾಡ ರಸ್ತೆ ಅಪಘಾತ 2021, ಧಾರವಾಡ ರಸ್ತೆ ಅಪಘಾತ 2021 ಸುದ್ದಿ,
ಸಂಕ್ರಮಣದ ಕೆಟ್ಟ ಕರಿ ದಿನವೇ ಭೀಕರ ರಸ್ತೆ ಅಪಘಾತ

ಧಾರವಾಡ: ಇಂದು ಬೆಳಗಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಏಳು ಜನರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮಹಿಳೆಯರ ಗೋವಾ ಟ್ರಿಪ್​

ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್​ ಮಾಡಲು ಗೋವಾದ ಪಣಜಿಗೆ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದರು. ಅದರಂತೆ ಖಾಸಗಿ ಮಿನಿ ಬಸ್​ವೊಂದನ್ನು ಬುಕ್​ ಮಾಡಿ ನಸುಕಿನ ಜಾವ ಧಾರವಾಡ ಮೂಲಕ ಗೋವಾಗೆ ತೆರಳುವ ಉದ್ದೇಶ ಹೊಂದಿದ್ದರು.

ನಸುಕಿನ ಜಾವ ಶುರುವಾಯ್ತು ಪ್ರಯಣ

ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ ಆಸು - ಪಾಸು ದಾವಣಗೆರೆಯಿಂದ ಹೊರಟು ಬೆಳಗಿನ ಜಾವ ಹಾವೇರಿ, ಹುಬ್ಬಳ್ಳಿ ಮೂಲಕ ಧಾರವಾಡಕ್ಕೆ ಸೇರುವ ಉದ್ದೇಶ ಹೊಂದಿದ್ದರು.

ಧಾರವಾಡದಲ್ಲಿ ಉಪಹಾರ

ದಾವಣಗೆರೆಯಿಂದ ನಸುಕಿನ ವೇಳೆ ಹೊರಟಿದ್ದ ಇವರು ಧಾರವಾಡದ ಪರಿಚಯಸ್ಥರ ಮನೆಗೆ ತೆರಳುವವರಿದ್ದರು. ಪರಿಚಯಸ್ಥರ ಮನೆಯಲ್ಲಿ ಉಪಹಾರ ಮುಗಿಸಿಕೊಂಡು ಅಲ್ಲಿಂದ ನೇರ ಗೋವಾದ ಪಣಜಿಗೆ ಹೋಗುವ ಪ್ಲಾನ್​ ಹಾಕಿಕೊಂಡಿದ್ದರು.

ಬಸ್​ನಲ್ಲಿ ಎಷ್ಟು ಮಹಿಳೆಯರಿದ್ದರು?

ಮಾಜಿ ಶಾಸಕ ಗುರುಸಿದ್ದನಗೌಡರ ಸೊಸೆ, ಆರೈಕೆ ಆಸ್ಪತ್ರೆಯ ಡಾ. ರವಿಕುಮಾರ್​ ಅವರ ಪತ್ನಿ ಪ್ರೀತಿ ರವಿಕುಮಾರ್​, ಸ್ತ್ರೀರೋಗ ತಜ್ಞೆ ಡಾ. ವೀಣಾ ಪ್ರಕಾಶ್​ ಸೇರಿ ಒಟ್ಟು 16 ಮಹಿಳೆಯರು ಪಣಜಿಗೆ ಹೊರಟಿದ್ದರು. ಬಸ್​ನಲ್ಲಿ ಕ್ಲೀನರ್​ ಮತ್ತು ಡ್ರೈವರ್​ ಸೇರಿದಂತೆ ಒಟ್ಟು 18 ಮಂದಿ ಪ್ರಯಾಣ ಬೆಳೆಸುತ್ತಿದ್ದರು.

ಭೀಕರ ರಸ್ತೆ ಅಪಘಾತ...

ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಬೆಳಗಿನ ಜಾವ 6.30ರಿಂದ 7 ಗಂಟೆಯ ಸುಮಾರಿಗೆ ಮಹಿಳೆಯರಿದ್ದ ಖಾಸಗಿ ಮಿನಿ ಬಸ್​ ಮತ್ತು ಟಿಪ್ಪರ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತು. ಅಪಘಾತದ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದರು. ಸುದ್ದಿ ತಿಳಿದ ಕೂಡಲೇ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

ಏರುತ್ತಲೇ ಇದೆ ಮೃತರ ಸಂಖ್ಯೆ

ಮುಂಜಾನೆ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಬಂದಾಗ ಟಿಪ್ಪರ್​ ನಡುವೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರಾಗಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಡಿಕ್ಕಿ ರಭಸಕ್ಕೆ ಎರಡು ವಾಹನ ಜಖಂ

ಡಿಕ್ಕಿ ರಭಸಕ್ಕೆ ಎರಡು ವಾಹನಗಳೂ ಸಂಪೂರ್ಣವಾಗಿ ಜಖಂಗೊಂಡಿವೆ. ಕ್ರೇನ್ ಸಹಾಯದಿಂದ ಮಗುಚಿ ಬಿದ್ದಿದ್ದ ವಾಹನವನ್ನು ಎತ್ತಿ ಮೃತದೇಹಗಳನ್ನು ಹೊರತೆಗೆಯಲಾಗಿತ್ತು.

ನಾಲ್ವರ ಸ್ಥಿತಿ ಚಿಂತಾಜನಕ...

ಗಾಯಗೊಂಡ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.

ಸೆಲ್ಫಿ ವೈರಲ್​...

ಪ್ರವಾಸಕ್ಕೆ ಹೊರಡುವ ಸಂದರ್ಭ ದಾವಣಗೆರೆಯಲ್ಲಿ ತೆಗೆದುಕೊಂಡ ಸೆಲ್ಫಿ ಈಗ ಎಲ್ಲಡೆ ಹರಿದಾಡುತ್ತಿದೆ. ಆದರೆ ಆ ಖುಷಿ ಕೆಲವೇ ಕ್ಷಣಗಳಲ್ಲಿ ಇಲ್ಲವಾಗಿದೆ. ಪ್ರವಾಸಕ್ಕೆಂದು ಹೊರಟವರು ಸಾವಿನ ಮನೆ ಸೇರುವಂತಾಗಿದ್ದು, ಬೆಣ್ಣೆ ನಗರಿ ಶೋಕ ಸಾಗರದಲ್ಲಿ ಮುಳುಗಿದೆ.

ಮೃತರ ಗುರುತು ಪತ್ತೆ...

ಮೃತಪಟ್ಟವರನ್ನು ಪ್ರವೀಣ್, ಆಶಾ, ಮೀರಾಬಾಯಿ, ಪರಂಜ್ಯೋತಿ, ರಾಜೇಶ್ವರಿ, ಶಕುಂತಲಾ, ಉಷಾ, ವೇದಾ, ವೀಣಾ, ಮಂಜುಳಾ, ನಿರ್ಮಲಾ, ರಜನೀಶಿ, ಪ್ರೀತಿ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ತಿಳಿದು ಬಂದಿಲ್ಲ.

ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, 16 ಮಹಿಳೆಯರು ಲೇಡಿಸ್ ಕ್ಲಬ್‌ನಿಂದ ಸಂತೋಷ ಕೂಟಕ್ಕಾಗಿ ಗೋವಾಕ್ಕೆ ಹೊರಟಿದ್ದರು ಎಂದು ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಹೇಳಿಕೆ ನೀಡಿದ್ದಾರೆ.

ಮುಗಿಲು ಮುಟ್ಟಿದ ರೋದನೆ...

ಅಪಘಾತ ಸಂಭವಿಸಿ 11 ಮಹಿಳೆಯರು ಸಾವನ್ನಪ್ಪಿದ್ದ ಸುದ್ದಿ ತಿಳಿದ ಕುಟುಂಬಸ್ಥರು ಕಿಮ್ಸ್​ ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಆಸ್ಪತ್ರೆ ಮುಂಭಾಗ ಮೃತರ ಸಂಬಂಧಿಕರು, ಪೋಷಕರ ರೋದನೆ ಮುಗಿಲು ಮುಟ್ಟಿದೆ.

ಬಾಲ್ಯ ಗೆಳತಿಯರು...

ಪ್ರವಾಸಕ್ಕೆ ತೆರಳಿದವರೆಲ್ಲರೂ ಸೆಂಟ್ ಪೌಲ್ಸ್ ಶಾಲೆಯಲ್ಲಿ ಓದಿದವರಾಗಿದ್ದಾರೆ. ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಇವರು ಚಿಕ್ಕ ವಯಸ್ಸಿನಿಂದಲೇ ಸ್ನೇಹಿತರು. ಒಂದಿಲ್ಲ ಒಂದು ಕೆಲಸದಲ್ಲಿ ಇವರು ಗುರುತಿಸಿಕೊಂಡಿದ್ದಾರೆ. ಈ ಸಂಕ್ರಾಂತಿ ಹಬ್ಬಕ್ಕೆ ಗೋವಾ ಪ್ರವಾಸದ ಯೋಜನೆ ಹಾಕಿಕೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಪ್ರವಾಸ ಕೈಗೊಂಡಿದ್ದರು.

ಪ್ರಕರಣ ದಾಖಲು...

ಈ ಅಪಘಾತ ಕುರಿತು ಧಾರವಾಡ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಧಾರವಾಡ: ಇಂದು ಬೆಳಗಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಏಳು ಜನರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮಹಿಳೆಯರ ಗೋವಾ ಟ್ರಿಪ್​

ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್​ ಮಾಡಲು ಗೋವಾದ ಪಣಜಿಗೆ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದರು. ಅದರಂತೆ ಖಾಸಗಿ ಮಿನಿ ಬಸ್​ವೊಂದನ್ನು ಬುಕ್​ ಮಾಡಿ ನಸುಕಿನ ಜಾವ ಧಾರವಾಡ ಮೂಲಕ ಗೋವಾಗೆ ತೆರಳುವ ಉದ್ದೇಶ ಹೊಂದಿದ್ದರು.

ನಸುಕಿನ ಜಾವ ಶುರುವಾಯ್ತು ಪ್ರಯಣ

ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ ಆಸು - ಪಾಸು ದಾವಣಗೆರೆಯಿಂದ ಹೊರಟು ಬೆಳಗಿನ ಜಾವ ಹಾವೇರಿ, ಹುಬ್ಬಳ್ಳಿ ಮೂಲಕ ಧಾರವಾಡಕ್ಕೆ ಸೇರುವ ಉದ್ದೇಶ ಹೊಂದಿದ್ದರು.

ಧಾರವಾಡದಲ್ಲಿ ಉಪಹಾರ

ದಾವಣಗೆರೆಯಿಂದ ನಸುಕಿನ ವೇಳೆ ಹೊರಟಿದ್ದ ಇವರು ಧಾರವಾಡದ ಪರಿಚಯಸ್ಥರ ಮನೆಗೆ ತೆರಳುವವರಿದ್ದರು. ಪರಿಚಯಸ್ಥರ ಮನೆಯಲ್ಲಿ ಉಪಹಾರ ಮುಗಿಸಿಕೊಂಡು ಅಲ್ಲಿಂದ ನೇರ ಗೋವಾದ ಪಣಜಿಗೆ ಹೋಗುವ ಪ್ಲಾನ್​ ಹಾಕಿಕೊಂಡಿದ್ದರು.

ಬಸ್​ನಲ್ಲಿ ಎಷ್ಟು ಮಹಿಳೆಯರಿದ್ದರು?

ಮಾಜಿ ಶಾಸಕ ಗುರುಸಿದ್ದನಗೌಡರ ಸೊಸೆ, ಆರೈಕೆ ಆಸ್ಪತ್ರೆಯ ಡಾ. ರವಿಕುಮಾರ್​ ಅವರ ಪತ್ನಿ ಪ್ರೀತಿ ರವಿಕುಮಾರ್​, ಸ್ತ್ರೀರೋಗ ತಜ್ಞೆ ಡಾ. ವೀಣಾ ಪ್ರಕಾಶ್​ ಸೇರಿ ಒಟ್ಟು 16 ಮಹಿಳೆಯರು ಪಣಜಿಗೆ ಹೊರಟಿದ್ದರು. ಬಸ್​ನಲ್ಲಿ ಕ್ಲೀನರ್​ ಮತ್ತು ಡ್ರೈವರ್​ ಸೇರಿದಂತೆ ಒಟ್ಟು 18 ಮಂದಿ ಪ್ರಯಾಣ ಬೆಳೆಸುತ್ತಿದ್ದರು.

ಭೀಕರ ರಸ್ತೆ ಅಪಘಾತ...

ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಬೆಳಗಿನ ಜಾವ 6.30ರಿಂದ 7 ಗಂಟೆಯ ಸುಮಾರಿಗೆ ಮಹಿಳೆಯರಿದ್ದ ಖಾಸಗಿ ಮಿನಿ ಬಸ್​ ಮತ್ತು ಟಿಪ್ಪರ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತು. ಅಪಘಾತದ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದರು. ಸುದ್ದಿ ತಿಳಿದ ಕೂಡಲೇ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

ಏರುತ್ತಲೇ ಇದೆ ಮೃತರ ಸಂಖ್ಯೆ

ಮುಂಜಾನೆ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಬಂದಾಗ ಟಿಪ್ಪರ್​ ನಡುವೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರಾಗಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಡಿಕ್ಕಿ ರಭಸಕ್ಕೆ ಎರಡು ವಾಹನ ಜಖಂ

ಡಿಕ್ಕಿ ರಭಸಕ್ಕೆ ಎರಡು ವಾಹನಗಳೂ ಸಂಪೂರ್ಣವಾಗಿ ಜಖಂಗೊಂಡಿವೆ. ಕ್ರೇನ್ ಸಹಾಯದಿಂದ ಮಗುಚಿ ಬಿದ್ದಿದ್ದ ವಾಹನವನ್ನು ಎತ್ತಿ ಮೃತದೇಹಗಳನ್ನು ಹೊರತೆಗೆಯಲಾಗಿತ್ತು.

ನಾಲ್ವರ ಸ್ಥಿತಿ ಚಿಂತಾಜನಕ...

ಗಾಯಗೊಂಡ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.

ಸೆಲ್ಫಿ ವೈರಲ್​...

ಪ್ರವಾಸಕ್ಕೆ ಹೊರಡುವ ಸಂದರ್ಭ ದಾವಣಗೆರೆಯಲ್ಲಿ ತೆಗೆದುಕೊಂಡ ಸೆಲ್ಫಿ ಈಗ ಎಲ್ಲಡೆ ಹರಿದಾಡುತ್ತಿದೆ. ಆದರೆ ಆ ಖುಷಿ ಕೆಲವೇ ಕ್ಷಣಗಳಲ್ಲಿ ಇಲ್ಲವಾಗಿದೆ. ಪ್ರವಾಸಕ್ಕೆಂದು ಹೊರಟವರು ಸಾವಿನ ಮನೆ ಸೇರುವಂತಾಗಿದ್ದು, ಬೆಣ್ಣೆ ನಗರಿ ಶೋಕ ಸಾಗರದಲ್ಲಿ ಮುಳುಗಿದೆ.

ಮೃತರ ಗುರುತು ಪತ್ತೆ...

ಮೃತಪಟ್ಟವರನ್ನು ಪ್ರವೀಣ್, ಆಶಾ, ಮೀರಾಬಾಯಿ, ಪರಂಜ್ಯೋತಿ, ರಾಜೇಶ್ವರಿ, ಶಕುಂತಲಾ, ಉಷಾ, ವೇದಾ, ವೀಣಾ, ಮಂಜುಳಾ, ನಿರ್ಮಲಾ, ರಜನೀಶಿ, ಪ್ರೀತಿ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ತಿಳಿದು ಬಂದಿಲ್ಲ.

ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, 16 ಮಹಿಳೆಯರು ಲೇಡಿಸ್ ಕ್ಲಬ್‌ನಿಂದ ಸಂತೋಷ ಕೂಟಕ್ಕಾಗಿ ಗೋವಾಕ್ಕೆ ಹೊರಟಿದ್ದರು ಎಂದು ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಹೇಳಿಕೆ ನೀಡಿದ್ದಾರೆ.

ಮುಗಿಲು ಮುಟ್ಟಿದ ರೋದನೆ...

ಅಪಘಾತ ಸಂಭವಿಸಿ 11 ಮಹಿಳೆಯರು ಸಾವನ್ನಪ್ಪಿದ್ದ ಸುದ್ದಿ ತಿಳಿದ ಕುಟುಂಬಸ್ಥರು ಕಿಮ್ಸ್​ ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಆಸ್ಪತ್ರೆ ಮುಂಭಾಗ ಮೃತರ ಸಂಬಂಧಿಕರು, ಪೋಷಕರ ರೋದನೆ ಮುಗಿಲು ಮುಟ್ಟಿದೆ.

ಬಾಲ್ಯ ಗೆಳತಿಯರು...

ಪ್ರವಾಸಕ್ಕೆ ತೆರಳಿದವರೆಲ್ಲರೂ ಸೆಂಟ್ ಪೌಲ್ಸ್ ಶಾಲೆಯಲ್ಲಿ ಓದಿದವರಾಗಿದ್ದಾರೆ. ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಇವರು ಚಿಕ್ಕ ವಯಸ್ಸಿನಿಂದಲೇ ಸ್ನೇಹಿತರು. ಒಂದಿಲ್ಲ ಒಂದು ಕೆಲಸದಲ್ಲಿ ಇವರು ಗುರುತಿಸಿಕೊಂಡಿದ್ದಾರೆ. ಈ ಸಂಕ್ರಾಂತಿ ಹಬ್ಬಕ್ಕೆ ಗೋವಾ ಪ್ರವಾಸದ ಯೋಜನೆ ಹಾಕಿಕೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಪ್ರವಾಸ ಕೈಗೊಂಡಿದ್ದರು.

ಪ್ರಕರಣ ದಾಖಲು...

ಈ ಅಪಘಾತ ಕುರಿತು ಧಾರವಾಡ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Last Updated : Jan 15, 2021, 3:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.