ETV Bharat / state

ಪತ್ನಿಯನ್ನು ಕಳುಹಿಸಲು ಒಲ್ಲೆ ಎಂದ ಮಾವ; ಕೋಪಗೊಂಡು ಬ್ಲೇಡ್​ನಿಂದ ಕತ್ತು ಸೀಳಿದ ಅಳಿಯ

author img

By

Published : Aug 18, 2021, 2:15 PM IST

ತವರು ಮನೆಗೆ ಸೇರಿದ್ದ ಹೆಂಡತಿಯನ್ನು ಕಳುಹಿಸಲು ನಿರಾಕರಿಸಿದ ಎಂದು ಸಿಟ್ಟಿಗೆದ್ದ ಅಳಿಯ ಮಾವನ ಕತ್ತು ಸೀಳಿದ್ದಾನೆ. ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

hubli
ಬ್ಲೇಡ್​ನಿಂದ ಕತ್ತು ಸೀಳಿದ ಅಳಿಯ

ಹುಬ್ಬಳ್ಳಿ: ಹೆಂಡತಿಯನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದನೆಂದು ಸಿಟ್ಟಿಗೆದ್ದ ಅಳಿಯ ಮಾವನ ಕತ್ತು ಸೀಳಿದ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಗೊಂಡ ಮಗ ಪ್ರವೀಣ ದಳವಾಯಿ

ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ್ ಕಂಬಳಿ ಎಂಬಾತನಿಗೆ ಶಿವಪ್ಪ ದಳವಾಯಿಯ ಮಗಳನ್ನು ಮದುವೆ ಮಾಡಿಕೊಟ್ಟಿದ್ದ. ಆದರೆ ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆಯಿಂದ ತವರು ಮನೆಗೆ ಬಂದಿದ್ದ ಪತ್ನಿಯನ್ನು ಜಗದೀಶ್ ಕರೆದುಕೊಂಡು ಹೋಗಲು ಗ್ರಾಮಕ್ಕೆ ಆಗಮಿಸಿದ್ದ. ಆದರೆ ಮಗಳನ್ನು ಕಳುಹಿಸಲು ಶಿವಪ್ಪ ನಿರಾಕರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಆಗ ಸಿಟ್ಟಿಗೆದ್ದ ಜಗದೀಶ್ ಬ್ಲೇಡ್​ನಿಂದ ದಾಳಿ ನಡೆಸಿದ್ದಾನೆ. ತಂದೆಯ ಜೀವ ಉಳಿಸಲು ಬಂದ ಮಗ ಪ್ರವೀಣ ದಳವಾಯಿಯ ಕುತ್ತಿಗೆಗೂ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾನೆ.

hubli
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಪ್ಪ ದಳವಾಯಿ

ಘಟನೆಯ ಮಾಹಿತಿ ತಿಳಿದ ಅಣ್ಣಿಗೇರಿ ಠಾಣೆಯ ಪಿಎಸ್ಐ ಎಲ್.ಕೆ ಜೂಲಕಟ್ಟಿ ಆರೋಪಿ ಜಗದೀಶ್ ಕಂಬಳಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಹೆಂಡತಿಯನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದನೆಂದು ಸಿಟ್ಟಿಗೆದ್ದ ಅಳಿಯ ಮಾವನ ಕತ್ತು ಸೀಳಿದ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಗೊಂಡ ಮಗ ಪ್ರವೀಣ ದಳವಾಯಿ

ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ್ ಕಂಬಳಿ ಎಂಬಾತನಿಗೆ ಶಿವಪ್ಪ ದಳವಾಯಿಯ ಮಗಳನ್ನು ಮದುವೆ ಮಾಡಿಕೊಟ್ಟಿದ್ದ. ಆದರೆ ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆಯಿಂದ ತವರು ಮನೆಗೆ ಬಂದಿದ್ದ ಪತ್ನಿಯನ್ನು ಜಗದೀಶ್ ಕರೆದುಕೊಂಡು ಹೋಗಲು ಗ್ರಾಮಕ್ಕೆ ಆಗಮಿಸಿದ್ದ. ಆದರೆ ಮಗಳನ್ನು ಕಳುಹಿಸಲು ಶಿವಪ್ಪ ನಿರಾಕರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಆಗ ಸಿಟ್ಟಿಗೆದ್ದ ಜಗದೀಶ್ ಬ್ಲೇಡ್​ನಿಂದ ದಾಳಿ ನಡೆಸಿದ್ದಾನೆ. ತಂದೆಯ ಜೀವ ಉಳಿಸಲು ಬಂದ ಮಗ ಪ್ರವೀಣ ದಳವಾಯಿಯ ಕುತ್ತಿಗೆಗೂ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾನೆ.

hubli
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಪ್ಪ ದಳವಾಯಿ

ಘಟನೆಯ ಮಾಹಿತಿ ತಿಳಿದ ಅಣ್ಣಿಗೇರಿ ಠಾಣೆಯ ಪಿಎಸ್ಐ ಎಲ್.ಕೆ ಜೂಲಕಟ್ಟಿ ಆರೋಪಿ ಜಗದೀಶ್ ಕಂಬಳಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.