ETV Bharat / state

ಹುಬ್ಬಳ್ಳಿ: ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹೋಟೆಲ್​ ಸಿಬ್ಬಂದಿ

author img

By

Published : Nov 10, 2022, 4:56 PM IST

ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹೋಟೆಲ್​ನ ಶೌಚಾಗೃಹದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

Kn_hbl
ಹುಬ್ಬಳ್ಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಹೊಟೇಲ್ ಸಿಬ್ಬಂದಿ

ಹುಬ್ಬಳ್ಳಿ: ತಾನು ಕೆಲಸ ಮಾಡುತ್ತಿದ್ದ ಹೋಟೆಲ್​ನಲ್ಲಿಯೇ ಕಾರ್ಮಿಕನೊಬ್ಬ ಈರುಳ್ಳಿ ಕತ್ತರಿಸುವ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ 15 ದಿನದ ಹಿಂದೆ ಕೆಲಸಕ್ಕೆಂದು ಬಂದು ಸೇರಿದ್ದ ಬೆಳಗಾವಿ ಮೂಲದ ಅನಿಲ್​ ಎಂಬ ಯುವಕ ನಿನ್ನೆ ತಡರಾತ್ರಿ ಹೋಟೆಲ್​ನ ಶೌಚಾಲಯದಲ್ಲಿ ಈರುಳ್ಳಿ ಕತ್ತರಿಸುವ ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬಹಳ ಸಮಯವಾದರು ಶೌಚಾಲಯದಿಂದ ಅನಿಲ್ ಹೊರ​ ಬಾರದ ಹಿನ್ನೆಲೆ ಅನುಮಾನಗೊಂಡ ಹೋಟೆಲ್​ನ ಸಿಬ್ಬಂದಿ, ಶೌಚಾಲಯದ ಬಾಗಿಲು ಮುರಿದು ನೋಡಿದಾಗ ರಕ್ತದ ಮಡುವಿನಲ್ಲಿ ಅಸ್ವಸ್ಥನಾಗಿ ಅನಿಲ್​ ಬಿದ್ದದ್ದು ಕಂಡು ಬಂದಿದೆ.

ಕೂಡಲೇ ಅನಿಲ್​ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಾಲ್ಕನೇ ಮಗುವೂ ಹೆಣ್ಣೆಂದು ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಂದೆ!

ಹುಬ್ಬಳ್ಳಿ: ತಾನು ಕೆಲಸ ಮಾಡುತ್ತಿದ್ದ ಹೋಟೆಲ್​ನಲ್ಲಿಯೇ ಕಾರ್ಮಿಕನೊಬ್ಬ ಈರುಳ್ಳಿ ಕತ್ತರಿಸುವ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ 15 ದಿನದ ಹಿಂದೆ ಕೆಲಸಕ್ಕೆಂದು ಬಂದು ಸೇರಿದ್ದ ಬೆಳಗಾವಿ ಮೂಲದ ಅನಿಲ್​ ಎಂಬ ಯುವಕ ನಿನ್ನೆ ತಡರಾತ್ರಿ ಹೋಟೆಲ್​ನ ಶೌಚಾಲಯದಲ್ಲಿ ಈರುಳ್ಳಿ ಕತ್ತರಿಸುವ ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬಹಳ ಸಮಯವಾದರು ಶೌಚಾಲಯದಿಂದ ಅನಿಲ್ ಹೊರ​ ಬಾರದ ಹಿನ್ನೆಲೆ ಅನುಮಾನಗೊಂಡ ಹೋಟೆಲ್​ನ ಸಿಬ್ಬಂದಿ, ಶೌಚಾಲಯದ ಬಾಗಿಲು ಮುರಿದು ನೋಡಿದಾಗ ರಕ್ತದ ಮಡುವಿನಲ್ಲಿ ಅಸ್ವಸ್ಥನಾಗಿ ಅನಿಲ್​ ಬಿದ್ದದ್ದು ಕಂಡು ಬಂದಿದೆ.

ಕೂಡಲೇ ಅನಿಲ್​ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಾಲ್ಕನೇ ಮಗುವೂ ಹೆಣ್ಣೆಂದು ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಂದೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.