ETV Bharat / state

ಪೊಲೀಸರ ಹಲ್ಲೆ ಆರೋಪ: ಮೃತನ ಸಂಬಂಧಿಗಳಿಂದ ಪ್ರತಿಭಟನೆ - Death of man in Shantiniketan colony of Hubli

ಗಣೇಶ ಮೂರ್ತಿಗಳ ಮೆರವಣಿಗೆ ಸಂದರ್ಭದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಭರತ ಇಂದರಗಿ ಶಾಮೀಲಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈತನ ತಂದೆ ಲಕ್ಷ್ಮಣ ಇಂದರಗಿ ಅವರನ್ನು ಶಹರ ಠಾಣೆ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗಿದ್ದರು.

ಶಾಂತಿನಿಕೇತನ ಕಾಲೋನಿಯಲ್ಲಿ ವ್ಯಕ್ತಿ ಸಾವು
author img

By

Published : Nov 8, 2019, 2:57 PM IST

Updated : Nov 8, 2019, 3:05 PM IST

ಹುಬ್ಬಳ್ಳಿ: ವಿಚಾರಣೆ ನೆಪದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದಲೇ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಗಳು ಪ್ರತಿಭಟನೆ ನಡೆಸಿದ ಘಟನೆ ಶಾಂತಿನಿಕೇತನ ಕಾಲೋನಿಯಲ್ಲಿ ಜರುಗಿದೆ.

ವಿಚಾರಣೆ ನೆಪದಲ್ಲಿ ಲಕ್ಷ್ಮಣ ಇಂದರಗಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಮೃತರ ಸಂಬಂಧಿಕರು ಗುರುವಾರ ತಡರಾತ್ರಿವರೆಗೂ ಮನೆ ಬಳಿ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ: ಗಣೇಶ ಮೂರ್ತಿಗಳ ಮೆರವಣಿಗೆ ಸಂದರ್ಭದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಭರತ ಇಂದರಗಿ ಶಾಮೀಲಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈತನ ತಂದೆ ಲಕ್ಷ್ಮಣ ಇಂದರಗಿ ಅವರನ್ನು ಶಹರ ಠಾಣೆ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗಿದ್ದರು.

ಕಾಲೋನಿಯಲ್ಲಿ ವ್ಯಕ್ತಿ ಸಾವು

ನಾಲ್ಕೈದು ದಿನ ಠಾಣೆಯಲ್ಲಿಯೇ ಇಟ್ಟುಕೊಂಡು ಕೈ, ಕಾಲು, ಬೆನ್ನು, ಪಾದಕ್ಕೆ ಮನಬಂದಂತೆ ಹಲ್ಲೆ ಮಾಡಿ ಹಿಂಸೆ ಮಾಡಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದರು. ನಂತರ 10 ದಿನ ಬಂಧನದಲ್ಲಿರಿಸಿದ್ದರು. ಈ ಎಲ್ಲ ಕಾರಣದಿಂದ ಆರೋಗ್ಯ ತೀವ್ರ ಹದಗೆಟ್ಟಿತ್ತು. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಗಳು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ: ವಿಚಾರಣೆ ನೆಪದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದಲೇ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಗಳು ಪ್ರತಿಭಟನೆ ನಡೆಸಿದ ಘಟನೆ ಶಾಂತಿನಿಕೇತನ ಕಾಲೋನಿಯಲ್ಲಿ ಜರುಗಿದೆ.

ವಿಚಾರಣೆ ನೆಪದಲ್ಲಿ ಲಕ್ಷ್ಮಣ ಇಂದರಗಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಮೃತರ ಸಂಬಂಧಿಕರು ಗುರುವಾರ ತಡರಾತ್ರಿವರೆಗೂ ಮನೆ ಬಳಿ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ: ಗಣೇಶ ಮೂರ್ತಿಗಳ ಮೆರವಣಿಗೆ ಸಂದರ್ಭದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಭರತ ಇಂದರಗಿ ಶಾಮೀಲಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈತನ ತಂದೆ ಲಕ್ಷ್ಮಣ ಇಂದರಗಿ ಅವರನ್ನು ಶಹರ ಠಾಣೆ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗಿದ್ದರು.

ಕಾಲೋನಿಯಲ್ಲಿ ವ್ಯಕ್ತಿ ಸಾವು

ನಾಲ್ಕೈದು ದಿನ ಠಾಣೆಯಲ್ಲಿಯೇ ಇಟ್ಟುಕೊಂಡು ಕೈ, ಕಾಲು, ಬೆನ್ನು, ಪಾದಕ್ಕೆ ಮನಬಂದಂತೆ ಹಲ್ಲೆ ಮಾಡಿ ಹಿಂಸೆ ಮಾಡಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದರು. ನಂತರ 10 ದಿನ ಬಂಧನದಲ್ಲಿರಿಸಿದ್ದರು. ಈ ಎಲ್ಲ ಕಾರಣದಿಂದ ಆರೋಗ್ಯ ತೀವ್ರ ಹದಗೆಟ್ಟಿತ್ತು. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಗಳು ಮಾಹಿತಿ ನೀಡಿದ್ದಾರೆ.

Intro:ಹುಬ್ಬಳ್ಳಿ-02

ವಿಚಾರಣೆ ನೆಪದಲ್ಲಿ ಪೋಲಿಸರು ಹಲ್ಲೆ ಮಾಡಿದ್ದರಿಂದಲೇ ತಮ್ಮ ತಂದೆ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ ಘಟನೆ ಸೆಟ್ಲಮೆಂಟ್ ನ ಶಾಂತಿನಿಕೇತನ ಕಾಲೋನಿಯಲ್ಲಿ ನಡೆದಿದೆ. ವಿಚಾರಣೆ ನೆಪದಲ್ಲಿ
ಲಕ್ಷ್ಮಣ ಇಂದರಗಿ ಮೃತಪಟ್ಟಿದ್ದಾರೆಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಮೃತರ ಸಂಬಂಧಿಕರು ಗುರುವಾರ ತಡರಾತ್ರಿವರೆಗೂ ಶವವನ್ನು ಮನೆ ಬಳಿ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಘಟನೆ ಹಿನ್ನೆಲೆ:

ಗಣೇಶ ಮೂರ್ತಿಗಳ ಮೆವಣಿಗೆ ಸಂದರ್ಭದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ ಇಂದರಗಿ ಶಾಮೀಲಾಗಿದ್ದಾರೆಂದು ಈತನ ತಂದೆ ಲಕ್ಷ್ಮಣ ಇಂದರಗಿ ಅವರನ್ನು ಶರಹ ಠಾಣೆ ಪೋಲಿಸರು ವಿಚಾರಣೆಗೆಂದು ಠಾಣೆಗೆ ಕರೆಸಿಕೊಂಡು ಹೋಗಿದ್ದರು. ನಾಲ್ಕೈದು ದಿನ ಠಾಣೆಯಲ್ಲಿಯೇ ಇಟ್ಟುಕೊಂಡು ಕೈ, ಕಾಲು, ಬೆನ್ನು ಪಾದಕ್ಕೆ ಮನಬಂದಂತೆ ಹಲ್ಲೇ ಗೈದು ಹಿಂಸೆ ಮಾಡಿದ್ದರಿಂದ ಹಾಗೂ ಕಿರುಕುಳ ಕೊಟ್ಟಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ. ನಂತರ 10 ದಿನ ಉಪಕಾರಾಗೃಹದ ವಶಕ್ಕೆ ಒಪ್ಪಿಸಿದ್ದರು. 15 ದಿನನಲ್ಲಿ ಆರೋಗ್ಯ ತೀವ್ರ ಹದಗೆಟ್ಟಿತ್ತು. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾಗ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿದ್ದಾರೆ. ಹೀಗಾಗಿ ಇವರ ಸಾವಿಗೆ ಪೊಲೀಸರ ಕಿರುಕುಳ ಕಾರಣ ಎಂದು ಮೃತ ಸಂಬಂಧಿಗಳು ಆರೋಪಿಸುತ್ತಿದ್ದಾರೆ.Body:H B GaddadConclusion:Etv hubli
Last Updated : Nov 8, 2019, 3:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.