ETV Bharat / state

ಮಾಜಿ ಸಚಿವ ವಿನಯ್​ ಕುಲಕರ್ಣಿ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ ನಟ ದರ್ಶನ್

ನಿನ್ನೆ ರಾಬರ್ಟ್ ಸಿನಿಮಾ ಚಿತ್ರತಂಡ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಿತು. ಈ ವೇಳೆ ಕಾರ್ಯಕ್ರಮ ಮುಗಿಸಿಕೊಂಡು ನಟ ದರ್ಶನ್​ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ..

author img

By

Published : Mar 1, 2021, 11:16 AM IST

ಮಾಜಿ ಸಚಿವ ವಿನಯ್​ ಕುಲಕರ್ಣಿ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ ನಟ ದರ್ಶ
Actor Darshan visited Former Minister Vinay Kulkarni house

ಧಾರವಾಡ : ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಿನ್ನೆ ತಡರಾತ್ರಿ ನಟ ದರ್ಶನ್​ ತೆರಳಿದ್ದರು.

ಭಾನುವಾರ ಬೆಳಗ್ಗೆ ನಟ ದರ್ಶನ್​ ವಿನಯ್​ ಕುಲಕರ್ಣಿ ಮನೆಗೆ ಭೇಟಿ ನೀಡುವ ನಿರೀಕ್ಷೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದರ್ಶನ್ ಅಭಿಮಾನಿಗಳು ಶಿವಗಿರಿಯಲ್ಲಿರುವ ವಿನಯ್ ಮನೆ ಎದುರು ಜಮಾವಣೆಗೊಂಡಿದ್ದರು. ಆದರೆ, ಬೆಳಗ್ಗೆ ಭೇಟಿ ನೀಡಲು ಸಾಧ್ಯವಾಗದ ಹಿನ್ನೆಲೆ ಮಧ್ಯರಾತ್ರಿ 12 ಗಂಟೆಗೆ ವಿನಯ್​ ಮನೆಗೆ ದರ್ಶನ್​ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗುತ್ತಿದೆ.

ಓದಿ: ನಟ ಪವನ್ ಸಿಂಗ್ ಕುರಿತು ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಕಿಡಿಗೇಡಿಗಳು : ಎಫ್‌ಐಆರ್ ದಾಖಲು

ನವೆಂಬರ್​ 5ರಂದು ವಿನಯ್ ಕುಲಕರ್ಣಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರು. ಸದ್ಯ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

ಧಾರವಾಡ : ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಿನ್ನೆ ತಡರಾತ್ರಿ ನಟ ದರ್ಶನ್​ ತೆರಳಿದ್ದರು.

ಭಾನುವಾರ ಬೆಳಗ್ಗೆ ನಟ ದರ್ಶನ್​ ವಿನಯ್​ ಕುಲಕರ್ಣಿ ಮನೆಗೆ ಭೇಟಿ ನೀಡುವ ನಿರೀಕ್ಷೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದರ್ಶನ್ ಅಭಿಮಾನಿಗಳು ಶಿವಗಿರಿಯಲ್ಲಿರುವ ವಿನಯ್ ಮನೆ ಎದುರು ಜಮಾವಣೆಗೊಂಡಿದ್ದರು. ಆದರೆ, ಬೆಳಗ್ಗೆ ಭೇಟಿ ನೀಡಲು ಸಾಧ್ಯವಾಗದ ಹಿನ್ನೆಲೆ ಮಧ್ಯರಾತ್ರಿ 12 ಗಂಟೆಗೆ ವಿನಯ್​ ಮನೆಗೆ ದರ್ಶನ್​ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗುತ್ತಿದೆ.

ಓದಿ: ನಟ ಪವನ್ ಸಿಂಗ್ ಕುರಿತು ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಕಿಡಿಗೇಡಿಗಳು : ಎಫ್‌ಐಆರ್ ದಾಖಲು

ನವೆಂಬರ್​ 5ರಂದು ವಿನಯ್ ಕುಲಕರ್ಣಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರು. ಸದ್ಯ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.