ETV Bharat / state

ಸಂಕ್ರಾಂತಿ ಹಿನ್ನೆಲೆ ಬೆಂಗಳೂರು, ಧರ್ಮಸ್ಥಳಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

author img

By ETV Bharat Karnataka Team

Published : Jan 14, 2024, 7:58 AM IST

ಮಕರ ಸಂಕ್ರಾತಿ ಹಬ್ಬದ ಹಿನ್ನೆಲೆ ಹುಬ್ಬಳ್ಳಿಯಿಂದ ಹೆಚ್ಚುವರಿ ಸರ್ಕಾರಿ ಬಸ್​ಗಳನ್ನು ಬಿಡಲಾಗಿದೆ.

ವಾಯುವ್ಯ ಕರ್ನಾಟಕ ಸಾರಿಗೆ
ವಾಯುವ್ಯ ಕರ್ನಾಟಕ ಸಾರಿಗೆ

ಹುಬ್ಬಳ್ಳಿ: ಸಂಕ್ರಾಂತಿ ಹಾಗೂ ಸಾಲು ಸಾಲು ರಜೆ ಪ್ರಯುಕ್ತ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಯಾಣಕರು ಸಂಚರಿಸುವ ಹಿನ್ನೆಲೆಯಲ್ಲಿ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಎರಡನೇ ಶನಿವಾರ, ಸಾರ್ವಜನಿಕ ರಜೆ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರು ಪ್ರಯಾಣ ಮಾಡಿದ್ದಾರೆ. ನಿತ್ಯದ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಹೆಚ್ಚಿದ ಬೇಡಿಕೆಗೆ ತಕ್ಕಂತೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ ಒಂದು ಮಲ್ಟಿ ಆ್ಯಕ್ಸಲ್, ಒಂದು ಸ್ಲೀಪರ್ ಹಾಗೂ ಎಂಟು ವೇಗದೂತ ಬಸ್ಸುಗಳು ಹಾಗೂ ಧರ್ಮಸ್ಥಳಕ್ಕೆ ಎರಡು ವೇಗದೂತ ಬಸ್ಸುಗಳನ್ನು ಬಿಡಲಾಗಿದೆ.

ಗೋಕುಲ ರಸ್ತೆ ಬಸ್​ ನಿಲ್ದಾಣ ಹಾಗೂ ಹೊಸೂರು ಬಸ್​ ನಿಲ್ದಾಣ ಸೇರಿದಂತೆ ಜಿಲ್ಲೆಯೊಳಗೆ ಪ್ರಮುಖ ಬಸ್​​ ನಿಲ್ದಾಣಗಳಲ್ಲಿ ಅಕ್ಕ ಪಕ್ಕದ ಜಿಲ್ಲೆಗಳ ಸ್ಥಳಗಳಿಗೆ ತೆರಳಿದ ಪ್ರಯಾಣಿಕರ ಸಂಖ್ಯೆ ಸಹ ಹೆಚ್ಚಾಗಿತ್ತು. ಹಬ್ಬದ ರಜೆ ಮುಗಿಸಿ ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಗೋಕುಲ ರಸ್ತೆ ಬಸ್ ನಿಲ್ದಾಣ ಹಾಗೂ ಹೊಸೂರು ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯೊಳಗಿನ ಪ್ರಮುಖ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮ: ಸಿಲಿಕಾನ್ ಸಿಟಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

ಹುಬ್ಬಳ್ಳಿ: ಸಂಕ್ರಾಂತಿ ಹಾಗೂ ಸಾಲು ಸಾಲು ರಜೆ ಪ್ರಯುಕ್ತ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಯಾಣಕರು ಸಂಚರಿಸುವ ಹಿನ್ನೆಲೆಯಲ್ಲಿ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಎರಡನೇ ಶನಿವಾರ, ಸಾರ್ವಜನಿಕ ರಜೆ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರು ಪ್ರಯಾಣ ಮಾಡಿದ್ದಾರೆ. ನಿತ್ಯದ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಹೆಚ್ಚಿದ ಬೇಡಿಕೆಗೆ ತಕ್ಕಂತೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ ಒಂದು ಮಲ್ಟಿ ಆ್ಯಕ್ಸಲ್, ಒಂದು ಸ್ಲೀಪರ್ ಹಾಗೂ ಎಂಟು ವೇಗದೂತ ಬಸ್ಸುಗಳು ಹಾಗೂ ಧರ್ಮಸ್ಥಳಕ್ಕೆ ಎರಡು ವೇಗದೂತ ಬಸ್ಸುಗಳನ್ನು ಬಿಡಲಾಗಿದೆ.

ಗೋಕುಲ ರಸ್ತೆ ಬಸ್​ ನಿಲ್ದಾಣ ಹಾಗೂ ಹೊಸೂರು ಬಸ್​ ನಿಲ್ದಾಣ ಸೇರಿದಂತೆ ಜಿಲ್ಲೆಯೊಳಗೆ ಪ್ರಮುಖ ಬಸ್​​ ನಿಲ್ದಾಣಗಳಲ್ಲಿ ಅಕ್ಕ ಪಕ್ಕದ ಜಿಲ್ಲೆಗಳ ಸ್ಥಳಗಳಿಗೆ ತೆರಳಿದ ಪ್ರಯಾಣಿಕರ ಸಂಖ್ಯೆ ಸಹ ಹೆಚ್ಚಾಗಿತ್ತು. ಹಬ್ಬದ ರಜೆ ಮುಗಿಸಿ ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಗೋಕುಲ ರಸ್ತೆ ಬಸ್ ನಿಲ್ದಾಣ ಹಾಗೂ ಹೊಸೂರು ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯೊಳಗಿನ ಪ್ರಮುಖ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮ: ಸಿಲಿಕಾನ್ ಸಿಟಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.