ETV Bharat / state

ವಿಜಯಪುರದಿಂದ ಅಲಿಂಗ ಚಳವಳಿ ಆರಂಭಿಸುತ್ತೇವೆ : ಸಿ ಎಂ ಇಬ್ರಾಹಿಂ

author img

By

Published : Jan 30, 2022, 10:16 PM IST

ಅಲಿಂಗ ಚಳವಳಿ ವಿಜಯಪುರದಿಂದ ಆರಂಭ ಮಾಡುತ್ತೇವೆ. ಚಳವಳಿಗೆ ಎಸ್ ಆರ್ ಪಾಟೀಲ್ ಬರುತ್ತಾರೆ ಎಂದು ವಿಧಾನ ಪರಿಷತ್​ ಸದಸ್ಯ ಸಿ. ಎಂ. ಇಬ್ರಾಹಿಂ ಹೇಳಿದರು.

ಸಿ ಎಂ ಇಬ್ರಾಹಿಂ
ಸಿ ಎಂ ಇಬ್ರಾಹಿಂ

ಹುಬ್ಬಳ್ಳಿ : ಮೀಟಿಂಗ್ 100% ಸಕ್ಸಸ್ ಫುಲ್ ಆಗಿದೆ. ನನ್ನ ಜೊತೆಗೆ ಬಹಳಷ್ಟು ದೊಡ್ಡವರ ಬೆಂಬಲವಿದೆ. ಆದ್ರೆ ಹೆಸರು ಹೇಳಲ್ಲ. ಕಾಂಗ್ರೆಸ್ ನವರು ನನ್ನ ಜೊತೆಗಿದ್ದು ಯಾವುದನ್ನು ಹೇಳಲ್ಲಾ, ಸಮಯಕ್ಕಾಗಿ ಕಾಯುತ್ತಿದ್ದೇನೆ. ಅಲಿಂಗ ಚಳವಳಿಯನ್ನು ವಿಜಯಪುರದಿಂದ ಆರಂಭಿಸುತ್ತೇವೆ. ಚಳವಳಿಗೆ ಪಕ್ಷದ ಹಿರಿಯ ನಾಯಕ ಎಸ್ ಆರ್ ಪಾಟೀಲ್ ಬರುತ್ತಾರೆ ಎಂದು ವಿಧಾನ ಪರಿಷತ್​ ಸದಸ್ಯ ಸಿ‌ ಎಂ ಇಬ್ರಾಹಿಂ ಹೇಳಿದ್ರು.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್​ ಸದಸ್ಯ ಸಿ ಎಂ ಇಬ್ರಾಹಿಂ ಹೇಳಿಕ

ನಗರದ ‌ಖಾಸಗಿ ಹೋಟೆಲ್​​ನಲ್ಲಿ ಉಭಯ ನಾಯಕರ ಮಾತುಕತೆ ‌ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಎಸ್ ಆರ್ ಪಾಟೀಲ್ ಬರುತ್ತಾರಾ ಅನ್ನೋದನ್ನು ಕಾದುನೋಡಿ. ನನಗೆ ತುಂಬಾ ನೋವಾಗುತ್ತಿದೆ ಅಂತ ಎಸ್ ಆರ್ ಪಾಟೀಲ್ ಕುರಿತು ಸಹಾನುಭೂತಿ ವ್ಯಕ್ತಪಡಿಸಿದರು.

ಅವರು ಪಕ್ಷದಲ್ಲಿ ಇರಬೇಕು ಅಂತ ಮನವಿ ಮಾಡಿದರು. ಆದರೆ ಅದು ಮುಗಿದ ಅಧ್ಯಾಯ. ಒಂದು ಸಲ ಡ್ಯಾಂ ಒಡೆದು ನೀರು ಹರಿದು ಹೋದ್ರೆ ಮುಗಿತು. ಇನ್ನೂ ಐದಾರು ದಿನಗಳಲ್ಲಿ ಕೊಪ್ಪಳ, ಕಲಬುರಗಿ, ಬಳ್ಳಾರಿ, ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮಾಡುತ್ತೇನೆ.‌ ನಾನು ನಿರೀಕ್ಷೆ ಮಾಡಿದಕ್ಕಿಂತ ಹೆಚ್ಚು ಬೆಂಬಲ ಸಿಗುತ್ತಿದೆ ಎಂದು ಇಬ್ರಾಹಿಂ ಹೇಳಿದ್ರು.

ನನಗೆ ಸಿದ್ದರಾಮಯ್ಯರಿಂದ ಯಾವುದೇ ಫೋನ್ ಕಾಲ್ ಬಂದಿಲ್ಲ.‌ ಅದನ್ನು ನಾನು ನಿರೀಕ್ಷೆ ಸಹ ಮಾಡಲ್ಲ. ನನಗೆ ಜೆಡಿಎಸ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್​​ ಅವರ ಮೇಲೆ ಒಲವಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹುಬ್ಬಳ್ಳಿ : ಮೀಟಿಂಗ್ 100% ಸಕ್ಸಸ್ ಫುಲ್ ಆಗಿದೆ. ನನ್ನ ಜೊತೆಗೆ ಬಹಳಷ್ಟು ದೊಡ್ಡವರ ಬೆಂಬಲವಿದೆ. ಆದ್ರೆ ಹೆಸರು ಹೇಳಲ್ಲ. ಕಾಂಗ್ರೆಸ್ ನವರು ನನ್ನ ಜೊತೆಗಿದ್ದು ಯಾವುದನ್ನು ಹೇಳಲ್ಲಾ, ಸಮಯಕ್ಕಾಗಿ ಕಾಯುತ್ತಿದ್ದೇನೆ. ಅಲಿಂಗ ಚಳವಳಿಯನ್ನು ವಿಜಯಪುರದಿಂದ ಆರಂಭಿಸುತ್ತೇವೆ. ಚಳವಳಿಗೆ ಪಕ್ಷದ ಹಿರಿಯ ನಾಯಕ ಎಸ್ ಆರ್ ಪಾಟೀಲ್ ಬರುತ್ತಾರೆ ಎಂದು ವಿಧಾನ ಪರಿಷತ್​ ಸದಸ್ಯ ಸಿ‌ ಎಂ ಇಬ್ರಾಹಿಂ ಹೇಳಿದ್ರು.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್​ ಸದಸ್ಯ ಸಿ ಎಂ ಇಬ್ರಾಹಿಂ ಹೇಳಿಕ

ನಗರದ ‌ಖಾಸಗಿ ಹೋಟೆಲ್​​ನಲ್ಲಿ ಉಭಯ ನಾಯಕರ ಮಾತುಕತೆ ‌ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಎಸ್ ಆರ್ ಪಾಟೀಲ್ ಬರುತ್ತಾರಾ ಅನ್ನೋದನ್ನು ಕಾದುನೋಡಿ. ನನಗೆ ತುಂಬಾ ನೋವಾಗುತ್ತಿದೆ ಅಂತ ಎಸ್ ಆರ್ ಪಾಟೀಲ್ ಕುರಿತು ಸಹಾನುಭೂತಿ ವ್ಯಕ್ತಪಡಿಸಿದರು.

ಅವರು ಪಕ್ಷದಲ್ಲಿ ಇರಬೇಕು ಅಂತ ಮನವಿ ಮಾಡಿದರು. ಆದರೆ ಅದು ಮುಗಿದ ಅಧ್ಯಾಯ. ಒಂದು ಸಲ ಡ್ಯಾಂ ಒಡೆದು ನೀರು ಹರಿದು ಹೋದ್ರೆ ಮುಗಿತು. ಇನ್ನೂ ಐದಾರು ದಿನಗಳಲ್ಲಿ ಕೊಪ್ಪಳ, ಕಲಬುರಗಿ, ಬಳ್ಳಾರಿ, ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮಾಡುತ್ತೇನೆ.‌ ನಾನು ನಿರೀಕ್ಷೆ ಮಾಡಿದಕ್ಕಿಂತ ಹೆಚ್ಚು ಬೆಂಬಲ ಸಿಗುತ್ತಿದೆ ಎಂದು ಇಬ್ರಾಹಿಂ ಹೇಳಿದ್ರು.

ನನಗೆ ಸಿದ್ದರಾಮಯ್ಯರಿಂದ ಯಾವುದೇ ಫೋನ್ ಕಾಲ್ ಬಂದಿಲ್ಲ.‌ ಅದನ್ನು ನಾನು ನಿರೀಕ್ಷೆ ಸಹ ಮಾಡಲ್ಲ. ನನಗೆ ಜೆಡಿಎಸ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್​​ ಅವರ ಮೇಲೆ ಒಲವಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.