ETV Bharat / state

ಕೊಲೆ ಆರೋಪಿ ಮಾಜಿ ಸೈನಿಕನಿಗೆ ಗ್ರಾಮಸ್ಥರಿಂದ ಥಳಿತ - assult on murder accused former army man in Hubli

ಯುವಕನ ಕೊಲೆ ಆರೋಪಿ ಮಾಜಿ ಸೈನಿಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

assult on murder accused in Hubli
ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
author img

By

Published : Sep 8, 2020, 1:39 PM IST

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ ಪ್ರಕರಣದ ಆರೋಪಿ ಮಾಜಿ ಸೈನಿಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಭಾನುವಾರ ಸಂಜೆ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಗಂಗಾಧರ ನಿಂಗಪ್ಪ ನೂಲ್ವಿ ಎಂಬ ಮಾಜಿ ಸೈನಿಕ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಜಗದೀಶ ತಾಂಬೆ ಎಂಬ ಯುವಕನಿಗೆ ಚಾಕುವಿನಿಂದ ಇರಿದಿದ್ದ. ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೊಲೆ ಆರೋಪಿ ಮಾಜಿ ಸೈನಿಕನ ಕೈ, ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಇದನ್ನೂ ಓದಿ: ಕಲಘಟಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ‌‌ ಕೊಲೆ

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಪ್ರಚೋದನೆ ನೀಡಿದ ಶಾರದ ಪಾಟೀಲ್ ಎಂಬ ಮಹಿಳೆ ಹಾಗೂ ಕೊಲೆ ಮಾಡಿದ ಆರೋಪಿ ಗಂಗಾಧರ ನೂಲ್ವಿಯನ್ನು ಕಲಘಟಗಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ ಪ್ರಕರಣದ ಆರೋಪಿ ಮಾಜಿ ಸೈನಿಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಭಾನುವಾರ ಸಂಜೆ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಗಂಗಾಧರ ನಿಂಗಪ್ಪ ನೂಲ್ವಿ ಎಂಬ ಮಾಜಿ ಸೈನಿಕ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಜಗದೀಶ ತಾಂಬೆ ಎಂಬ ಯುವಕನಿಗೆ ಚಾಕುವಿನಿಂದ ಇರಿದಿದ್ದ. ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೊಲೆ ಆರೋಪಿ ಮಾಜಿ ಸೈನಿಕನ ಕೈ, ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಇದನ್ನೂ ಓದಿ: ಕಲಘಟಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ‌‌ ಕೊಲೆ

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಪ್ರಚೋದನೆ ನೀಡಿದ ಶಾರದ ಪಾಟೀಲ್ ಎಂಬ ಮಹಿಳೆ ಹಾಗೂ ಕೊಲೆ ಮಾಡಿದ ಆರೋಪಿ ಗಂಗಾಧರ ನೂಲ್ವಿಯನ್ನು ಕಲಘಟಗಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.