ಹುಬ್ಬಳ್ಳಿ: ರಾಜ್ಯ ಸರ್ಕಾರ ಆಟೋ ರಿಕ್ಷಾ ಚಾಲಕರಿಗೆ ಕೊರೊನಾ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಆಟೋ ಚಾಲಕರ, ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದ ನಡೆಸಿದ ಆಟೋಚಾಲಕರು, ಲಾಕ್ಡೌನ್ ಸಂದರ್ಭದಲ್ಲಿ ಹಲವಾರು ಆಟೋಚಾಲಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಆದ್ದರಿಂದ ಆಟೋ ಚಾಲಕರು ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮನವಿ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಚಾಲಕರಿಗೆ ₹5000 ಪರಿಹಾರ ಘೋಷಣೆ ಮಾಡಿತ್ತು. ಆದರೆ, ಪರಿಹಾರ ಮಾತ್ರ ನಿಜ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂದು ಆರೋಪಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ತೈಲ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಆಟೋಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.