ETV Bharat / state

ಹಿಜಾಬ್ - ಕೇಸರಿ ಶಾಲು ವಿಚಾರ: ಮಕ್ಕಳ ಭವಿಷ್ಯಕ್ಕೆ ಕೆಟ್ಟದಾಗುತ್ತಿದೆ.. ಸಭಾಪತಿ ಹೊರಟ್ಟಿ ಅಸಮಾಧಾನ

author img

By

Published : Feb 10, 2022, 7:19 PM IST

ಧಾರವಾಡದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಿಜಾಬ್-ಕೇಸರಿ ಶಾಲು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ, ಬಟ್ಟೆ ಧರಿಸುವುದು ಯಾವುದೇ ನಿಯಮ ಇರಲಿಲ್ಲ ಒಂದು ಕಡೆ ಅಲ್ಲಾ ಹು ಅಕ್ಬರ್ ಅಂತಾರೆ. ಈ ಕಡೆ ಜೈ ಶ್ರೀರಾಮ ಅಂತಾರೆ. ಮಕ್ಕಳ‌ ಮಧ್ಯೆ ಹೀಗಾದರೆ ಹೇಗೆ? ಇದು ಮುಂದುವರೆದರೆ ಕಾಲೇಜ್‌ಗಳಲ್ಲಿ ಹೆಣಗಳು ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ಧಾರವಾಡ
ಹಿಜಾಬ್-ಕೇಸರಿ ಶಾಲು ವಿವಾದ ವಿಚಾರ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯೆ

ಧಾರವಾಡ: ಹಿಜಾಬ್ - ಕೇಸರಿ ಶಾಲು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಮಕ್ಕಳ ಮನಸ್ಸು ತುಂಬಾ ಮೃದುವಾಗಿದೆ. ವಿವಾದದಿಂದ ಮಕ್ಕಳ ಭವಿಷ್ಯಕ್ಕೆ ಕೆಟ್ಟ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ತಂದೆ-ತಾಯಿ ಮತ್ತು ರಾಜಕೀಯ ಪಕ್ಷಗಳು ವಿಚಾರ ಮಾಡಬೇಕಿದೆ ಎಂದು ಹೇಳಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದ ವಿಚಾರ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯೆ

ಈ‌ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಟ್ಟೆ ಧರಿಸುವುದು ಯಾವುದೇ ನಿಯಮ ಇರಲಿಲ್ಲ ಒಂದು ಕಡೆ ಅಲ್ಲಾ ಹು ಅಕ್ಬರ್ ಅಂತಾರೆ. ಈ ಕಡೆ ಜೈ ಶ್ರೀರಾಮ ಅಂತಾರೆ. ಮಕ್ಕಳ‌ ಮಧ್ಯೆ ಹೀಗಾದರೆ ಹೇಗೆ? ಇದು ಮುಂದುವರಿದರೆ ಕಾಲೇಜ್‌ಗಳಲ್ಲಿ ಹೆಣಗಳು ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ರಕ್ತಪಾತವೂ ಆಗಬಹುದು, ಎಲ್ಲ ರಾಜಕೀಯ ವ್ಯವಸ್ಥೆ ಬಿಟ್ಟು ಇದನ್ನು ಬಗೆ ಹರಿಸಬೇಕು. ಸರ್ಕಾರ ಕೂಡಲೇ ಎಲ್ಲರ ಸಭೆ ಕರೆಯಬೇಕು. ವಿರೋಧ ಪಕ್ಷ ಮತ್ತು ಪಾಲಕರ ಸಭೆ ಕರೆಯಬೇಕು. ಇದು ಪಾರ್ಲಿಮೆಂಟ್‌ಗೂ ಹೋಗಿದೆ. ಹೀಗಾದರೆ ರಾಜ್ಯದ ಮರ್ಯಾದೆ ಏನಾಗುತ್ತದೆ. ಸರ್ಕಾರ ಅಧಿವೇಶನ ಸಹ ನಿಲ್ಲಿಸಿ ಈ ಕಡೆ ನೋಡಬೇಕು ಇದರಲ್ಲಿ ರಾಜಕೀಯ ಬೆರೆಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಇಂತಹುದೇ ಬೇಕಲ್ವಾ?: ಪಾಕ್‌ನಲ್ಲಿ ಭಾರತೀಯ ರಾಯಭಾರಿಗೆ ನೋಟೀಸ್ ವಿಚಾರಕ್ಕೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಇಂತಹುದೇ ಬೇಕಲ್ವಾ? ಮಕ್ಕಳು ಮತ್ತು ಪಾಲಕರ ಮನಸ್ಸು ಕ್ಲಿಯರ್ ಮಾಡಬೇಕಿದೆ. ಬೇರೆ ಬೇರೆ ಜಾತಿ ಮೇಲೆ ತೆಗೆದುಕೊಂಡಲ್ಲಿ ನಾಳೆ ಬೆಂಕಿ ಹತ್ತಿ ಉರಿಯುತ್ತದೆ. ಕೋರ್ಟ್‌ಗೂ ಸಹ ನಾವು ಇತ್ಯರ್ಥ ಮಾಡಿಕೊಳ್ಳುತ್ತೇವೆ ಅಂತಾ ಸರ್ಕಾರ ಹೇಳಬೇಕು. ರಾಜಕೀಯ ನಾಯಕರು ಹೇಳಿಕೆಗಳನ್ನು ನಿಲ್ಲಿಸಬೇಕು. ಮಕ್ಕಳ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟರೆ ಹೇಗೆ ಶಾಸಕರು ಇರೊದು ಏತಕ್ಕೆ? ನಾಲ್ಕು ಮಂದಿಗೆ ಒಳ್ಳೆದಾಗಲಿ ಅಂತಾ ಆರಿಸಿ ಕಳುಹಿಸಿದ್ದಾರೆ. ಭಾಷಣ ಬೇಕಾದರೆ ಎಲೆಕ್ಷನ್‌ದಲ್ಲಿ ಮಾಡಲಿ ಎಂದು ಹೇಳಿದರು.

ಪ್ರಿಯಂಕಾ ಗಾಂಧಿ ಟ್ವೀಟ್​ ವಿಚಾರಕ್ಕೆ ಪ್ರತಿಕ್ರಿಯೆ: ಬಿಕಿನಿ ಬಗ್ಗೆ ಪ್ರಿಯಂಕಾ ಗಾಂಧಿ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವೂ ರಾಜಕೀಯ ಅವರವರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಯಾವ ಬಟ್ಟೆ ಹಾಕಬೇಕು ಅಂತಾ ತಾಯಿ - ತಂದೆ ಕಲಿಸಬೇಕು. ತಾಯಿ ಸ್ಥಾನದಲ್ಲಿಯೂ‌ ಪ್ರಿಯಾಂಕಾ ಇದಾರೆ. ಅಂಥವರು ಬಿಕನಿ‌ ಬಗ್ಗೆ ಹೇಳುವುದು ತಪ್ಪು ಹಕ್ಕು ಎಲ್ಲರಿಗೂ ಇದೆ. ಯಾವ ಯಾವ ಜಾಗಕ್ಕೆ ಏನಿರಬೇಕೋ ಅದು ಇರಬೇಕು. ಸಮುದ್ರ ದಂಡೆಯಲ್ಲಿ ಬಿಕನಿ ಹಾಕಿಕೊಂಡರೆ ಯಾರು ಕೇಳ್ತಾರೆ. ಕಾಲೇಜ್‌ಗೆ ಬಿಕನಿ ಹಾಕೊಂಡ ಹೋಗ್ರಿ ಅಂದ್ರೆ ಹೇಗೆ? ಯಾರನ್ನೊ ಓಲೈಸುವ ಕೆಲಸ ಮಾಡಬಾರದು ಎಂದು ಹೇಳಿದರು.

ಓದಿ: ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ನಾಗೇಶ್​

ಧಾರವಾಡ: ಹಿಜಾಬ್ - ಕೇಸರಿ ಶಾಲು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಮಕ್ಕಳ ಮನಸ್ಸು ತುಂಬಾ ಮೃದುವಾಗಿದೆ. ವಿವಾದದಿಂದ ಮಕ್ಕಳ ಭವಿಷ್ಯಕ್ಕೆ ಕೆಟ್ಟ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ತಂದೆ-ತಾಯಿ ಮತ್ತು ರಾಜಕೀಯ ಪಕ್ಷಗಳು ವಿಚಾರ ಮಾಡಬೇಕಿದೆ ಎಂದು ಹೇಳಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದ ವಿಚಾರ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯೆ

ಈ‌ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಟ್ಟೆ ಧರಿಸುವುದು ಯಾವುದೇ ನಿಯಮ ಇರಲಿಲ್ಲ ಒಂದು ಕಡೆ ಅಲ್ಲಾ ಹು ಅಕ್ಬರ್ ಅಂತಾರೆ. ಈ ಕಡೆ ಜೈ ಶ್ರೀರಾಮ ಅಂತಾರೆ. ಮಕ್ಕಳ‌ ಮಧ್ಯೆ ಹೀಗಾದರೆ ಹೇಗೆ? ಇದು ಮುಂದುವರಿದರೆ ಕಾಲೇಜ್‌ಗಳಲ್ಲಿ ಹೆಣಗಳು ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ರಕ್ತಪಾತವೂ ಆಗಬಹುದು, ಎಲ್ಲ ರಾಜಕೀಯ ವ್ಯವಸ್ಥೆ ಬಿಟ್ಟು ಇದನ್ನು ಬಗೆ ಹರಿಸಬೇಕು. ಸರ್ಕಾರ ಕೂಡಲೇ ಎಲ್ಲರ ಸಭೆ ಕರೆಯಬೇಕು. ವಿರೋಧ ಪಕ್ಷ ಮತ್ತು ಪಾಲಕರ ಸಭೆ ಕರೆಯಬೇಕು. ಇದು ಪಾರ್ಲಿಮೆಂಟ್‌ಗೂ ಹೋಗಿದೆ. ಹೀಗಾದರೆ ರಾಜ್ಯದ ಮರ್ಯಾದೆ ಏನಾಗುತ್ತದೆ. ಸರ್ಕಾರ ಅಧಿವೇಶನ ಸಹ ನಿಲ್ಲಿಸಿ ಈ ಕಡೆ ನೋಡಬೇಕು ಇದರಲ್ಲಿ ರಾಜಕೀಯ ಬೆರೆಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಇಂತಹುದೇ ಬೇಕಲ್ವಾ?: ಪಾಕ್‌ನಲ್ಲಿ ಭಾರತೀಯ ರಾಯಭಾರಿಗೆ ನೋಟೀಸ್ ವಿಚಾರಕ್ಕೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಇಂತಹುದೇ ಬೇಕಲ್ವಾ? ಮಕ್ಕಳು ಮತ್ತು ಪಾಲಕರ ಮನಸ್ಸು ಕ್ಲಿಯರ್ ಮಾಡಬೇಕಿದೆ. ಬೇರೆ ಬೇರೆ ಜಾತಿ ಮೇಲೆ ತೆಗೆದುಕೊಂಡಲ್ಲಿ ನಾಳೆ ಬೆಂಕಿ ಹತ್ತಿ ಉರಿಯುತ್ತದೆ. ಕೋರ್ಟ್‌ಗೂ ಸಹ ನಾವು ಇತ್ಯರ್ಥ ಮಾಡಿಕೊಳ್ಳುತ್ತೇವೆ ಅಂತಾ ಸರ್ಕಾರ ಹೇಳಬೇಕು. ರಾಜಕೀಯ ನಾಯಕರು ಹೇಳಿಕೆಗಳನ್ನು ನಿಲ್ಲಿಸಬೇಕು. ಮಕ್ಕಳ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟರೆ ಹೇಗೆ ಶಾಸಕರು ಇರೊದು ಏತಕ್ಕೆ? ನಾಲ್ಕು ಮಂದಿಗೆ ಒಳ್ಳೆದಾಗಲಿ ಅಂತಾ ಆರಿಸಿ ಕಳುಹಿಸಿದ್ದಾರೆ. ಭಾಷಣ ಬೇಕಾದರೆ ಎಲೆಕ್ಷನ್‌ದಲ್ಲಿ ಮಾಡಲಿ ಎಂದು ಹೇಳಿದರು.

ಪ್ರಿಯಂಕಾ ಗಾಂಧಿ ಟ್ವೀಟ್​ ವಿಚಾರಕ್ಕೆ ಪ್ರತಿಕ್ರಿಯೆ: ಬಿಕಿನಿ ಬಗ್ಗೆ ಪ್ರಿಯಂಕಾ ಗಾಂಧಿ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವೂ ರಾಜಕೀಯ ಅವರವರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಯಾವ ಬಟ್ಟೆ ಹಾಕಬೇಕು ಅಂತಾ ತಾಯಿ - ತಂದೆ ಕಲಿಸಬೇಕು. ತಾಯಿ ಸ್ಥಾನದಲ್ಲಿಯೂ‌ ಪ್ರಿಯಾಂಕಾ ಇದಾರೆ. ಅಂಥವರು ಬಿಕನಿ‌ ಬಗ್ಗೆ ಹೇಳುವುದು ತಪ್ಪು ಹಕ್ಕು ಎಲ್ಲರಿಗೂ ಇದೆ. ಯಾವ ಯಾವ ಜಾಗಕ್ಕೆ ಏನಿರಬೇಕೋ ಅದು ಇರಬೇಕು. ಸಮುದ್ರ ದಂಡೆಯಲ್ಲಿ ಬಿಕನಿ ಹಾಕಿಕೊಂಡರೆ ಯಾರು ಕೇಳ್ತಾರೆ. ಕಾಲೇಜ್‌ಗೆ ಬಿಕನಿ ಹಾಕೊಂಡ ಹೋಗ್ರಿ ಅಂದ್ರೆ ಹೇಗೆ? ಯಾರನ್ನೊ ಓಲೈಸುವ ಕೆಲಸ ಮಾಡಬಾರದು ಎಂದು ಹೇಳಿದರು.

ಓದಿ: ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ನಾಗೇಶ್​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.