ETV Bharat / state

Santhosh Lad: ಕಾಂಗ್ರೆಸ್​ಗೆ ಡ್ಯಾಮೇಜ್​ ಮಾಡಲು ಬಿಜೆಪಿ, ಜೆಡಿಎಸ್ ಯತ್ನ- ಸಚಿವ ಸಂತೋಷ್​ ಲಾಡ್ - ಈಟಿವಿ ಭಾರತ್​ ಕನ್ನಡ ನ್ಯೂಸ್

Santhosh Lad: ಲೋಕಸಭೆ ಚುನಾವಣೆಯ ಸಲುವಾಗಿ ಕಾಂಗ್ರೆಸ್​ ಪಕ್ಷಕ್ಕೆ ಹಾನಿ ಉಂಟುಮಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿವೆ ಎಂದು ಸಚಿವ ಸಂತೋಷ್​ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸಂತೋಷ್​ ಲಾಡ್
ಸಚಿವ ಸಂತೋಷ್​ ಲಾಡ್
author img

By

Published : Aug 13, 2023, 6:35 PM IST

Updated : Aug 13, 2023, 7:04 PM IST

ಸಚಿವ ಸಂತೋಷ್​ ಲಾಡ್ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್​ ಮಾಡಲು ಮುಂದಾಗಿವೆ. ವರ್ಗಾವಣೆಗಳಾಗುವುದು ಸಹಜ, ಅವರು ಮಾಡುತ್ತಿರುವ ಆರೋಪಗಳಿಗೆ ದಾಖಲೆಗಳಿದ್ದರೆ ಕೊಡಲಿ. ರಾಜಕಾರಣಕ್ಕಾಗಿ ಹೇಳಿಕೆ ನೀಡಬಾರದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿರುಗೇಟು ಕೊಟ್ಟರು.

ನಗರದಲ್ಲಿಂದು ಮಾತನಾಡಿ, ಕೃಷಿ ಸಚಿವ ಚಲುವನಾರಾಯಣಸ್ವಾಮಿ ವಿರುದ್ದ ಲಂಚ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ಕೊಡಲಾಗಿದೆ ಎಂದರು. ಪೆಂಡ್ರೈವ್​ ಬಗ್ಗೆ ಮಾತನಾಡಿ, ಒಂದು ಸಾಕ್ಷಿಗಳನ್ನೂ ಕೊಡಲಿಲ್ಲ. ಮಾಧ್ಯಮಗಳ ಮುಂದೆ ಕೂಡ ಬಹಿರಂಗಪಡಿಸಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಜನಪರ ಕೆಲಸ ಮಾಡುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಉತ್ತಮ ಕೆಲಸಗಳನ್ನು ಮಾಡುತ್ತಿರುವ ಕಾಂಗ್ರೆಸ್​ ಪಕ್ಷಕ್ಕೆ ಹಾನಿಯುಂಟು ಮಾಡಲು ಅವರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬಾರಿಯೂ ಕೂಡ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ಆರೋಪಗಳನ್ನು ಮಾಡಿದ್ದು ವರ್ಕೌಟ್​ ಆಗಿರಲಿಲ್ಲ. ಈ ಬಾರಿಯೂ ಅದೇ ರೀತಿ ಮಾಡುತ್ತಿದ್ದು, ವರ್ಕೌಟ್​ ಆಗುವುದಿಲ್ಲ. ಜನರು ತುಂಬಾ ಹತ್ತಿರದಿಂದ ಗಮನಿಸುತ್ತಿದ್ದಾರೆ. ಮತ್ತೆ ಪಾಠ ಕಲಿಸುತ್ತಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ : ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಕೇಸ್; ಗುತ್ತಿಗೆದಾರರಿಗೆ ಕಮಿಷನ್ ಬೇಡಿಕೆ ವಿರುದ್ಧ ಬಿಜೆಪಿ ಹೋರಾಟ: ಅಶ್ವತ್ಥ್​ ನಾರಾಯಣ್

ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಲಘಟಗಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಆಧಾರರಹಿತ. ನಮ್ಮ ಕೆಲಸವನ್ನು ನೋಡಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಸಚಿವರು ಟಾಂಗ್​ ಕೊಟ್ಟರು.

ಲೋಕಸಭೆ ಚುನಾವಣೆ ಸ್ಪರ್ಧೆಗಾಗಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಸರ್ವೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಪಕ್ಷ ಎಲ್ಲ ಸ್ಥಾನಮಾನಗಳನ್ನು ಕೊಟ್ಟಿದೆ. ಕಳೆದ ಮೂರು ದಿನಗಳಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಪಕ್ಷ ಅವರನ್ನು ಎಂಎಲ್​ಸಿ ಮಾಡಿದೆ. ಉತ್ತರ ಕರ್ನಾಟಕದಲ್ಲಿ ನಮಗೆ ಶೆಟ್ಟರ್ ಅವರು ಮುಖ್ಯ ಎಂದು ಸಂತೋಷ್​ ಲಾಡ್​ ಹೇಳಿದರು.

ಇನ್ನೊಂದೆಡೆ, ಮಾಜಿ ಸಚಿವ ಅಶ್ವತ್ಥ್​ ನಾರಾಯಣ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಪ್ರಕರಣದಲ್ಲಿ ಸಂಪುಟ ಉಪಸಮಿತಿ ರಚಿಸಿ ಪ್ರಕರಣ ಸಡಿಲಿಸಿ, ಆರೋಪಿಗಳನ್ನು ಹೊರತರಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ. ಪಕ್ಷ ರಾಜಕೀಯವಾಗಿ ಹೋರಾಟ ನಡೆಸಲಿದೆ. ಅದೇ ರೀತಿ ಗುತ್ತಿಗೆದಾರರಿಂದ ಕಮಿಷನ್ ಕೇಳಿದ ಪ್ರಕರಣದಲ್ಲಿಯೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ : H Vishwanath: ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್​ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್

ಸಚಿವ ಸಂತೋಷ್​ ಲಾಡ್ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್​ ಮಾಡಲು ಮುಂದಾಗಿವೆ. ವರ್ಗಾವಣೆಗಳಾಗುವುದು ಸಹಜ, ಅವರು ಮಾಡುತ್ತಿರುವ ಆರೋಪಗಳಿಗೆ ದಾಖಲೆಗಳಿದ್ದರೆ ಕೊಡಲಿ. ರಾಜಕಾರಣಕ್ಕಾಗಿ ಹೇಳಿಕೆ ನೀಡಬಾರದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿರುಗೇಟು ಕೊಟ್ಟರು.

ನಗರದಲ್ಲಿಂದು ಮಾತನಾಡಿ, ಕೃಷಿ ಸಚಿವ ಚಲುವನಾರಾಯಣಸ್ವಾಮಿ ವಿರುದ್ದ ಲಂಚ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ಕೊಡಲಾಗಿದೆ ಎಂದರು. ಪೆಂಡ್ರೈವ್​ ಬಗ್ಗೆ ಮಾತನಾಡಿ, ಒಂದು ಸಾಕ್ಷಿಗಳನ್ನೂ ಕೊಡಲಿಲ್ಲ. ಮಾಧ್ಯಮಗಳ ಮುಂದೆ ಕೂಡ ಬಹಿರಂಗಪಡಿಸಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಜನಪರ ಕೆಲಸ ಮಾಡುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಉತ್ತಮ ಕೆಲಸಗಳನ್ನು ಮಾಡುತ್ತಿರುವ ಕಾಂಗ್ರೆಸ್​ ಪಕ್ಷಕ್ಕೆ ಹಾನಿಯುಂಟು ಮಾಡಲು ಅವರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬಾರಿಯೂ ಕೂಡ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ಆರೋಪಗಳನ್ನು ಮಾಡಿದ್ದು ವರ್ಕೌಟ್​ ಆಗಿರಲಿಲ್ಲ. ಈ ಬಾರಿಯೂ ಅದೇ ರೀತಿ ಮಾಡುತ್ತಿದ್ದು, ವರ್ಕೌಟ್​ ಆಗುವುದಿಲ್ಲ. ಜನರು ತುಂಬಾ ಹತ್ತಿರದಿಂದ ಗಮನಿಸುತ್ತಿದ್ದಾರೆ. ಮತ್ತೆ ಪಾಠ ಕಲಿಸುತ್ತಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ : ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಕೇಸ್; ಗುತ್ತಿಗೆದಾರರಿಗೆ ಕಮಿಷನ್ ಬೇಡಿಕೆ ವಿರುದ್ಧ ಬಿಜೆಪಿ ಹೋರಾಟ: ಅಶ್ವತ್ಥ್​ ನಾರಾಯಣ್

ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಲಘಟಗಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದು ಆಧಾರರಹಿತ. ನಮ್ಮ ಕೆಲಸವನ್ನು ನೋಡಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಸಚಿವರು ಟಾಂಗ್​ ಕೊಟ್ಟರು.

ಲೋಕಸಭೆ ಚುನಾವಣೆ ಸ್ಪರ್ಧೆಗಾಗಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಸರ್ವೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಪಕ್ಷ ಎಲ್ಲ ಸ್ಥಾನಮಾನಗಳನ್ನು ಕೊಟ್ಟಿದೆ. ಕಳೆದ ಮೂರು ದಿನಗಳಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಪಕ್ಷ ಅವರನ್ನು ಎಂಎಲ್​ಸಿ ಮಾಡಿದೆ. ಉತ್ತರ ಕರ್ನಾಟಕದಲ್ಲಿ ನಮಗೆ ಶೆಟ್ಟರ್ ಅವರು ಮುಖ್ಯ ಎಂದು ಸಂತೋಷ್​ ಲಾಡ್​ ಹೇಳಿದರು.

ಇನ್ನೊಂದೆಡೆ, ಮಾಜಿ ಸಚಿವ ಅಶ್ವತ್ಥ್​ ನಾರಾಯಣ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಪ್ರಕರಣದಲ್ಲಿ ಸಂಪುಟ ಉಪಸಮಿತಿ ರಚಿಸಿ ಪ್ರಕರಣ ಸಡಿಲಿಸಿ, ಆರೋಪಿಗಳನ್ನು ಹೊರತರಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ. ಪಕ್ಷ ರಾಜಕೀಯವಾಗಿ ಹೋರಾಟ ನಡೆಸಲಿದೆ. ಅದೇ ರೀತಿ ಗುತ್ತಿಗೆದಾರರಿಂದ ಕಮಿಷನ್ ಕೇಳಿದ ಪ್ರಕರಣದಲ್ಲಿಯೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ : H Vishwanath: ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್​ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್

Last Updated : Aug 13, 2023, 7:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.