ETV Bharat / state

ಹಾವೇರಿ ನೈತಿಕ ಪೊಲೀಸ್‌ಗಿರಿ ಪ್ರಕರಣವನ್ನು ಎಸ್​ಐಟಿಗೆ ವರ್ಗಾಯಿಸಲಿ: ಬೊಮ್ಮಾಯಿ

author img

By ETV Bharat Karnataka Team

Published : Jan 14, 2024, 1:12 PM IST

ಹಾವೇರಿ ನೈತಿಕ ಪೊಲೀಸ್‌ಗಿರಿ ಪ್ರಕರಣವನ್ನು ಎಸ್​ಐಟಿಗೆ ವರ್ಗಾಯಿಸುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಹುಬ್ಬಳ್ಳಿ: ಜಿಲ್ಲೆಯ ಹಾನಗಲ್ ತಾಲೂಕಿನ ಖಾಸಗಿ ಹೋಟೆಲ್​ನಲ್ಲಿ ಇತ್ತೀಚಿಗೆ ಜೋಡಿಯೊಂದರ ಮೇಲೆ ನಡೆದ ಅಮಾನವೀಯ ಹಲ್ಲೆ ಪ್ರಕರಣವನ್ನು ​ವಿಶೇಷ ತನಿಖಾ ತಂಡಕ್ಕೆ (ಎಸ್​ಐಟಿ) ವರ್ಗಾಯಿಸುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಈ ಪ್ರಕರಣವನ್ನು ಸ್ಥಳೀಯ ಪೊಲೀಸರು ಮುಚ್ಚಿಹಾಕಲು ಯತ್ನಿಸಿದ ಪ್ರಯತ್ನ ವಿಫಲವಾಗಿದೆ. ಪೊಲೀಸರು ಸಂತ್ರಸ್ತರಿಗೆ ದುಡ್ಡು ಕೊಟ್ಟು, ಆಮಿಷ ತೋರಿಸಿ ದೂರು ಹಿಂಪಡೆಯಿರಿ ಎಂದು ಒತ್ತಡ ಹೇರಿರುವುದು ಬಹಿರಂಗವಾಗಿದೆ. ಹೀಗಾಗಿ ನಾನು ತನಿಖೆಯನ್ನು ಸ್ಥಳೀಯ ಪೊಲೀಸರು ನಡೆಸುವುದು ಬೇಡ, ಎಸ್​ಐಟಿಯಿಂದ ತನಿಖೆ ಮಾಡಿಸುವಂತೆ ಒತ್ತಾಯಿಸುತ್ತಿದ್ದೇನೆ ಎಂದರು.

ಹೀಗಾಗಿ, ಸಿಎಂ ಹಾವೇರಿಗೆ ಬಂದಾಗ ಪ್ರಕರಣದ ತನಿಖೆಯನ್ನು ಎಸ್​ಐಟಿಯಿಂದ ನಡೆಸುವ ಘೋಷಣೆ ಮಾಡುವ ಭರವಸೆ ಇಟ್ಟುಕೊಂಡಿದ್ದೇನೆ. ಸಂತ್ರಸ್ತರನ್ನು ಬಿಜೆಪಿ ಭೇಟಿ ಮಾಡುತ್ತದೆ ಎಂದು ಅವರನ್ನು ಪೊಲೀಸರು ತನಿಖೆಯ ನೆಪದಲ್ಲಿ ಹಾನಗಲ್​ದಿಂದ ಶಿರಸಿಗೆ ಸ್ಥಳಾಂತರಿಸಿದ್ದಾರೆ. ಇದೆಲ್ಲ ರಾಜಕೀಯ. ಹೀಗಾಗಿ ಅವರಿಂದ ಬಹಳ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ದೂರಿದರು.

ನಾಳೆ ಹಾವೇರಿಯಲ್ಲಿ ಹಲವಾರು ಕಾರ್ಯಕ್ರಮಗಳಿವೆ. ಅದರಂತೆ ನಮ್ಮ ಕಾರ್ಯಕ್ರಮಕ್ಕೆ ನಾವು ಹೋಗುತ್ತಿದ್ದೇವೆ. ಸಿಎಂ ಅವರ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ಸಿದ್ದರಾಮಯ್ಯ ಅಯೋಧ್ಯೆ ಭೇಟಿ ವಿಷಯವಾಗಿ ಮಾತನಾಡುತ್ತಾ, ಅವರಿಗೆ ಅಯೋಧ್ಯೆಗೆ ಹೋಗಬೇಕೆಂದು ಒಳಮನಸ್ಸು ಹೇಳುತ್ತದೆ. ಆದರೆ ಪಕ್ಷದ ವರಿಷ್ಠರು ಬೇಡ ಎಂದಿರಬಹುದು. ಅದಕ್ಕಾಗಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಲೇವಡಿ ಮಾಡಿದರು.

ಇದನ್ನೂ ಓದಿ: ಹಾವೇರಿ ಘಟನೆ.. ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪ ಸರಿಯಲ್ಲ ಎಂದ ಪರಮೇಶ್ವರ್

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಹುಬ್ಬಳ್ಳಿ: ಜಿಲ್ಲೆಯ ಹಾನಗಲ್ ತಾಲೂಕಿನ ಖಾಸಗಿ ಹೋಟೆಲ್​ನಲ್ಲಿ ಇತ್ತೀಚಿಗೆ ಜೋಡಿಯೊಂದರ ಮೇಲೆ ನಡೆದ ಅಮಾನವೀಯ ಹಲ್ಲೆ ಪ್ರಕರಣವನ್ನು ​ವಿಶೇಷ ತನಿಖಾ ತಂಡಕ್ಕೆ (ಎಸ್​ಐಟಿ) ವರ್ಗಾಯಿಸುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಈ ಪ್ರಕರಣವನ್ನು ಸ್ಥಳೀಯ ಪೊಲೀಸರು ಮುಚ್ಚಿಹಾಕಲು ಯತ್ನಿಸಿದ ಪ್ರಯತ್ನ ವಿಫಲವಾಗಿದೆ. ಪೊಲೀಸರು ಸಂತ್ರಸ್ತರಿಗೆ ದುಡ್ಡು ಕೊಟ್ಟು, ಆಮಿಷ ತೋರಿಸಿ ದೂರು ಹಿಂಪಡೆಯಿರಿ ಎಂದು ಒತ್ತಡ ಹೇರಿರುವುದು ಬಹಿರಂಗವಾಗಿದೆ. ಹೀಗಾಗಿ ನಾನು ತನಿಖೆಯನ್ನು ಸ್ಥಳೀಯ ಪೊಲೀಸರು ನಡೆಸುವುದು ಬೇಡ, ಎಸ್​ಐಟಿಯಿಂದ ತನಿಖೆ ಮಾಡಿಸುವಂತೆ ಒತ್ತಾಯಿಸುತ್ತಿದ್ದೇನೆ ಎಂದರು.

ಹೀಗಾಗಿ, ಸಿಎಂ ಹಾವೇರಿಗೆ ಬಂದಾಗ ಪ್ರಕರಣದ ತನಿಖೆಯನ್ನು ಎಸ್​ಐಟಿಯಿಂದ ನಡೆಸುವ ಘೋಷಣೆ ಮಾಡುವ ಭರವಸೆ ಇಟ್ಟುಕೊಂಡಿದ್ದೇನೆ. ಸಂತ್ರಸ್ತರನ್ನು ಬಿಜೆಪಿ ಭೇಟಿ ಮಾಡುತ್ತದೆ ಎಂದು ಅವರನ್ನು ಪೊಲೀಸರು ತನಿಖೆಯ ನೆಪದಲ್ಲಿ ಹಾನಗಲ್​ದಿಂದ ಶಿರಸಿಗೆ ಸ್ಥಳಾಂತರಿಸಿದ್ದಾರೆ. ಇದೆಲ್ಲ ರಾಜಕೀಯ. ಹೀಗಾಗಿ ಅವರಿಂದ ಬಹಳ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ದೂರಿದರು.

ನಾಳೆ ಹಾವೇರಿಯಲ್ಲಿ ಹಲವಾರು ಕಾರ್ಯಕ್ರಮಗಳಿವೆ. ಅದರಂತೆ ನಮ್ಮ ಕಾರ್ಯಕ್ರಮಕ್ಕೆ ನಾವು ಹೋಗುತ್ತಿದ್ದೇವೆ. ಸಿಎಂ ಅವರ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ಸಿದ್ದರಾಮಯ್ಯ ಅಯೋಧ್ಯೆ ಭೇಟಿ ವಿಷಯವಾಗಿ ಮಾತನಾಡುತ್ತಾ, ಅವರಿಗೆ ಅಯೋಧ್ಯೆಗೆ ಹೋಗಬೇಕೆಂದು ಒಳಮನಸ್ಸು ಹೇಳುತ್ತದೆ. ಆದರೆ ಪಕ್ಷದ ವರಿಷ್ಠರು ಬೇಡ ಎಂದಿರಬಹುದು. ಅದಕ್ಕಾಗಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಲೇವಡಿ ಮಾಡಿದರು.

ಇದನ್ನೂ ಓದಿ: ಹಾವೇರಿ ಘಟನೆ.. ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪ ಸರಿಯಲ್ಲ ಎಂದ ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.