ಧಾರವಾಡ: ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋದ ಘಟನೆ ತಾಲೂಕಿನ ಮದಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ, ಹಳ್ಳಗಳು ತುಂಬಿವೆ. ಇದರಿಂದ ತಾಲೂಕಿನ ಮದಿಕೊಪ್ಪ ಗ್ರಾಮದ ಕೆರೆ ತುಂಬಿ, ನೀರು ಹೋಗಲು ನಿರ್ಮಿಸಿದ್ದ ಸೇತುವೆ ಕೂಡಾ ಕೊಚ್ಚಿ ಹೋಗಿದೆ.
ಲೋಕೋಪಯೋಗಿ ಇಲಾಖೆ 80 ಲಕ್ಷ ರೂ. ಅನುದಾನದಲ್ಲಿ ಈ ಸೇತುವೆ ನಿರ್ಮಿಸಲಾಗಿತ್ತು. ಇದರಿಂದ ಹಲವಾರು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ತಾಲೂಕಿನ ಮದಿಕೊಪ್ಪ, ರಾಮಾಪೂರ, ಹೊಸವಾಳ, ಕಲ್ಲಾಪೂರ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಇಲ್ಲವಾಗಿದೆ. ಇನ್ನೂ ರೈತರ ಜಮೀನಿಗೆ ನೀರು ನುಗ್ಗಿದ್ದು, ಬೆಳೆಗಳು ಸಹ ಹಾಳಾಗಿವೆ.