ETV Bharat / state

ಪ್ರಮೋದ ಮುತಾಲಿಕ್ ವಿರುದ್ಧ ಪೊಲೀಸ್ ಕಮೀಷನರ್​ಗೆ ದೂರು

author img

By ETV Bharat Karnataka Team

Published : Sep 22, 2023, 9:23 PM IST

ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕೆಂದು ದೂರು ನೀಡಲಾಗಿದೆ.

case-filed-against-pramod-muthalik-for-provocative-statement-in-hubbali
ಈದ್ಗಾ ಮೈದಾನದ ಗಣೇಶ ವಿಸರ್ಜನೆ ವೇಳೆ ಪ್ರಚೋದನಕಾರಿ ಹೇಳಿಕೆ: ಪ್ರಮೋದ್​ ಮುತಾಲಿಕ್​ ವಿರುದ್ಧ ಪ್ರಕರಣ ದಾಖಲು
ಪ್ರಮೋದ್​ ಮುತಾಲಿಕ್​ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು

ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್​ ಅವರಿಗೆ ದೂರು ನೀಡಿದರು.

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್​​, ಗಣೇಶ ದರ್ಶನ ಪಡೆದುಕೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವಾಗ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಮುಸ್ಲಿಂ ನಾಯಕರು ಆರೋಪಿಸಿದ್ದಾರೆ.

ಮುಖಂಡ ಅಸ್ಪಾಕ್‌ ಕುಮಟಾಕರ್ ಮಾತನಾಡಿ, ಕರ್ನಾಟಕದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ದಲಿತರು ಪರಸ್ಪರ ಪ್ರೀತಿ, ವಿಶ್ವಾಸ, ಏಕತೆಯಿಂದ ಜೀವನ ಮಾಡುತ್ತಿದ್ದೇವೆ. ಆದರೆ ಪ್ರಮೋದ್​ ಮುತಾಲಿಕ್​ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರೊಂದಿಗೆ ಬಂದು ಪೊಲೀಸ್​ ಕಮಿಷನರ್​ಗೆ ಮನವಿಯನ್ನು ಕೊಟ್ಟಿದ್ದೇವೆ. ಪ್ರಮೋದ್​ ಮುತಾಲಿಕ್​ ಅವರ ಮೇಲೆ ತಕ್ಷಣ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಈ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಶಾಂತಿ ಕದಡುವವರಿಗೆ ಯಾವುದೇ ರೀತಿಯ ಅವಕಾಶ ಕೊಡಬಾರದು. ಪ್ರಮೋದ್​ ಮುತಾಲಿಕ್ ಏನು ಯೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಾರೆ. ಇದರಿಂದ ಜನರ ಭಾವನೆಗಳಿ ಧಕ್ಕೆ ಮತ್ತು ಸಮಸ್ಯೆಗಳಾಗುತ್ತವೆ ಎಂಬ ಅವರಿಗೆ ಅರಿವಿಲ್ಲ. ಪದೇ ಪದೆ ಇಂತಹ ಹೇಳಿಕೆಗಳನ್ನು ಕೊಡುತ್ತಾ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್​ ಕಮಿಷನರ್​ ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.

ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್​ ಮಾತನಾಡಿ, ನಿನ್ನೆ(ಗುರುವಾರ) ಗಣೇಶ ವಿಸರ್ಜನೆ ವೇಳೆ ಪ್ರಮೋದ್​ ಮುತಾಲಿಕ್​ ಕೊಟ್ಟಿರುವ ಹೇಳಿಕೆ ವಿರುದ್ಧ ಜೋನಲ್​​​ ಕಮಿಷನರ್​ ಹೆಚ್​ಡಿಎಂಸಿ ದೂರು ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಸೆಕ್ಷನ್​ ಅಡಿಯಲ್ಲಿ ಎರಡು ಮತಗಳ ಮಧ್ಯ ವೈಷಮ್ಯ ಉಂಟುಮಾಡಿರುವ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಇದೇ ವೇಳೆ, ಗಾಡಿಪಾರು ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬೆಳಗಾವಿ ಗಣೇಶ ಮಂಡಳಿಗೆ 75 ವರ್ಷ... ರಕ್ತದಾನ ಮಾಡಿ ಅಮೃತ ಮಹೋತ್ಸವ ಆಚರಿಸಿದ ಭಕ್ತರು

ಪ್ರಮೋದ್​ ಮುತಾಲಿಕ್​ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು

ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್​ ಅವರಿಗೆ ದೂರು ನೀಡಿದರು.

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್​​, ಗಣೇಶ ದರ್ಶನ ಪಡೆದುಕೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವಾಗ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಮುಸ್ಲಿಂ ನಾಯಕರು ಆರೋಪಿಸಿದ್ದಾರೆ.

ಮುಖಂಡ ಅಸ್ಪಾಕ್‌ ಕುಮಟಾಕರ್ ಮಾತನಾಡಿ, ಕರ್ನಾಟಕದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ದಲಿತರು ಪರಸ್ಪರ ಪ್ರೀತಿ, ವಿಶ್ವಾಸ, ಏಕತೆಯಿಂದ ಜೀವನ ಮಾಡುತ್ತಿದ್ದೇವೆ. ಆದರೆ ಪ್ರಮೋದ್​ ಮುತಾಲಿಕ್​ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರೊಂದಿಗೆ ಬಂದು ಪೊಲೀಸ್​ ಕಮಿಷನರ್​ಗೆ ಮನವಿಯನ್ನು ಕೊಟ್ಟಿದ್ದೇವೆ. ಪ್ರಮೋದ್​ ಮುತಾಲಿಕ್​ ಅವರ ಮೇಲೆ ತಕ್ಷಣ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಈ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಶಾಂತಿ ಕದಡುವವರಿಗೆ ಯಾವುದೇ ರೀತಿಯ ಅವಕಾಶ ಕೊಡಬಾರದು. ಪ್ರಮೋದ್​ ಮುತಾಲಿಕ್ ಏನು ಯೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಾರೆ. ಇದರಿಂದ ಜನರ ಭಾವನೆಗಳಿ ಧಕ್ಕೆ ಮತ್ತು ಸಮಸ್ಯೆಗಳಾಗುತ್ತವೆ ಎಂಬ ಅವರಿಗೆ ಅರಿವಿಲ್ಲ. ಪದೇ ಪದೆ ಇಂತಹ ಹೇಳಿಕೆಗಳನ್ನು ಕೊಡುತ್ತಾ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್​ ಕಮಿಷನರ್​ ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.

ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್​ ಮಾತನಾಡಿ, ನಿನ್ನೆ(ಗುರುವಾರ) ಗಣೇಶ ವಿಸರ್ಜನೆ ವೇಳೆ ಪ್ರಮೋದ್​ ಮುತಾಲಿಕ್​ ಕೊಟ್ಟಿರುವ ಹೇಳಿಕೆ ವಿರುದ್ಧ ಜೋನಲ್​​​ ಕಮಿಷನರ್​ ಹೆಚ್​ಡಿಎಂಸಿ ದೂರು ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಸೆಕ್ಷನ್​ ಅಡಿಯಲ್ಲಿ ಎರಡು ಮತಗಳ ಮಧ್ಯ ವೈಷಮ್ಯ ಉಂಟುಮಾಡಿರುವ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಇದೇ ವೇಳೆ, ಗಾಡಿಪಾರು ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬೆಳಗಾವಿ ಗಣೇಶ ಮಂಡಳಿಗೆ 75 ವರ್ಷ... ರಕ್ತದಾನ ಮಾಡಿ ಅಮೃತ ಮಹೋತ್ಸವ ಆಚರಿಸಿದ ಭಕ್ತರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.