ETV Bharat / state

ಪಾಲಿಕೆ ಅಧಿಕಾರಿಗಳ ಕಿರುಕುಳದಿಂದ ಪೌರ ಕಾರ್ಮಿಕ ಆತ್ಮಹತ್ಯೆ: ಕಾರ್ಮಿಕ ಸಂಘಟನೆ ಆರೋಪ

author img

By

Published : Jul 3, 2019, 1:38 PM IST

ಧಾರವಾಡ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಗುತ್ತಿಗೆ ಪೌರ ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇರ ವೇತನಕ್ಕಾಗಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಹ ನೇರ ವೇತನ ಜಾರಿಯಾಗಿರಲಿಲ್ಲ ಎನ್ನಲಾಗ್ತಿದೆ. ಅಧಿಕಾರಿಗಳ ಕಿರುಕುಳವೇ ಪೌರಕಾರ್ಮಿಕನ ಆತ್ಮಹತ್ಯೆಗೆ ಕಾರಣವೆಂದು ಪೌರ ಕಾರ್ಮಿಕ ಸಂಘಟನೆ ಅಧ್ಯಕ್ಷ ಆರೋಪಿಸಿದ್ದಾರೆ.

ಪೌರ ಕಾರ್ಮಿಕ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ತಾರತಮ್ಯ ನೀತಿ ಹಾಗೂ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಪ್ರಕರಣ ಬ್ರೂಸ್​ಪೇಟೆಯಲ್ಲಿ ನಡೆದಿದೆ.‌

ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆಗೆ ಶರಣಾಗಿರುವ ಪೌರ ಕಾರ್ಮಿಕ. ಮೃತ ಕಲ್ಲಪ್ಪ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ನೇರ ವೇತನಕ್ಕಾಗಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಹ ಅದು ಜಾರಿಯಾಗಿರಲಿಲ್ಲ ಎನ್ನಲಾಗ್ತಿದೆ. ಕಳೆದ ವಾರ ನೇರ ವೇತನಕ್ಕೆ ಆಗ್ರಹಿಸಿ ಇನ್ನೋರ್ವ ಪೌರ ಕಾರ್ಮಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಸಹ ಮಾಡಿದ್ದ. ಆದರೆ ಟ್ವೀಟ್​​ಗೆ ಪೂರಕ‌ ಸ್ಪಂದನೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಪೌರ ಕಾರ್ಮಿಕ ಆತ್ಮಹತ್ಯೆ, ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

ಕಾರ್ಮಿಕನ ಅಗಲಿಕೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಪಾಲಿಕೆಯ ನೀತಿಗೆ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ. ಶವಗಾರದ ಮುಂದೆ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕ ಕಲ್ಲಪ್ಪ ಆತ್ಮಹತ್ಯೆಗೆ ಪಾಲಿಕೆ ನೇರ ಹೊಣೆ ಎಂದು ಆರೋಪಿಸಿರುವ ಪೌರ ಕಾರ್ಮಿಕ ಸಂಘಟನೆ ಅಧ್ಯಕ್ಷ ಬಸಪ್ಪ ಮಾದರ್​ ಅವರು ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಸಿಗೋವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಚ್ಚರಿಕೆ ನೀಡಿದ್ದಾರೆ. ಈ‌ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ತಾರತಮ್ಯ ನೀತಿ ಹಾಗೂ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಪ್ರಕರಣ ಬ್ರೂಸ್​ಪೇಟೆಯಲ್ಲಿ ನಡೆದಿದೆ.‌

ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆಗೆ ಶರಣಾಗಿರುವ ಪೌರ ಕಾರ್ಮಿಕ. ಮೃತ ಕಲ್ಲಪ್ಪ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ನೇರ ವೇತನಕ್ಕಾಗಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಹ ಅದು ಜಾರಿಯಾಗಿರಲಿಲ್ಲ ಎನ್ನಲಾಗ್ತಿದೆ. ಕಳೆದ ವಾರ ನೇರ ವೇತನಕ್ಕೆ ಆಗ್ರಹಿಸಿ ಇನ್ನೋರ್ವ ಪೌರ ಕಾರ್ಮಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಸಹ ಮಾಡಿದ್ದ. ಆದರೆ ಟ್ವೀಟ್​​ಗೆ ಪೂರಕ‌ ಸ್ಪಂದನೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಪೌರ ಕಾರ್ಮಿಕ ಆತ್ಮಹತ್ಯೆ, ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

ಕಾರ್ಮಿಕನ ಅಗಲಿಕೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಪಾಲಿಕೆಯ ನೀತಿಗೆ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ. ಶವಗಾರದ ಮುಂದೆ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕ ಕಲ್ಲಪ್ಪ ಆತ್ಮಹತ್ಯೆಗೆ ಪಾಲಿಕೆ ನೇರ ಹೊಣೆ ಎಂದು ಆರೋಪಿಸಿರುವ ಪೌರ ಕಾರ್ಮಿಕ ಸಂಘಟನೆ ಅಧ್ಯಕ್ಷ ಬಸಪ್ಪ ಮಾದರ್​ ಅವರು ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಸಿಗೋವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಚ್ಚರಿಕೆ ನೀಡಿದ್ದಾರೆ. ಈ‌ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳಿBody:ಸ್ಲಗ್: ಪೌರ ಕಾರ್ಮಿಕ ಆತ್ಮಹತ್ಯೆ... ಆತ್ಮಹತ್ಯೆಗೆ ಪಾಲಿಕೆ ಅಧಿಕಾರಿಗಳ ಕಿರುಕುಳದ ಆರೋಪ.


ಹುಬ್ಬಳ್ಳಿ: ಹು- ಧಾ ಮಹಾನಗರ ಪಾಲಿಕೆಯ ತಾರತಮ್ಯ ನೀತಿ ಹಾಗೂ ಕಿರುಕುಳದಿಂದ ಬೇಸತ್ತು ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೂಸಪೇಟೆಯಲ್ಲಿ ನಡೆದಿದೆ.‌
ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕ.
ಮೃತ ಕಲ್ಲಪ್ಪ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ನೇರ ವೇತನಕ್ಕಾಗಿ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಹ ನೇರ ವೇತನ ಜಾರಿಯಾಗಿರಲಿಲ್ಲ. ಕಳೆದ ವಾರ ನೇರ ವೇತನಕ್ಕೆ ಆಗ್ರಹಿಸಿ ಇನ್ನೊಬ್ಬ ಪೌರ ಕಾರ್ಮಿಕ ಪ್ರಧಾನ ಮಂತ್ರಿಗಳಿಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಸಹ ಮಾಡಿದ್ದ. ಆದರೆ ಟ್ವೀಟ್ ಗೆ ಪೂರಕ‌ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಇಂದು ಕಲ್ಲಪ್ಪ ಎಂಬ ಪೌರ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಪಾಲಿಕೆಯ ನೀತಿಗೆ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.
ಪೌರ ಕಾರ್ಮಿಕರಿಂದ ಶವಗಾರದ ಮುಂದೆ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಿದ್ರು.ಪೌರ ಕಾರ್ಮಿಕ ಕಲ್ಲಪ್ಪ ಅಣ್ಣಿಗೇರಿ ಆತ್ಮಹತ್ಯೆಗೆ ಪಾಲಿಕೆ ನೇರ ಹೊಣೆ ಎಂದು ಹಾಗೂ ಅವರಿಗೆ ನ್ಯಾಯ ಸಿಗಿವವರೆಗೂ ನಾವೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಹಾಗೂ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತೇ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು..
ಈ‌ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಟ್:- ಬಸಪ್ಪ ಮಾದರ ಪೌರ ಕಾರ್ಮಿಕ ಸಂಘದ ಅಧ್ಯಕ್ಷ.

ಬೈಟ್:- ರಾಧಮ್ಮಾ ಕಲ್ಲಪ್ಪ ಅಣ್ಣಿಗೇರಿ ಸಂಬಂಧಿಕರು.

_________________________


ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.