ETV Bharat / state

ರೈತರ ಅನುಕೂಲಕ್ಕಾಗಿ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ: ಸಿಎಂ - ಧಾರವಾಡದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

ಬಿಬಿಎಂಪಿಯಲ್ಲಿ ಅವ್ಯವಹಾರ ವಿಚಾರವಾಗಿ 6 ತಿಂಗಳಲ್ಲಿ ವರದಿ ನೀಡಲು ಹೈಕೋರ್ಟ್ ಆದೇಶ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೆ, ರೈತರ ಅನುಕೂಲಕ್ಕಾಗಿ 1 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಇದೇ ವೇಳೆ ಘೋಷಿಸಿದರು.

CM yadiyurappa speech in Dharwad , ಧಾರವಾಡದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ,
ಸಿಎಂ ಬಿಎಸ್​ವೈ ಹೇಳಿಕೆ
author img

By

Published : Dec 18, 2019, 8:09 PM IST

ಧಾರವಾಡ: ಬಿಬಿಎಂಪಿಯಲ್ಲಿ ಅವ್ಯವಹಾರ ವಿಚಾರವಾಗಿ 6 ತಿಂಗಳಲ್ಲಿ ವರದಿ ನೀಡಲು ಹೈಕೋರ್ಟ್ ಆದೇಶ ನೀಡಿದೆ ಎಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ಜಿಲ್ಲೆಯ‌ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಆಯೋಜಿಸಿದ್ದ ಮಲಪ್ರಭಾ ಮುಖ್ಯ ಕಾಲುವೆ ಹಂಚು ಮತ್ತು ಉಪಹಂಚು ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಿದ್ರು.

ಸಿಎಂ ಬಿಎಸ್​ವೈ ಹೇಳಿಕೆ

ಬಳಿಕ ಮಾತನಾಡಿ, ಬಿಬಿಎಂಪಿಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 6 ತಿಂಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ನೀವೆಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೀರಿ ಅನ್ನೋದನ್ನು ಇದೀಗ ನಾವು ನೋಡಬೇಕಿದೆ. ಮಲಪ್ರಭಾ ಕಾಲುವೆ ದುರಸ್ತಿಗೆ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಹದಾಯಿ ವಿಷಯದ ಕುರಿತು ಮಾತನಾಡಿದ ಸಿಎಂ ಅವರು, ಮಹದಾಯಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಮಹದಾಯಿ ಕಳಸಾ ಬಂಡೂರಿ ಬಗ್ಗೆ ಕಾಳಜಿಯಿದೆ ಎಂದರು.

ನೇಗಿಲು ನೀಡಿ ಸನ್ಮಾನ:

ಕಾರ್ಯಕ್ರಮದ ವೇದಿಕೆ ಮೇಲೇರಿದ ಮಹದಾಯಿ ಹೋರಾಟಗಾರರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನೇಗಿಲು ನೀಡಿ ಸನ್ಮಾನಿಸಿದರು. ಬಳಿಕ ಮಹದಾಯಿ ಹೋರಾಟಗಾರರಿಂದ ಮುಖ್ಯಮಂತ್ರಿ ಮನವಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಸಿ.ಸಿ. ಪಾಟೀಲ್, ಶಾಸಕರಾದ ಕಳಕಪ್ಪ ಬಂಡಿ, ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ ಸೇರಿದಂತೆ ಬಿಜೆಪಿ‌ ಮುಖಂಡರು ಉಪಸ್ಥಿತರಿದ್ದರು.

ಧಾರವಾಡ: ಬಿಬಿಎಂಪಿಯಲ್ಲಿ ಅವ್ಯವಹಾರ ವಿಚಾರವಾಗಿ 6 ತಿಂಗಳಲ್ಲಿ ವರದಿ ನೀಡಲು ಹೈಕೋರ್ಟ್ ಆದೇಶ ನೀಡಿದೆ ಎಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ಜಿಲ್ಲೆಯ‌ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಆಯೋಜಿಸಿದ್ದ ಮಲಪ್ರಭಾ ಮುಖ್ಯ ಕಾಲುವೆ ಹಂಚು ಮತ್ತು ಉಪಹಂಚು ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಿದ್ರು.

ಸಿಎಂ ಬಿಎಸ್​ವೈ ಹೇಳಿಕೆ

ಬಳಿಕ ಮಾತನಾಡಿ, ಬಿಬಿಎಂಪಿಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 6 ತಿಂಗಳಲ್ಲಿ ವರದಿ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ನೀವೆಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೀರಿ ಅನ್ನೋದನ್ನು ಇದೀಗ ನಾವು ನೋಡಬೇಕಿದೆ. ಮಲಪ್ರಭಾ ಕಾಲುವೆ ದುರಸ್ತಿಗೆ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಹದಾಯಿ ವಿಷಯದ ಕುರಿತು ಮಾತನಾಡಿದ ಸಿಎಂ ಅವರು, ಮಹದಾಯಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಮಹದಾಯಿ ಕಳಸಾ ಬಂಡೂರಿ ಬಗ್ಗೆ ಕಾಳಜಿಯಿದೆ ಎಂದರು.

ನೇಗಿಲು ನೀಡಿ ಸನ್ಮಾನ:

ಕಾರ್ಯಕ್ರಮದ ವೇದಿಕೆ ಮೇಲೇರಿದ ಮಹದಾಯಿ ಹೋರಾಟಗಾರರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನೇಗಿಲು ನೀಡಿ ಸನ್ಮಾನಿಸಿದರು. ಬಳಿಕ ಮಹದಾಯಿ ಹೋರಾಟಗಾರರಿಂದ ಮುಖ್ಯಮಂತ್ರಿ ಮನವಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಸಿ.ಸಿ. ಪಾಟೀಲ್, ಶಾಸಕರಾದ ಕಳಕಪ್ಪ ಬಂಡಿ, ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ ಸೇರಿದಂತೆ ಬಿಜೆಪಿ‌ ಮುಖಂಡರು ಉಪಸ್ಥಿತರಿದ್ದರು.

Intro:ಧಾರವಾಡ: ರೈತರಿಗೆ ಅನುಕೂಲವಾಗಲು ೧ ಸಾವಿರ ಕೋಟಿ ಬಿಡುಗಡೆಯಾಗಿದೆ. ಜನರ ಅಪೇಕ್ಷೆ ತುಂಬಾನೇ ಇದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ. ಒಂದು ಹನಿ ನೀರು ವ್ಯರ್ಥವಾಗದಿರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ‌ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಆಯೋಜಿಸಿದ್ದ ಮಲಪ್ರಭಾ ಮುಖ್ಯ ಕಾಲುವೆ ಹಂಚು ಮತ್ತು ಉಪಹಂಚು ಎರಡನೇ ಹಂತದ ಆಧುನೀಕರಣ ಕಾಮಗಾರಿ ಚಾಲನೆ ನೀಡಿ ಮಾತನಾಡಿದರು.

ಬಿಬಿಎಂಪಿಯಲ್ಲಿ ಅವ್ಯವಹಾರ ವಿಚಾರ
ಆರು ತಿಂಗಳಲ್ಲಿ ವರದಿ ನೀಡಲು ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಆದೇಶ ಪ್ರಸ್ತಾಪ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ನೀವು ಎಷ್ಟು ಪ್ರಮಾಣಿಕವಾಗಿ ಕೆಲಸ ಮಾಡುತ್ತೀರಿ?
ಅದನ್ನು ಇದೀಗ ನಾವು ನೋಡಬೇಕಿದೆ. ಒಂದು ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಮಲಪ್ರಭಾ ಕಾಲುವೆ ದುರಸ್ತಿಗೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಲಿ
ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಇನ್ನೂ‌ ಮಹದಾಯಿ ವಿಷಯದ ಕುರಿತು ಮಾತನಾಡಿದ ಅವರು, ಮಹದಾಯಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಮಹದಾಯಿ ಕಳಸಾ ಬಂಡೂರಿ ಬಗ್ಗೆ ಕಾಳಜಿಯಿದೆ ಎಂದರು.

ಸಮಾರಂಭ ನಡೆಯುವಾಗಲೇ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ಅಮಿತ್ ಶಾ. ಜ. 2 ರಂದು ರಾಜ್ಯದ ಯಾವ ಭಾಗದಲ್ಲಿ ರೈತ ಸಮಾವೇಶ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ಬರಲಿದ್ದಾರೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.Body:ಕಾರ್ಯಕ್ರಮದ ವೇದಿಕೆ ಮೇಲೆರಿದ ಮಹದಾಯಿ ಹೋರಾಟಗಾರರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನೇಗಿಲು ನೀಡಿ ಸನ್ಮಾನಿಸಿದರು. ಬಳಿಕ ಮಹದಾಯಿ ಹೋರಾಟಗಾರರಿಂದ ಮುಖ್ಯಮಂತ್ರಿ ಮನವಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಸಿ.ಸಿ. ಪಾಟೀಲ್, ಶಾಸಕರಾದ ಕಳಕಪ್ಪ ಬಂಡಿ, ಅಮೃತ ದೇಸಾಯಿ, ಸಿ.ಎಂ ನಿಂಬಣ್ಣವರ ಸೇರಿದಂತೆ ಬಿಜೆಪಿ‌ ಮುಖಂಡರು ಭಾಗವಹಿಸಿದ್ದರು...

ಬೈಟ್: ಬಿ‌.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.