ETV Bharat / state

ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿದೆ ಅಪರಾಧ; ಪೊಲೀಸ್ ಸಿಬ್ಬಂದಿಗೆ ಆಯುಕ್ತರಿಂದ ಬಿಸಿ

author img

By

Published : Sep 22, 2019, 2:13 PM IST

ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಅಪರಾಧ ಕೃತ್ಯಗಳಿಂದ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಜೋರಾಗಿ ಕೇಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಯುಕ್ತರು ಪೊಲೀಸ್ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಆಯುಕ್ತ ಆರ್. ದಿಲೀಪ್​ ನೋಟಿಸ್

ಹುಬ್ಬಳ್ಳಿ: ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಹುಬ್ಬಲ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, 30 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.

ಪೊಲೀಸ್ ಆಯುಕ್ತ ಆರ್. ದಿಲೀಪ್​

ಕಳೆದ ಕೆಲ ದಿನಗಳಿಂದ ಅವಳಿನಗರದಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು​ ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಆರ್ ದಿಲೀಪ್ ನೋಟಿಸ್ ಜಾರಿ ಮಾಡಿದ್ದಾರೆ.

ಡಿಸಿಪಿ ಶಿವಕುಮಾರ್ (ಕ್ರೈಂ ಮತ್ತು ಟ್ರಾಫಿಕ್ ನಿಯಂತ್ರಣ ವಿಭಾಗ) ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೆ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಅವಳಿ ನಗರದಲ್ಲಿ ಕಳೆದೊಂದು ವಾರದಲ್ಲಿ 8 ಕ್ಕೂ ಹೆಚ್ಚು ಚಾಕು ಇರಿತ, 3 ಕೊಲೆ ಪ್ರಕರಣಗಳು ನಡೆದಿದ್ದು, ನಿನ್ನೆ(ಶನಿವಾರ) ಶೂಟೌಟ್ ಘಟನೆ ಹಿನ್ನೆಲೆಯಲ್ಲಿ ಕೆಳ ಹಂತದ ಅಧಿಕಾರಿಗಳ‌ಿಗೂ ಆಯುಕ್ತರು ಬಿಸಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿ: ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಹುಬ್ಬಲ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, 30 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.

ಪೊಲೀಸ್ ಆಯುಕ್ತ ಆರ್. ದಿಲೀಪ್​

ಕಳೆದ ಕೆಲ ದಿನಗಳಿಂದ ಅವಳಿನಗರದಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು​ ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಆರ್ ದಿಲೀಪ್ ನೋಟಿಸ್ ಜಾರಿ ಮಾಡಿದ್ದಾರೆ.

ಡಿಸಿಪಿ ಶಿವಕುಮಾರ್ (ಕ್ರೈಂ ಮತ್ತು ಟ್ರಾಫಿಕ್ ನಿಯಂತ್ರಣ ವಿಭಾಗ) ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೆ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಅವಳಿ ನಗರದಲ್ಲಿ ಕಳೆದೊಂದು ವಾರದಲ್ಲಿ 8 ಕ್ಕೂ ಹೆಚ್ಚು ಚಾಕು ಇರಿತ, 3 ಕೊಲೆ ಪ್ರಕರಣಗಳು ನಡೆದಿದ್ದು, ನಿನ್ನೆ(ಶನಿವಾರ) ಶೂಟೌಟ್ ಘಟನೆ ಹಿನ್ನೆಲೆಯಲ್ಲಿ ಕೆಳ ಹಂತದ ಅಧಿಕಾರಿಗಳ‌ಿಗೂ ಆಯುಕ್ತರು ಬಿಸಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.

Intro:ಹುಬ್ಬಳ್ಳಿ-02
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪೊಲೀಸ್ ಆಯುಕ್ತರಾದ ಆರ್.ದಿಲೀಫ್ 30 ಕ್ಕೂ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.
ಕಳೆದ ದಿನಗಳಿಂದ ಅವಳಿನಗರದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕ್ರೈಂ ತಡೆಗಟ್ಟುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ.
ಡಿಸಿಪಿ ಕ್ರೈಂ & ಟ್ರಾಫಿಕ್ ಶಿವಕುಮಾರ್ ಸೇರಿದಂತೆ 10 ಕ್ಕೂ ಹೆಚ್ಚು ಇನ್ಸ್ ಪೆಕ್ಟರ್,ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿ ಶಾಕ್ ನೀಡಿದ್ದಾರೆ.
ಕಳೆದ ಒಂದು ವಾರದಲ್ಲಿ 8 ಕ್ಕೂ ಹೆಚ್ಚು ಚಾಕು ಇರಿತ ಮೂರು ಮರ್ಡರ್ ನಿನ್ನೆ ಶೂಟೌಟ್ ಆದ ಹಿನ್ನೆಲೆಯಲ್ಲಿ ಕೆಳ ಹಂತದ ಅಧಿಕಾರಿಗಳ‌ ಮೇಲೆಯೂ ಕೂಡ ಕಮೀಷನರ್ ಗರಂ ಆಗಿದ್ದಾರೆ.

Body:Commissaner file video

H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.